nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ರಾಜ್‌ ಕುಮಾರ್: ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿ–ಜ್ಯೋತಿಗಣೇಶ್ ಬಣ್ಣನೆ
    ತುಮಕೂರು April 25, 2025

    ಡಾ.ರಾಜ್‌ ಕುಮಾರ್: ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿ–ಜ್ಯೋತಿಗಣೇಶ್ ಬಣ್ಣನೆ

    By adminApril 25, 2025No Comments3 Mins Read

    ತುಮಕೂರು:   ವರನಟ, ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು ತಮ್ಮ ಅಮೋಘ ನಟನೆ, ಗಾಯನದ ಮೂಲಕ ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರೆಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬಣ್ಣಿಸಿದರು.

    ನಗರದ ಕನ್ನಡ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಡಾ.ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಡಾ: ರಾಜ್ ಕುಮಾರ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ “ರಾಜರಸ” ಸಂಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಡಾ: ರಾಜ್ ಅವರು ಅಭಿನಯಿಸದ ಪಾತ್ರಗಳಿಲ್ಲ. ಕರ್ನಾಟಕದಲ್ಲಿ ಡಾ.ರಾಜ್‌ಕುಮಾರ್ ಎಂದರೆ ಅಣ್ಣಾವ್ರು ಎಂದೇ ಪ್ರಸಿದ್ಧಿ. ಅವರ ಚಿತ್ರಗಳು ಇಡೀ ಕುಟುಂಬ ಒಟ್ಟಿಗೇ ಕುಳಿತು ವೀಕ್ಷಿಸುವಂತಹದಾಗಿದ್ದವು. ಅವರು ನಟಿಸಿರುವ ಚಿತ್ರದ ಗೀತೆಗಳ ಸಾಹಿತ್ಯ ಅರ್ಥಪೂರ್ಣವಾಗಿರುತ್ತಿದ್ದವು. ಅಣ್ಣಾವ್ರ ನಟನೆ ಹಾಗೂ ಗಾಯನಕ್ಕೆ ಅವರೇ ಸಾಟಿಯಾಗಿದ್ದರು ಎಂದು ತಿಳಿಸಿದರು.

    ರಾಜ್‌ಕುಮಾರ್ ಅವರು ಗೋಕಾಕ್ ಚಳುವಳಿಯ ನೇತೃತ್ವವಹಿಸುವ ಮೂಲಕ ಕನ್ನಡ ನಾಡು–ನುಡಿಯ ಏಳಿಗೆಗಾಗಿ ಹೋರಾಟ ಮಾಡಿದ ಅಪ್ಪಟ ಕನ್ನಡಿಗರಾಗಿದ್ದರು. ಕನ್ನಡ ಹೊರತುಪಡಿಸಿ ಇತರೆ ಯಾವುದೇ ಭಾಷೆಗಳಲ್ಲಿ ನಟಿಸದೆ ಕನ್ನಡಿಗರಿಗೆ ಮಾದರಿಯಾಗಿದ್ದರು. ಕನ್ನಡ ನಾಡು-ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಡಾ.ರಾಜ್‌ಕುಮಾರ್ ಜಯಂತಿಯು ಇಂದಿನ ಯುವಕರಿಗೆ ದಾರಿ ದೀಪವಾಗಬೇಕೆಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಡಾ.ರಾಜ್‌ಕುಮಾರ್ ಅವರು ಸರಳ ಹಾಗೂ ಮೇರು ವ್ಯಕ್ತಿತ್ವ ಹೊಂದಿದ್ದರು. ಹೆಚ್ಚೇನು ವ್ಯಾಸಂಗ ಮಾಡದಿದ್ದರೂ ತಮ್ಮ ನಿರರ್ಗಳ ಕನ್ನಡದ ಮಾತುಗಳಿಂದ ವಾಗ್ದೇವಿ ಪುತ್ರರೆನಿಸಿಕೊಂಡಿದ್ದರಲ್ಲದೆ ಕನ್ನಡಾಭಿಮಾನದಿಂದ ರಾಷ್ಟçದ ಗಮನ ಸೆಳೆದಿದ್ದರು ಎಂದು ತಿಳಿಸಿದರು.

    ರಾಜ್ ಅವರ ಚಲನಚಿತ್ರ ಪಯಣ ತುಮಕೂರಿನ ಗುಬ್ಬಿ ವೀರಣ್ಣ ನಾಟಕ ಕಂಪನಿಯಿಂದ ಪ್ರಾರಂಭವಾಯಿತೆಂದು ಹೇಳಲು ಹೆಮ್ಮೆಯಾಗುತ್ತದೆ. ತಮ್ಮ ಕಲೆ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ್ದರು. ದಾದಾ ಸಾಹೇಬ್ ಫಾಲ್ಕೆ, ಪದ್ಮಭೂಷಣದಂತಹ ಹಲವಾರು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು. ನಟನೆಯಲ್ಲದೆ ಸಂಗೀತ ಕ್ಷೇತ್ರದಲ್ಲಿಯೂ ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಅವರನ್ನು ಅರಸಿಕೊಂಡು ಬಂದಿದ್ದವು. ರಾಷ್ಟ್ರದಲ್ಲಿ ತ್ರಿಭಾಷಾ ನೀತಿ ಘೋಷಣೆಯಾದ ಸಂದರ್ಭದಲ್ಲಿ ಗೋಕಾಕ್ ಚಳುವಳಿ ಮೂಲಕ ಆಯಾ ಪ್ರಾದೇಶಿಕ ಭಾಷೆಯೇ ಮಾತೃಭಾಷೆಯಾಗಬೇಕೆಂದು ಹೋರಾಟ ನಡೆಸಿ ಕನ್ನಡಿಗರಿಗೆ ಪ್ರೇರಕ ಶಕ್ತಿಯಾಗಿದ್ದರೆಂದು ಡಾ.ರಾಜ್ ಅವರ ಸಾಧನೆಗಳ ಬಗ್ಗೆ ಹಾಡಿ ಹೊಗಳಿದರು.

    ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಮಾತನಾಡಿ, ಡಾ.ರಾಜ್ ಅವರು ಸ್ವಯಂ ಸಾಧಕ. ಯಾವುದೇ ಬೆಂಬಲವಿಲ್ಲದೆ ತಮ್ಮ ಕಠಿಣ ಶ್ರಮದಿಂದ ಉನ್ನತ ಸ್ಥಾನಕ್ಕೇರಿ ಕನ್ನಡಿಗರ ಜನಮಾನಸದಲ್ಲಿ ಉಳಿದಿದ್ದಾರೆ. ಸಂಗೀತ ಹಾಗೂ ನಟನೆಯನ್ನು ಜೊತೆ ಜೊತೆಗೆ ತೊಡಗಿಸಿಕೊಂಡ ಬಹುಮುಖ ಪ್ರತಿಭೆ ಹೊಂದಿರುವ ಕನ್ನಡಿಗರಲ್ಲಿ ಇವರು ಅಗ್ರಗಣ್ಯರು. ಇವರ ಚಲನಚಿತ್ರಗಳು ಉತ್ತಮ ಸಾಮಾಜಿಕ ಸಂದೇಶವನ್ನು ಹೊಂದಿರುತ್ತಿದ್ದವು. ಇವರ ಅಭಿನಯದ 200ಕ್ಕೂ ಹೆಚ್ಚು ಚಿತ್ರಗಳು ಸಮಾನತೆ, ಜೀತ ಮುಕ್ತ, ಶಿಕ್ಷಣದ ಮಹತ್ವ, ನಾಡು–ನುಡಿ, ಭಕ್ತಿ ಪ್ರಧಾನದಂತಹ ವಿಷಯ ವಸ್ತುಗಳಿಂದ ಕೂಡಿರುತ್ತಿದ್ದವು. ರಾಜ್ ಅವರ ಸಿನಿಮಾಗಳಿಂದ ಜನರಲ್ಲಿ ಸಕಾರಾತ್ಮಕ ಬದಲಾವಣೆ ಕಾಣಬಹುದಾಗಿತ್ತು ಎಂದು ತಿಳಿಸಿದರು.

    ಕೇಂದ್ರ ಸಂಗೀತ ನಾಟಕ ಅಕಾಡೆಮಿ ರಾಷ್ಟç ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣ್ ದಾಸ್ ಮಾತನಾಡಿ, ಡಾ.ರಾಜ್‌ ಕುಮಾರ್ ಅವರು ಗುಬ್ಬಿ ವೀರಣ್ಣ ನಾಟಕ ಕಂಪನಿಯಲ್ಲಿ ದೀರ್ಘ ಕಾಲ ನಾಟಕಗಳಲ್ಲಿ ಅಭಿನಯಿಸಿದ ನಂತರ ಚಿತ್ರರಂಗಕ್ಕೆ ಪ್ರವೇಶಿಸಿದರು. ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ಮೊದಲ ಅವಕಾಶ ಪಡೆದರು. ರಾಜ್‌ಕುಮಾರ್ ಅವರು 220 ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಡಾ: ರಾಜ್‌ಕುಮಾರ್ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳನ್ನು ಪಡೆದುಕೊಂಡು ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರೆನಿಸಿಕೊಂಡಿದ್ದರು ಎಂದು ತಿಳಿಸಿದರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಕಾರ್ಯಕ್ರಮವನ್ನು ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ರಾಜ್ ಕುಮಾರ್ ಅವರ ಸರಳ–ಸಜ್ಜನಿಕೆ ಹಾಗೂ ಮೇರು ವ್ಯಕ್ತಿತ್ವ, ನಟನೆ, ಗಾಯನ, ಭಾಷಾಭಿಮಾನ, ಸಮಯ ಪಾಲನೆ, ಸೌಜನ್ಯತೆ, ಸಿನಿಪಯಣ, ಸಹ ನಟರೊಂದಿಗೆ ಸ್ನೇಹಭಾವಗಳ ಬಗ್ಗೆ ಪರಿಚಯಿಸಿದರು.

    ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಕೆ.ರಾಜಶೇಖರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ಧಲಿಂಗಪ್ಪ, ಸರಿಗಮಪ ಖ್ಯಾತಿ ಡಾ.ಶ್ರಾವ್ಯ, ವಾರ್ತಾ ಇಲಾಖೆಯ ಆರ್. ರೂಪಕಲಾ ಹಾಜರಿದ್ದರು.

    ಡಾ.ರಾಜ್‌ಕುಮಾರ್ ಅಭಿನಯದ ಚಲನಚಿತ್ರ ಗೀತ ಗಾಯನದ ರಾಜರಸ ಸಂಗೀತ ಕಾರ್ಯಕ್ರಮದಲ್ಲಿ ಸೂರಜ್ ಅವರ ‘ಹೃದಯ ಸಮುದ್ರ ಕಲಕಿ–ಹೊತ್ತಿದೆ ದೇಶದ ಬೆಂಕಿ’, ಮಲ್ಲಸಂದ್ರ ಪಂಚಾಯತಿ ಅಧ್ಯಕ್ಷೆ ರತ್ನಮ್ಮ ಅವರ ‘ಬಾಳ ಬಂಗಾರ ನೀನು-ಹಣೆಯ ಸಿಂಗಾರ ನೀನು’, ಎಸ್. ಸಿದ್ದೇಶ್ ಅವರ ‘ನಾವಾಡುವ ನುಡಿಯೇ ಕನ್ನಡ ನುಡಿ’, ಸೂರಜ್ ಹಾಗೂ ಚಂದನ ಅವರ ‘ಜೀವ ಹೂವಾಗಿದೆ-ಭಾವ ಜೇನಾಗಿದೆ’ ಗೀತೆಗಳು ಕೇಳುಗರ ಮನ ತಣಿಸಿದರು. ಚಿಣ್ಣರು ಹೆಜ್ಜೆ ಹಾಕಿದ ರಾಜ್ ಗೀತೆಗಳ ರೀಮಿಕ್ಸ್ ಹಾಡುಗಳು ನೋಡುಗರ ಕಣ್ಮನ ಸೆಳೆದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.