nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    April 24, 2026

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    • ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ
    • SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು
    • ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    ರಾಜ್ಯ ಸುದ್ದಿ April 24, 2026

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    By adminApril 24, 2026No Comments2 Mins Read
    dr rajkumar

    ಬಳ್ಳಾರಿ:  ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ.ರಾಜ್‌ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಅಭೂತ ಗೌರವ ನಮನ ಸಲ್ಲಿಸಿದರು.

    ಈ ವೇಳೆ ಡಾ.ಬಾಬು ಜಗಜೀವನ್‌ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ರಾಜ್‌ ಕುಮಾರ್ ಅವರು ಅಪ್ಪಟ ಕನ್ನಡಪ್ರೇಮಿಯಾಗಿದ್ದರು. ಅವರ ಸಾಧನೆ ಹಾಗೂ ಕನ್ನಡ ನಾಡು–ನುಡಿಗೆ ಅವರು ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿಯಲ್ಲಿ ಡಾ.ರಾಜ್ ಅವರ ಪಾತ್ರ ಅವಿಸ್ಮರಣೀಯ. ಅವರ ನಾಯಕತ್ವದಲ್ಲಿ ನಡೆದ ಈ ಹೋರಾಟ ಕನ್ನಡ ಭಾಷೆಯ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ ಎಂದು ಹೇಳಿದರು.


    Provided by
    Provided by

    ಡಾ.ರಾಜ್ ಕುಮಾರ್ ಅವರು ಅಂದಿನ ಕಾಲದ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರು ಕೇವಲ ಒಂದು ಗಂಟೆಯ ಕಾಲ ತಮ್ಮ ಸಿನಿಮಾದಲ್ಲಿ ನಟಿಸಲು ಕೇಳಿಕೊಂಡಾಗಲೂ, ನಾನು ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ನಟಿಸುವುದಿಲ್ಲ ಎಂದು ಖಡಾಖಂಡಿತವಾಗಿ ನಿರಾಕರಿಸಿದ ಅವರ ಬದ್ಧತೆಯನ್ನು ನಾವು ಸ್ಮರಿಸಬೇಕು ಎಂದರು.

    ‘ಬಂಗಾರದ ಮನುಷ್ಯ’ ಸಿನಿಮಾದ ಮೂಲಕ ನೂರಾರು ಯುವಕರು ನಗರ ಪ್ರದೇಶದಿಂದ ಮರಳಿ ತಮ್ಮ ಹಳ್ಳಿಗಳಿಗೆ ಹೋಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದ ಸಂಗತಿಯನ್ನು ಮೆಲುಕು ಹಾಕಿದರು.

    ಡಾ.ರಾಜ್‌ಕುಮಾರ್ ಅವರ ಜನ್ಮದಿನವನ್ನು ಸರ್ಕಾರಿ ಮಟ್ಟದಲ್ಲಿ ಅಧಿಕೃತವಾಗಿ ಆಚರಿಸಲು ನಿರ್ಧರಿಸಿದ ಸರ್ಕಾರದ ಕ್ರಮಕ್ಕೆ ಅಭಿನಂದನೆ ತಿಳಿಸಿದ ಅವರು, ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ರಾಜ್ ಅವರ ಆದರ್ಶಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಲಿ ಎಂದು ಹಾರೈಸಿದರು.

    ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಕನ್ನಡ ಚಿತ್ರರಂಗದ ಧ್ರುವತಾರೆ ಡಾ.ರಾಜ್ ಕುಮಾರ್ ಅವರು ಕೇವಲ ಒಬ್ಬ ನಟರಾಗಿರಲಿಲ್ಲ, ಅವರು ಇಡೀ ಕರ್ನಾಟಕದ ಮನೆಮನ ಬೆಳಗಿದ ಸಂಸ್ಕೃತಿಯ ಪ್ರತೀಕವಾಗಿದ್ದರು. ಅಣ್ಣಾವ್ರಿಗೂ ಬಳ್ಳಾರಿಗೂ ಅವಿನಾಭಾವ ಸಂಬಂಧ ಹೊಂದಿದ್ದರು ಎಂದು ಹೇಳಿದರು.

    ಸಾಮಾನ್ಯವಾಗಿ ಯಾವುದೇ ರಂಗದಲ್ಲಿ ಯಶಸ್ಸು ಸಿಕ್ಕ ತಕ್ಷಣ ಜನರು ರಾಜಕೀಯಕ್ಕೆ ಬರಲು ಬಯಸುತ್ತಾರೆ. ಆದರೆ ಅಣ್ಣಾವ್ರು ತಮಗೆ ಮುಖ್ಯಮಂತ್ರಿಯಾಗುವ ಅತಿ ದೊಡ್ಡ ಅವಕಾಶಗಳಿದ್ದರೂ, ನಾನು ಇಡೀ ಕನ್ನಡ ನಾಡಿನ ಮಗನಾಗಿ ಇರಲು ಬಯಸುತ್ತೇನೆ ಎಂದು ರಾಜಕೀಯವನ್ನು ನಯವಾಗಿ ತಿರಸ್ಕರಿಸಿದ್ದರು ಎಂದು ತಿಳಿಸಿದರು.

    ಎಷ್ಟೇ ದೊಡ್ಡ ಹೆಸರು ಮತ್ತು ಯಶಸ್ಸು ಗಳಿಸಿದರೂ ಇತರರಿಗೆ ಗೌರವ ನೀಡುವುದು ಮತ್ತು ಸಜ್ಜನಿಕೆಯಿಂದ ವರ್ತಿಸುವುದನ್ನು ಅಣ್ಣಾವ್ರಿಂದ ಕಲಿಯಬೇಕು. ಇಂದಿಗೂ ಸಿನಿಮಾ ರಂಗದಲ್ಲಿ ಯಾರಾದರೂ ಅಹಂಕಾರದಿಂದ ವರ್ತಿಸಿದರೆ, ಜನರು ತಕ್ಷಣವೇ ಅಣ್ಣಾವ್ರ ಸರಳತೆಯನ್ನು ಉದಾಹರಿಸುತ್ತಾರೆ. ಅವರ ಪ್ರಭಾವ ಅಷ್ಟು ಆಳವಾಗಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರು ಕೇವಲ ನಟರಲ್ಲ, ಅವರು ಕನ್ನಡ ಸಂಸ್ಕೃತಿಯ ರಾಯಭಾರಿ. ಅವರ ‘ಬಂಗಾರದ ಮನುಷ್ಯ’, ‘ಗುರಿ’ ನಂತಹ ಚಿತ್ರಗಳು ಇಂದಿಗೂ ಸಮಾಜಕ್ಕೆ ಮಾದರಿಯಾಗಿವೆ ಎಂದು ಸ್ಮರಿಸಿದರು.

    ಡಾ. ರಾಜ್ ಹಾಡುಗಳ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳು ಆಳವಾಗಿ ಬೇರೂರಿವೆ. ‘ಆಡಿಸಿ ನೋಡು ಬೀಳಿಸಿ ನೋಡು…’ ನಂತಹ ಹಾಡುಗಳು ಇಂದಿಗೂ ಜೀವನಕ್ಕೆ ಸ್ಫೂರ್ತಿಯಾಗಿವೆ. ಡಾ. ರಾಜ್‌ಕುಮಾರ್ ಅವರಿಗೆ ಅವರೇ ಸಾಟಿ. ಅವರ ಕೊಡುಗೆ ನಾಡು, ನುಡಿ ಮತ್ತು ಕಲೆಗೆ ಅನನ್ಯವಾದುದು. ಅವರ ಜನ್ಮದಿನವನ್ನು ಆಚರಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ವಿ.ಸಿ ಗುರುರಾಜ್, ಪ್ರದಸ ನವೀನ್ ಕುಮಾರ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಡಾ.ರಾಜ್ ಕುಮಾರ್ ಅಭಿಮಾನಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

    April 24, 2026

    ಬಳ್ಳಾರಿ:  ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ.ರಾಜ್‌ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ…

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’: ಲೇಖಕರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

    April 24, 2026

    SSLC ಫಲಿತಾಂಶ: ಸಿರಾ ತಾಲೂಕಿನಲ್ಲಿ ಶೇ. 89.75 ಫಲಿತಾಂಶ ದಾಖಲು

    April 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.