ಗುಬ್ಬಿ: ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ವಿಜಿ ಕುಮಾರಗೆ ಗುಬ್ಬಿ ತಾಲ್ಲೂಕು ಕಾಡುಗೊಲ್ಲ ಸಮುದಾಯದ ಮುಖಂಡ ಕಂಬೇರಹಟ್ಟಿ ಕೆ.ಎಸ್ ನಾಗರಾಜ್ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಸಲ್ಲಿಸಿದ್ದಾರೆ.
ಡಾ. ವಿ.ಜಿ.ಕುಮಾರ್ ಅವರು ತಮ್ಮ ವೈದ್ಯಕೀಯ ಸೇವಾ ಜೀವನದ ಆರಂಭಿಕ ದಿನಗಳಲ್ಲಿಯೇ ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 7 ರಿಂದ 8 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ತಮ್ಮ ಕರ್ತವ್ಯನಿಷ್ಠೆ, ಮಾನವೀಯ ಮೌಲ್ಯಗಳು, ಸರಳ ವ್ಯಕ್ತಿತ್ವ ಹಾಗೂ ಜನಪರ ಸೇವಾ ಮನೋಭಾವದಿಂದ ಸಾರ್ವಜನಿಕರ ಅಪಾರ ಪ್ರೀತಿ ಮತ್ತು ಗೌರವವನ್ನು ಗಳಿಸಿದ್ದಾರೆ. ಇದೀಗ ಅದೇ ತಾಲ್ಲೂಕಿನ ಆರೋಗ್ಯ ಇಲಾಖೆಯ ಪ್ರಮುಖ ಹುದ್ದೆಯಾದ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಅವರ ಸೇವಾ ನಿಷ್ಠೆ ಮತ್ತು ಸಮರ್ಪಣೆಗೆ ಸಂದ ಗೌರವವಾಗಿದೆ.
ಈ ಕುರಿತು ಶ್ರೀ ಕೃಷ್ಣ ಗ್ರಾನೆಟ್ ಮಾಲೀಕರು ಕಂಬೇರಹಟ್ಟಿ ಕೆ.ಎಸ್. ನಾಗರಾಜ್, ಅವರು ಮಾತನಾಡಿ ಡಾ. ವಿಜಿ ಕುಮಾರ್ ಅವರು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸಮರ್ಥ ವೈದ್ಯರಾಗಿದ್ದು, ಜನಸೇವೆಯ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಸಮಾಜಮುಖಿ ಚಿಂತನೆಯಿಂದ ಗುಬ್ಬಿ ತಾಲೂಕಿನ ಆರೋಗ್ಯ ವ್ಯವಸ್ಥೆಗೆ ಹೊಸ ಚೈತನ್ಯ ದೊರೆಯಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಇನ್ನಷ್ಟು ಗುಣಮಟ್ಟದ ಮತ್ತು ಪರಿಣಾಮಕಾರಿ ಆರೋಗ್ಯ ಸೇವೆಗಳು ತಲುಪಲಿವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಅಲ್ಲದೆ, ಸಮಾಜಕ್ಕೆ ಇಂತಹ ಸೇವಾನಿರತ, ಆದರ್ಶ ಹಾಗೂ ಜನಪರ ವೈದ್ಯರನ್ನು ನೀಡಿದ ಡಾ. ವಿಜಿ ಕುಮಾರ್ ಅವರ ತಂದೆ–ತಾಯಿಯವರಿಗೂ ಅಭಿನಂದನೆಗಳು ಸಲ್ಲುತ್ತವೆ ಎಂದು ತಿಳಿಸಿದರು.
ಇನ್ನೂ ಡಾ.ವಿ.ಜಿ.ಕುಮಾರ್ ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಗುಬ್ಬಿ ತಾಲೂಕಿನ ಆರೋಗ್ಯ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಿ, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾಗಲಿ ಎಂದು ಕಾಡುಗೊಲ್ಲ ಸಮುದಾಯದ ಪರವಾಗಿ ಹಾರೈಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


