ಮಧುಗಿರಿ: ಭಾರತ ದೇಶದ ಗೌರವಾನ್ವಿತ ನೂತನ ರಾಷ್ಟ್ರಪತಿಯಾಗಿ ದ್ರೌಪತಿ ಮುರ್ಮು ರವರು ಆಯ್ಕೆಯಾದ ಹಿನ್ನೆಲೆಯಲ್ಲಿ ಮಧುಗಿರಿ ನಗರದ ಡೂಮ್ ಲೈಟ್ ಸರ್ಕಲ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ನೇತೃತ್ವದಲ್ಲಿ ಸಂಭ್ರಮಾಚರಿಸಲಾಯಿತು.
ಈ ವೇಳೆ ಮಾತನಾಡಿದ ಮಹಿಳಾ ಮುಖಂಡರು, ಒಬ್ಬ ಆದಿವಾಸಿ ಮಹಿಳೆಗೆ ಯಾವ ಸರ್ಕಾರವು ನೀಡದ ಗೌರವವನ್ನು ಮೋದಿ ಸರ್ಕಾರ ನೀಡಿದೆ. ಮಹಿಳೆಯರಿಗೆ ಸಮಾನತೆ ಕೊಟ್ಟಿರುವುದು ನಮ್ಮೆಲ್ಲರಿಗೆ ಹೆಮ್ಮೆಯನ್ನುಂಟು ಮಾಡಿದೆ ಎಂದರು.
ಇದೇ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ ಕೆ.ಎಸ್.ನವೀನ್, ಜಿಲ್ಲಾಧ್ಯಕ್ಷರಾದ ಬಿ.ಕೆ. ಮಂಜುನಾಥ್, ಯುವ ಮುಖಂಡರಾದ ಹನುಮಂತೇಗೌಡ, ಮಧುಗಿರಿಯ ಮಾಜಿ ಶಾಸಕರಾದ ಗಂಗಹನುಮಯ್ಯ, ಸ್ಫೂರ್ತಿ ಚಿದಾನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಣ್ಣ, ರವಿ ಪಾವಗಡ, ತಿಮ್ಮಜ್ಜ ಸೇರಿದಂತೆ ಎಲ್ಲಾ ಮಂಡಲಗಳ ಪ್ರಮುಖರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz