ತುಮಕೂರು: ನಗರದ ಎಂಪ್ರೆಸ್ ಶಾಲೆಯ ಸಭಾಂಗಣದಲ್ಲಿ ವಿವಿಧ ಪ್ರಗತಿಪರ, ದಲಿತ ಪರ ಸಂಘಟನೆಗಳು ಜಂಟಿಯಾಗಿ ಆಯೋಜಿಸಿದ್ದ ಬುದ್ದ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಕಷ್ಟಗಳಿಗೆ ದೇವರು ಪರಿಹಾರ ನೀಡುತ್ತಾನೆ ಎಂಬುದಾಗಿದ್ದರೆ, ಸಾಲ ಮಾಡಿಕೊಂಡ ರೈತರು,ಸಾಲ ಮನ್ನಾಕ್ಕಾಗಿ ದೇವರ ಮುಂದೆ ಬೇಡುವ ಬದಲು ಸರಕಾರಗಳಿಗೆ ಮನವಿ ಸಲ್ಲಿಸುವ ಅಗತ್ಯವೆನಿತ್ತು ಎಂದು ಪ್ರಶ್ನಿಸಿದರು.
ಇಂದು ದೇವರು ಎಂಬುದು ಒಂದು ಉದ್ಯೋಗವಾಗಿದೆ. ಜನತೆಗೆ ಇನ್ನಿಲ್ಲದ ಭಯ ಹುಟ್ಟಿಸಿ, ಅವರಿಂದು, ಒಂದಿಲ್ಲೊಂದು ಪೂಜೆ ಮಾಡಿಸಿ, ತಾವು ಹೊಟ್ಟೆ ಹೊರೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನು ಅರಿಯದೆ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆ, ಪುನಸ್ಕಾರಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸವೇ ಸರಿ. ಮೈಮೇಲೆ ಬರುವ ದೇವರುಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಅದರಲ್ಲಿಯೂ ಕೆಳವರ್ಗದವರ ಮೇಲೆ ದೇವರುಗಳ ಬರುತ್ತಿರುವುದು ದುರದೃಷ್ಟಕರ ಎಂದರು.
ತಂದೆ, ತಾಯಿ, ಗುರು, ಹಿರಿಯರು ದೇವರು ಎಂದು ಹಿರಿಯರು ಹೇಳಿದ್ದಾರೆ.ಆದರೆ ನಮ್ಮ ಜನರು ಎಂದಿಗೂ ತಂದೆ, ತಾಯಿಯಲ್ಲಿ, ಗುರುಗಳಲ್ಲಿ ದೇವರನ್ನು ಕಾಣಲಿಲ್ಲ. ಒಂದು ವೇಳೆ ಹಾಗೇ ದೇವರನ್ನು ಕಂಡಿದ್ದರೆ, ಇಂದು ದೇಶದಲ್ಲಿ ವೃದ್ದಾಶ್ರಮಗಳೇ ಇರುತ್ತಿರಲಿಲ್ಲ. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರನ್ನು ಮರೆತಿದ್ದೇ ಇಂದಿನ ದುಸ್ಥಿತಿಗೆ ಕಾರಣ ಎಂದ ಶ್ರೀನಿಜಗುಣಾನಂದ ಶ್ರೀಗಳು, ಈ ದೇಶದ ಭವಿಷ್ಯವಿರುವುದೇ ಬುದ್ದ,ಬಸವಣ್ಣ, ಅಂಬೇಡ್ಕರ್ ಅವರ ತತ್ವಗಳ ಮೇಲೆ ನಿಂತಿದೆ. ಆ ದಿಕ್ಕಿನತ್ತ ನಾವೆಲ್ಲರೂ ಸಾಗೋಣ, ಸ್ವಾತಂತ್ರ ತಲೆಗಳಾಗಿ ಬದುಕೋಣ ಎಂದು ಕಿವಿ ಮಾತು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5