ವೇತನ ಪರಿಷ್ಕರಣೆ ಮಾಡುವಂತೆ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಇತಿಮಿತಿಯಲ್ಲಿ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ವೋಲ್ವೋ, ಅಂಬಾರಿ ಬಸ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಾರಿಗೆ ನೌಕರರ 7ರಿಂದ 8 ಬೇಡಿಕೆ ಈಡೇರಿಸಲಾಗಿದೆ. ಈಗ ವೇತನ ಪರಿಷ್ಕರಣೆಯ ಬೇಡಿಕೆ ಇಟ್ಟಿದ್ದಾರೆ. ಹಣಕಾಸು ಇತಿಮಿತಿಯಲ್ಲಿ ಇದಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆ ಆರಂಭವಾದಾಗ ಎಲ್ಲಾ ತಾಲ್ಲೂಕುಗಳಲ್ಲಿ 4 ರಿಂದ 5 ಮಿನಿಬಸ್ ಓಡಾಡುತ್ತಿರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದುಡಿಯುವ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಏಪ್ರಿಲ್ 1ರಿಂದ ಉಚಿತ ಬಸ್ ಪಾಸ್ ನೀಡುವಂತೆ ಸಾರಿಗೆ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


