ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ಮೆರವಣಿಗೆಯಲ್ಲಿ ಸುಮಾರು 30,000–35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಬಸ್ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ ಗಳು ಜಾಸ್ ಟೋಲ್ –ಶ್ರೀ ಕೆ.ಎನ್. ರಾಜಣ್ಣ ರವರ ಮನೆಯ ಮುಂಭಾಗದ ರಸ್ತೆ ಮೂಲಕ ರಿಂಗ್ ರಸ್ತೆಗೆ ಪ್ರವೇಶಿಸಿ, ಗುಬ್ಬಿ ಗೇಟ್ ರಿಂಗ್ ರಸ್ತೆಗೆ ಬರುವುದು.
ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ ಗಳು ಕುಣಿಗಲ್ ಜಂಕ್ಷನ್ ಮೂಲಕ ಗುಬ್ಬಿ ಗೇಟ್ ರಿಂಗ್ ರಸ್ತೆಗೆ ಬರುವುದು.
ಶಿರಾ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ ಗಳು ಶಿರಾಗೇಟ್ ಗೆ ಬಂದು ಶಿರಾಗೇಟ್ 80 ಅಡಿ ರಸ್ತೆ ಮೂಲಕ ಹೊಸ ಔಟರ್ ರಿಂಗ್ ರಸ್ತೆಯಿಂದ ಗುಬ್ಬಿ ಗೇಟ್ ರಿಂಗ್ ರಸ್ತೆ ಬರುವುದು. ಗುಬ್ಬಿ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ ಗಳು ಗುಬ್ಬಿ ಗೇಟ್ ರಿಂಗ್ ರಸ್ತೆವರೆಗೆ ಬರುವುದು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಕೆಎಸ್ ಆರ್ ಟಿಸಿ ಬಸ್ ಚಾಲಕರಿಗೆ ಸೂಚಿಸಲಾಗಿದೆ, ಆದೇಶವನ್ನು ಉಲ್ಲಂಘಿಸಿದವರ ವಿರುದ್ದ ಕಾನೂನು ರೀತ್ಯಾ ಅಗತ್ಯ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q