ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಗುಜ್ಜನಡು ಪಂಚಾಯಿತಿ ಸಿ.ಎಚ್.ಪಾಳ್ಯ ಚಿನ್ನಮ್ಮನ ಹಳ್ಳಿಯಿಂದ ಕಾಟಯ್ಯನ ಗುಂಡ್ಲು ರಸ್ತೆ ತೀವ್ರ ಹದಗೆಟ್ಟಿದ್ದು, ಸಾರ್ವಜನಿಕರು ತೀವ್ರ ತೊಂದರೆಗೀಡಾಗಿದ್ದಾರೆ.
ವಾಜಪೇಯಿ ಕಾಲದ ಆಗಿರುವ ರಸ್ತೆ ಇದಾಗಿದ್ದು, ಆ ಬಳಿಕ ಯಾವ ಎಂಎಲ್ ಎ, ಎಂಪಿಗಳು ಅಥವಾ ಇತರ ಯಾವ ರಾಜಕಾರಣಗಳೂ ಗ್ರಾಮದ ಈ ರಸ್ತೆಯ ಬಗ್ಗೆ ತಲೆಕೆಡಿಸಿಕೊಂಡಿಲ್ಲ.
ಈ ರಸ್ತೆಯಲ್ಲಿ ಕೆಲವೇ ಕೆಲವು ಬಸ್ ಗಳು ಸಂಚರಿಸುತ್ತವೆ. ಬಸ್ ಗಳು ಸಂಚರಿಸುತ್ತಿರುವ ವೇಳೆ ಇತರ ವಾಹನಗಳಿಗೆ ಸೈಡ್ ಬಿಡಲು ಕೂಡ ಸಾಧ್ಯವಾಗದಂತಹ ಪರಿಸ್ಥಿತಿಗಳಿವೆ. ಈ ರಸ್ತೆಯಲ್ಲಿ ಪ್ರಯಾಣಿಸುವ ದ್ವಿಚಕ್ರ ವಾಹನ ಸವಾರರ ಪಾಡಂತೂ ಹೇಳಲು ಸಾಧ್ಯವಾಗದಂತಾಗಿದೆ ಎಂದು ಗ್ರಾಮಸ್ಥರಾದ ಜೈರಾಮ್, ರಘುನಾಥ್ ಸುನಿಲ್, ಕುಮಾರ್ ಅಳಲು ತೋಡಿಕೊಂಡಿದ್ದಾರೆ.
ಈ ರಸ್ತೆ ಅವ್ಯವಸ್ಥೆಯಿಂದ ಬೇಸತ್ತು ಜನರು ಪೆಮ್ಮನಹಳ್ಳಿ ಮಾವಿನಮರ ಹಾದಿಯಾಗಿ ಪಾವಗಡಕ್ಕೆ ಹೋಗುವಂತಾಗಿದೆ. ರಸ್ತೆ ಸುಸ್ಥಿತಿಯಲ್ಲಿರದ ಕಾರಣ ಇಲ್ಲಿನ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಪರದಾಡುವಂತಾಗಿದೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕಾಮಗಾರಿ ನಡೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ನಂದೀಶ್ ಕೊತ್ತೂರ್, ನಿಡಗಲ್ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB