nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ

    December 16, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ
    • ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 
    • ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ
    • ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ
    • ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ: ಸೌಮ್ಯ ಅನೀಲ್ ಚಿಕ್ಕಮಾದು
    • 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ
    • ಉಚಿತ ಆರೋಗ್ಯ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಯಶಸ್ವಿ: ನೂರಾರು ಜನ ಭಾಗಿ
    • ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ರಾಘಕ್ರೀಡೆ-2025:  ಶಿಕ್ಷಕರಿಂದ 4 ತಂಡ ಮಕ್ಕಳಿಗೆ 15 ಆಟ..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ
    ತುಮಕೂರು December 16, 2025

    ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ

    By adminDecember 16, 2025No Comments2 Mins Read
    ambedkar mahaparinirvana day

    ತುಮಕೂರು: ವಿದ್ಯೆಗೆ ಯಾವುದೇ ಜಾತಿಯ ಹಂಗಿಲ್ಲ. ಪರಿಶ್ರಮದಿಂದ ಕಲಿಕೆಯಲ್ಲಿ ತೊಡಗಿದರೆ ಜ್ಞಾನವಂತರಾಗಲು ಸಾಧ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ವಿದ್ಯೆಯು ಕೇವಲ ಸಾಧಕರ ಸ್ವತ್ತು, ಸೋಮಾರಿಗಳ ಸ್ವತ್ತಲ್ಲ ಎಂದು ಹಿರಿಯ ದಲಿತ ಮುಖಂಡ ಹಬ್ಬತ್ತನಹಳ್ಳಿ ಶ್ರೀನಿವಾಸ್ ಅವರು ಕರೆ ನೀಡಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    Provided by
    Provided by

    ಅಂಬೇಡ್ಕರ್ ಹಾದಿಯಲ್ಲಿ ಯಶಸ್ಸು ಸಾಧ್ಯ:

    ಡಾ. ಬಿ.ಆರ್. ಅಂಬೇಡ್ಕರ್ ಅವರು ನಡೆದುಬಂದ ಹಾದಿಯು ನಮಗೆಲ್ಲ ಆದರ್ಶವಾಗಬೇಕು. ಅವರು ತೋರಿಸಿದ ಶಿಕ್ಷಣ, ಸ್ವಾಭಿಮಾನ ಮತ್ತು ಸಂಘಟನೆಯ ಮಾರ್ಗದಲ್ಲಿ ಸಾಗಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಶ್ರೀನಿವಾಸ್ ಅವರು ಒತ್ತಿ ಹೇಳಿದರು.

    ದಲಿತ ಪರ ಹೋರಾಟಕ್ಕೆ ಮೆರುಗು ನೀಡಿದ ಎಂ.ಸಿ. ರಾಜು:

    ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ಎಂ. ರಾಮಯ್ಯ ಅವರು, ದಿವಂಗತ ಎಂ.ಸಿ. ರಾಜು ಅವರು ತುಮಕೂರು ಜಿಲ್ಲೆಯ ದಲಿತಪರ ಹೋರಾಟಕ್ಕೆ ಮೆರುಗು ನೀಡಿದವರು. ಅವರು ಬಾಬಾಸಾಹೇಬರ ಆಶಯಗಳನ್ನು ವಿದೇಶಕ್ಕೂ ವಿಸ್ತರಿಸಿದ್ದರು ಎಂದು ಸ್ಮರಿಸಿದರು.

     ಮಕ್ಕಳಿಗೆ ವಿದ್ಯೆ ನೀಡಲು ಮುಖಂಡರಿಗೆ ಜಯಣ್ಣ ಕರೆ:

    ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಯನುಡಿ ಜಯಣ್ಣ ಮಾತನಾಡಿ, ಬಾಬಾ ಸಾಹೇಬರ ವಿಚಾರಧಾರೆಗಳನ್ನು ಕಾಲಕಾಲಕ್ಕೆ ಸ್ಮರಿಸಬೇಕು. ವಿದ್ಯೆಗೆ ಒತ್ತು ನೀಡಿದರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ಪ್ರತಿಯೊಬ್ಬ ದಲಿತ ಮುಖಂಡರು ತಮ್ಮ ಕುಟುಂಬದ ಮಕ್ಕಳ ಜೊತೆಗೆ ಸುತ್ತಮುತ್ತಲಿನ ದಲಿತ ಮಕ್ಕಳನ್ನು ಕೂಡ ವಿದ್ಯಾವಂತರನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದು ನುಡಿದರು.

    ಅಸ್ಪೃಶ್ಯತೆ ವಿರುದ್ಧ ಮಹಿಳೆಯರು ಧ್ವನಿ ಎತ್ತಬೇಕು:

    ಮುಖಂಡ ಹಂಚಿಹಳ್ಳಿ ರಾಮಸ್ವಾಮಿ ಮಾತನಾಡಿ, ಸರ್ಕಾರದಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿಕೊಡಲು ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ಮಹಿಳಾ ಮುಖಂಡರಾದ ಮಂಜುಳಾ ಅವರು, ಮಹಿಳೆಯರು ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಸ್ಪೃಶ್ಯತೆ ವಿರುದ್ಧ ದೃಢವಾಗಿ ನಿಲ್ಲಬೇಕು ಎಂದು ಕರೆ ನೀಡಿದರು.

    ಸಮಾರಂಭಕ್ಕೂ ಮುನ್ನ ಕೆಸರುಮಡು ಗೋಪಾಲ್ ಅವರು ಬಾಬಾ ಸಾಹೇಬರ ಕ್ರಾಂತಿ ಗೀತೆಗಳನ್ನು ಹಾಡಿ ನೆರೆದಿದ್ದವರನ್ನು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಟಿ.ಸಿ. ರಾಮಯ್ಯ, ಲವಕುಮಾರ್, ನರಸಿಂಹರಾಜು, ತಿಮ್ಮಲಾಪುರ ನರಸಿಂಹಮೂರ್ತಿ, ಸುಮಾ, ಶೇಖರ್, ಛಾಯಾ, ಶೋಭಾ, ರಾಜಶೇಖರ್ ನಂಜಯ್ಯ ಮುಂತಾದ ಮುಖಂಡರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ambedkar Mahaparinirvana Day Dalit Organizations Dr. B.R. Ambedkar Education Equality Habattanahalli Srinivas Karnataka News Knowledge is Power Social Justice Tumakuru news
    admin
    • Website

    Related Posts

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ದುಪ್ಪಟ್ಟು ಲಾಭಗಳಿಸುವ ಆಮಿಷ: ಉದ್ಯಮಿಗೆ  7.44 ಲಕ್ಷ ರೂ. ವಂಚನೆ

    December 15, 2025

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ | ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಆರಂಭ

    December 16, 2025

    ತುರುವೇಕೆರೆ:  ಪಟ್ಟಣದ ತಾಲೂಕು ಕಚೇರಿಗೆ ಹೊಂದಿಕೊಂಡಂತಿರುವ ವಾಣಿಜ್ಯ ಸಂಕೀರ್ಣದಲ್ಲಿ ಇಂದು ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ…

    ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಸಂಪೂರ್ಣ ಶೋಧ, ಸಭೆಗಳು ರದ್ದು! 

    December 16, 2025

    ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ

    December 16, 2025

    ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ

    December 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.