nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ
    ತುಮಕೂರು December 16, 2025

    ವಿದ್ಯೆಗೆ ಜಾತಿಯ ಹಂಗಿಲ್ಲ, ಶ್ರಮಪಟ್ಟು ಜ್ಞಾನ ಗಳಿಸಿ: ತುಮಕೂರಿನಲ್ಲಿ ಶ್ರೀನಿವಾಸ್ ಕರೆ

    By adminDecember 16, 2025No Comments2 Mins Read
    ambedkar mahaparinirvana day

    ತುಮಕೂರು: ವಿದ್ಯೆಗೆ ಯಾವುದೇ ಜಾತಿಯ ಹಂಗಿಲ್ಲ. ಪರಿಶ್ರಮದಿಂದ ಕಲಿಕೆಯಲ್ಲಿ ತೊಡಗಿದರೆ ಜ್ಞಾನವಂತರಾಗಲು ಸಾಧ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ವಿದ್ಯೆಯು ಕೇವಲ ಸಾಧಕರ ಸ್ವತ್ತು, ಸೋಮಾರಿಗಳ ಸ್ವತ್ತಲ್ಲ ಎಂದು ಹಿರಿಯ ದಲಿತ ಮುಖಂಡ ಹಬ್ಬತ್ತನಹಳ್ಳಿ ಶ್ರೀನಿವಾಸ್ ಅವರು ಕರೆ ನೀಡಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಅಂಬೇಡ್ಕರ್ ಹಾದಿಯಲ್ಲಿ ಯಶಸ್ಸು ಸಾಧ್ಯ:

    ಡಾ. ಬಿ.ಆರ್. ಅಂಬೇಡ್ಕರ್ ಅವರು ನಡೆದುಬಂದ ಹಾದಿಯು ನಮಗೆಲ್ಲ ಆದರ್ಶವಾಗಬೇಕು. ಅವರು ತೋರಿಸಿದ ಶಿಕ್ಷಣ, ಸ್ವಾಭಿಮಾನ ಮತ್ತು ಸಂಘಟನೆಯ ಮಾರ್ಗದಲ್ಲಿ ಸಾಗಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಶ್ರೀನಿವಾಸ್ ಅವರು ಒತ್ತಿ ಹೇಳಿದರು.

    ದಲಿತ ಪರ ಹೋರಾಟಕ್ಕೆ ಮೆರುಗು ನೀಡಿದ ಎಂ.ಸಿ. ರಾಜು:

    ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ಎಂ. ರಾಮಯ್ಯ ಅವರು, ದಿವಂಗತ ಎಂ.ಸಿ. ರಾಜು ಅವರು ತುಮಕೂರು ಜಿಲ್ಲೆಯ ದಲಿತಪರ ಹೋರಾಟಕ್ಕೆ ಮೆರುಗು ನೀಡಿದವರು. ಅವರು ಬಾಬಾಸಾಹೇಬರ ಆಶಯಗಳನ್ನು ವಿದೇಶಕ್ಕೂ ವಿಸ್ತರಿಸಿದ್ದರು ಎಂದು ಸ್ಮರಿಸಿದರು.

     ಮಕ್ಕಳಿಗೆ ವಿದ್ಯೆ ನೀಡಲು ಮುಖಂಡರಿಗೆ ಜಯಣ್ಣ ಕರೆ:

    ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಯನುಡಿ ಜಯಣ್ಣ ಮಾತನಾಡಿ, ಬಾಬಾ ಸಾಹೇಬರ ವಿಚಾರಧಾರೆಗಳನ್ನು ಕಾಲಕಾಲಕ್ಕೆ ಸ್ಮರಿಸಬೇಕು. ವಿದ್ಯೆಗೆ ಒತ್ತು ನೀಡಿದರೆ ನಮ್ಮ ಜೀವನ ಸಾರ್ಥಕವಾಗುತ್ತದೆ. ಪ್ರತಿಯೊಬ್ಬ ದಲಿತ ಮುಖಂಡರು ತಮ್ಮ ಕುಟುಂಬದ ಮಕ್ಕಳ ಜೊತೆಗೆ ಸುತ್ತಮುತ್ತಲಿನ ದಲಿತ ಮಕ್ಕಳನ್ನು ಕೂಡ ವಿದ್ಯಾವಂತರನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದು ನುಡಿದರು.

    ಅಸ್ಪೃಶ್ಯತೆ ವಿರುದ್ಧ ಮಹಿಳೆಯರು ಧ್ವನಿ ಎತ್ತಬೇಕು:

    ಮುಖಂಡ ಹಂಚಿಹಳ್ಳಿ ರಾಮಸ್ವಾಮಿ ಮಾತನಾಡಿ, ಸರ್ಕಾರದಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿಕೊಡಲು ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ಮಹಿಳಾ ಮುಖಂಡರಾದ ಮಂಜುಳಾ ಅವರು, ಮಹಿಳೆಯರು ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅಸ್ಪೃಶ್ಯತೆ ವಿರುದ್ಧ ದೃಢವಾಗಿ ನಿಲ್ಲಬೇಕು ಎಂದು ಕರೆ ನೀಡಿದರು.

    ಸಮಾರಂಭಕ್ಕೂ ಮುನ್ನ ಕೆಸರುಮಡು ಗೋಪಾಲ್ ಅವರು ಬಾಬಾ ಸಾಹೇಬರ ಕ್ರಾಂತಿ ಗೀತೆಗಳನ್ನು ಹಾಡಿ ನೆರೆದಿದ್ದವರನ್ನು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಟಿ.ಸಿ. ರಾಮಯ್ಯ, ಲವಕುಮಾರ್, ನರಸಿಂಹರಾಜು, ತಿಮ್ಮಲಾಪುರ ನರಸಿಂಹಮೂರ್ತಿ, ಸುಮಾ, ಶೇಖರ್, ಛಾಯಾ, ಶೋಭಾ, ರಾಜಶೇಖರ್ ನಂಜಯ್ಯ ಮುಂತಾದ ಮುಖಂಡರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ambedkar Mahaparinirvana Day Dalit Organizations Dr. B.R. Ambedkar Education Equality Habattanahalli Srinivas Karnataka News Knowledge is Power Social Justice Tumakuru news
    admin
    • Website

    Related Posts

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.