nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಮೌಲ್ಯಗಳನ್ನು ಕಟ್ಟಿಕೊಡುವುದೇ ಶಿಕ್ಷಣ: ಡಿ.ಎನ್.ಸುಬ್ಬಣ್ಣ
    ಪಾವಗಡ December 16, 2024

    ಮಕ್ಕಳಿಗೆ ಮೌಲ್ಯಗಳನ್ನು ಕಟ್ಟಿಕೊಡುವುದೇ ಶಿಕ್ಷಣ: ಡಿ.ಎನ್.ಸುಬ್ಬಣ್ಣ

    By adminDecember 16, 2024No Comments2 Mins Read
    pavagada

    ವೈ.ಎನ್.ಹೊಸಕೋಟೆ: ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಟ್ಟಿಕೊಡುವುದೇ ಮುಖ್ಯ ಶಿಕ್ಷಣ ಎಂದು ನಿವೃತ್ತ ಉಪಪ್ರಾಂಶುಪಾಲರಾದ ಡಿ.ಎನ್.ಸುಬ್ಬಣ್ಣ ತಿಳಿಸಿದರು.

    ಗ್ರಾಮದ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯ ೧೯೯೮–೯೯ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಬಳಗ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by
    Provided by

    ಮಾತಾಪಿತೃಗಳನ್ನು ಗುರುಗಳನ್ನು ಗೌರವಿಸುವುದು ಮತ್ತು ಪೂಜಿಸುವುದು ಈ ನೆಲದ ಸಂಸ್ಕೃತಿ. ಆ ಸಂಸ್ಕೃತಿಯನ್ನು ನಮ್ಮ ಈ ಶಾಲೆ ಕಟ್ಟಿದೆ. ವಿದ್ಯಾರ್ಥಿಗಳಲ್ಲಿ ಪಾಠಗಳ ಜೊತೆಗೆ ಮೌಲ್ಯಗಳನ್ನು ಕಟ್ಟಿಕೊಟ್ಟಾಗ ಅದು ಉತ್ತಮ ಶಿಕ್ಷಣವಾಗುತ್ತದೆ. ಸಂಸ್ಕಾರವನ್ನು ಕಟ್ಟಿದ ಈ ಶಾಲೆಗೆ ಹಳೆಯ ವಿದ್ಯಾರ್ಥಿಗಳಾದ ತಾವು ಸಹಕಾರ ನೀಡಿದರೆ ಶಾಲಾ ಪ್ರಗತಿ ಸಾಧ್ಯ ಎಂದರು.

    ಸುವರ್ಣ ಸಂಭ್ರಮದ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ನಮ್ಮ ಬದುಕು ಸಾರ್ಥಕವೆನಿಸುತ್ತಿದೆ. ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮದಡಿ ನಮಗೆ ನೀಡಿದ ಗೌರವಾಧಾರಣಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ನಿವೃತ್ತ ಪ್ರಾಂಶುಪಾಲ ಮಹಮ್ಮದ್ ಹುಸೇನ್ ತಿಳಿಸಿದರು.

    ನಾನು ಕಲಿತ  ಈ ಶಾಲೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ದೊರೆತ ಪುಣ್ಯ ಎಂದು ಭಾವಿಸಿದ್ದೇನೆ. ತಾವುಗಳೂ ಸಹ ಈ ಶಾಲೆಯ ಪ್ರಗತಿಗೆ ಕೈಜೋಡಿಸಿ ಎಂದರು.

    ಸಂಸ್ಥೆಯ ಅಧ್ಯಕ್ಷರಾದ ಇ.ವಿ.ಶ್ರೀಧರ್ ಮಾತನಾಡಿ, ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಕನಸಿನ ಕೂಸಾಗಿ ೧೯೫೨ರಲ್ಲಿ ಆರಂಭಗೊಂಡ ಶಾಲೆ ಅಪಾರ ಸೇವೆ ಪೂರೈಸಿದೆ. ಸಾವಿರಾರು ವಿದ್ಯಾರ್ಥಿಗಳ ವಿದ್ಯಾರ್ಜನೆಯ ಕೇಂದ್ರವಾಗಿದ್ದ ಇಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ಇಂದು ಹಲವು ಕಾರಣಗಳಿಂದ ತನ್ನ ಸುವರ್ಣ ಯುಗವನ್ನು ಕಳೆದು ಕೊಂಡಿದೆ. ಆದಾಗಿ ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ತವರು ಶಾಲೆಯ ಪ್ರಗತಿಗೆ ಶ್ರಮಿಸಬೇಕು ಎಂದು ಕರೆಕೊಟ್ಟರು.

    ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಾದ ಎ.ಎನ್.ವೆಂಕಟರತ್ನಯ್ಯ, ಸಿ.ಟಿ.ನಾರಾಯಣ, ಎನ್.ಜಿ.ಸುಧಾಕರ್, ಮೃತ್ಯುಂಜಯ, ಸಣ್ಣಅಕ್ಕಲಪ್ಪ, ಕೃಷ್ಣಪ್ಪ, ಎನ್.ಎಸ್.ರಾಮು, ಬಿ.ವೆಂಕಟೇಶ್, ಬಿ.ತಿಪ್ಪೇಸ್ವಾಮಿ, ಆರ್.ಬಿ.ಗೋಪಾಲ್, ತಿಮ್ಮರಾಜು, ಮಧುಶ್ರೀನಿವಾಸ, ವೆಂಕಟಚಲಪತಿ, ಕೇಶ್ಯಾನಾಯ್ಕ, ಡಿ.ಟಿ.ರಾಮಪ್ಪ,  ನರಸಿಂಹಮೂರ್ತಿ ಮಾತನಾಡಿದರು.

    ಎರಡು ದಿನಗಳು ನಡೆದ ಪೂರ್ವ ವಿದ್ಯಾರ್ಥಿಗಳ ಅಪೂರ್ವ ಸಂಗಮ ಕಾರ್ಯಕ್ರಮದಲ್ಲಿ ಶನಿವಾರದಂದು ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ, ವಿದ್ಯಾರ್ಥಿಗಳ ಪರಿಚಯ ಹಾಗೂ ಭಾನುವಾರ ವಾದ್ಯ ಮೇಳಗಳೊಂದಿಗೆ ಗುರುವೃಂದದ ಪುರಮೆರವಣಿಗೆ ನೆರವೇರಿತು. ಹಳೆಯ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿ ಸಂತೋಷ ವ್ಯಕ್ತಪಡಿಸಿದರು. ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲಾ ಗುರುಗಳನ್ನು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗುರುವಂದನೆ ಸಮರ್ಪಿಸಿದರು. ವಿದ್ಯಾರ್ಥಿ ಮತ್ತು ಶಿಕ್ಷಕರು ತಮ್ಮ ಶಾಲಾ ದಿನಗಳನ್ನು ಮೆಲಕು ಹಾಕಿದರು. ತಂಡದ ಎಲ್ಲಾ ಹಳೆಯ ವಿದ್ಯಾರ್ಥಿಗಳು ಇದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ

    September 27, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.