nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    • ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
    • ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
    • ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    • ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
    • ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ
    ಮಧುಗಿರಿ July 19, 2026

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    By adminJuly 19, 2026No Comments2 Mins Read
    madhugiri

    ಮಧುಗಿರಿ: ಪ್ರತಿ ವ್ಯಕ್ತಿಯ ಬದುಕು ಉಜ್ವಲವಾಗಲು ಶಿಕ್ಷಣ ಅತ್ಯಂತ ಪ್ರಮುಖವಾದ ಅಸ್ತ್ರವಾಗಿದೆ ಎಂದು ಶಾಸಕ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟರು.

    ಪಟ್ಟಣದ ಕನ್ನಡ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ವತಿಯಿಂದ ಆಯೋಜಿಸಲಾಗಿದ್ದ ಎಸ್‌ ಎಸ್‌ ಎಲ್‌ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಶೇ. 100 ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡ ವಿಷಯದಲ್ಲಿ ಶೇ. 100 ರಷ್ಟು ಅಂಕ ಗಳಿಸುವುದು ಸಾಮಾನ್ಯದ ಮಾತಲ್ಲ. ವಿದ್ಯಾರ್ಥಿಗಳು ಸ್ವಚ್ಛ ಹಾಗೂ ವ್ಯಾಕರಣಬದ್ಧವಾಗಿ ಕನ್ನಡ ಬರೆಯುವುದನ್ನು ಮತ್ತು ಮಾತನಾಡುವುದನ್ನು ಕಲಿಯಬೇಕು. ಶಿಕ್ಷಣದ ಜೊತೆಗೆ ಮೌಲ್ಯಯುತ ಜ್ಞಾನ ಹಾಗೂ ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    “ವಿದ್ಯೆ ಯಾರಪ್ಪನ ಸ್ವತ್ತಲ್ಲ, ಅದು ಸಾಧಕರ ಸ್ವತ್ತು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರು ದೇಶದ ಆಸ್ತಿಯಾಗುತ್ತಾರೆ, ಇಲ್ಲದಿದ್ದರೆ ಸಮಾಜಕ್ಕೆ ಹೊರೆಯಾಗುತ್ತಾರೆ. ಬೇರೆ ಭಾಷೆಗಳನ್ನು ಕಲಿಯಲು ನಮ್ಮ ಅಭ್ಯಂತರವಿಲ್ಲ, ಆದರೆ ಕನ್ನಡಕ್ಕೆ ನಮ್ಮ ಬದುಕಿನಲ್ಲಿ ಯಾವಾಗಲೂ ಮಾತೃ ಸ್ಥಾನವೇ ಮೀಸಲಿರಬೇಕು.”

    – ಕೆ.ಎನ್. ರಾಜಣ್ಣ, ಶಾಸಕರು

    ಇಂದು ದೇಶದಲ್ಲಿ 140 ಕೋಟಿ ಜನಸಂಖ್ಯೆಯಿದ್ದು, ತೀವ್ರ ಸ್ಪರ್ಧೆಯಿದೆ. ವಿದ್ಯಾರ್ಥಿಗಳು ಎಷ್ಟು ಪರಿಶ್ರಮದಿಂದ ಕಲಿಯುತ್ತಾರೋ ಅಷ್ಟು ಉತ್ತಮ ಸ್ಥಾನ ಮಾನ ಸಿಗಲಿದೆ. ನಮ್ಮ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಎಲ್ಲ ರೀತಿಯ ಅವಕಾಶಗಳಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

    ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಪ್ಪ ಮೇಷ್ಟ್ರು ಮಾತನಾಡಿ, ಮೆಟ್ರಿಕ್ ಹಾಗೂ ಪಿಯುಸಿಯಲ್ಲಿ ಕನ್ನಡದಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಂದಲೇ ಕನ್ನಡದ ಬೇರುಗಳು ಇಂದಿಗೂ ಸಜೀವವಾಗಿವೆ. ಭಾಷಾ ಸೇವೆಯ ವಿಚಾರದಲ್ಲಿ ಶಾಸಕ ಕೆ.ಎನ್. ರಾಜಣ್ಣ (ಕೆಎನ್‌ಆರ್) ಅವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.

    7ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೆ.ಪಿ. ನಟರಾಜು ಮಾತನಾಡಿ, ಕೆಪಿಎಸ್ ಶಾಲೆಗಳಿಂದ ಕನ್ನಡ ಕಲಿಕೆಗೆ ಸಮಸ್ಯೆಯಾಗುತ್ತಿದ್ದು, ಕನ್ನಡವನ್ನೇ ಪ್ರಧಾನ ಭಾಷೆಯಾಗಿ ಕಲಿಸಬೇಕಿದೆ. ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ನಿರ್ಲಕ್ಷಿಸುತ್ತಿರುವುದರಿಂದ ಶೇ. 35 ರಷ್ಟಿರುವ ಆಂಗ್ಲ ಮಾಧ್ಯಮದ ಮಕ್ಕಳ ಪಾಲಿಗೆ ಉನ್ನತ ಶಿಕ್ಷಣದ ಸೀಟುಗಳು ದಕ್ಕುತ್ತಿವೆ. ಈ ಬಗ್ಗೆ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಮೌನ ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.

    ಇಂದಿನ ದಿನಗಳಲ್ಲಿ ಅಪಭ್ರಂಶ (ತಪ್ಪುಗಳು) ಇಲ್ಲದೆ ಕನ್ನಡವನ್ನು ಮಾತನಾಡುವ, ಓದುವ ಮತ್ತು ಬರೆಯುವ ಮಕ್ಕಳ ಸಂಖ್ಯೆ ತೀರಾ ವಿರಳವಾಗಿದೆ. ಹಾಗಾಗಿ ಕೇವಲ ‘ಸಿರಿ ಗನ್ನಡಂ ಗೆಲ್ಗೆ’ ಎನ್ನುವುದಕ್ಕಿಂತ, ಭಾಷೆಯನ್ನು ಸರಿಯಾಗಿ ಬಳಸುವ ‘ಸರಿ ಕನ್ನಡಂ ಗೆಲ್ಗೆ’ ಮಾದರಿಯ ಶಿಕ್ಷಣದ ಅಗತ್ಯವಿದೆ. ಕನ್ನಡಿಗರು ಹಾಗೂ ಸರ್ಕಾರ ಕನ್ನಡ ಭಾಷಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಹಿರಿಯ ಸಾಹಿತಿ ಪ್ರೊ. ಮಲನ ಮೂರ್ತಿ ಆಶಯ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಎಸಿ ಗೊಟೂರು ಶಿವಪ್ಪ, ತಹಶೀಲ್ದಾರ್ ನಂದಿನಿ, ತಾ.ಪಂ ಇಓ ಉತ್ತಮ್, ಎಡಿ ಧನಂಜಯ್, ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ.ರಮೇಶ್, ಕಸಾಪ ಅಧ್ಯಕ್ಷೆ ಸಹನಾ ನಾಗೇಶ್, ಪದಾಧಿಕಾರಿಗಳಾದ ರಂಗಧಾಮಯ್ಯ, ಶಂಕರನಾರಾಯಣ, ಜಗದೀಶ್, ಮಹಾಲಿಂಗೇಶ್, ಕರಿಯಣ್ಣ, ಕೆ.ನಾರಾಯಣ್, ಪಿ.ಕೆ.ರಂಗಸ್ವಾಮಿ, ಗಂಗಾಧರ್, ವೀಣಾ ಶ್ರೀನಿವಾಸ್, ಉಮಾ ಮಲ್ಲೇಶ್, ಲಲಿತಾಂಬ ಲಕ್ಷ್ಮೀನರಸಯ್ಯ, ಗಾಯತ್ರಿ ನಾರಾಯಣ್ ಸೇರಿದಂತೆ ಹಲವು ಪ್ರಮುಖರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    ತುಮಕೂರು: ಜಿಲ್ಲಾ ಸವಿತಾ ಸಮಾಜ ಯುವಪಡೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಶೇ. 80% ಕ್ಕಿಂತ…

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    July 19, 2026

    ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ

    July 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.