ಮಧುಗಿರಿ : ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಯ ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಯ ಪ್ರವಾಸದ ಸಮಯದಲ್ಲಿ ಕಾರಿನ ಮೇಲೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆಯನ್ನು ಖಂಡಿಸಿ ಮಧುಗಿರಿ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿತು.
ಮಧುಗಿರಿಯ ಪಾವಗಡ ವೃತ್ತದ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಇರುವ ಕಾಂಗ್ರೆಸ್ ಕಛೇರಿಯ ಬಳಿ ಸೇರಿದ ಪ್ರತಿಭಟನಾಕಾರರು, ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದು ದುರ್ವರ್ತನೆ ತೋರಿರುವುದನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಹಿರಿಯ ಮುಖಂಡರುಗಳಾದ ಎನ್.ಗಂಗಣ್ಣ, ಬಿ.ವಿ.ನಾಗೇಶಬಾಬು, ಅಂಜಿನಪ್ಪ ಎಂ.ಕೆ.ನಂಜುಂಡಯ್ಯ, ಪಿ.ಟಿ.ಗೋವಿಂದಯ್ಯ, ಸಿದ್ದಾಪುರ ಈರಣ್ಣ ಆದಿನಾರಾಯಣರೆಡ್ಡಿ ಸಂಜೀವಗೌಡ, ರಂಗಧಾಮಯ್ಯ, ಪುರಸಭಾ ಉಪಾಧ್ಯಕ್ಷರಾದ ರಾಧಿಕಾ ಆನಂದ್, ಸದಸ್ಯರಾದ ಉಮೇಶ್, ಅಲೀಂ,ಎಂ.ಎಸ್. ಸಾಧಿಕ್ ಸೇರಿದಂತೆ ತಾಲೂಕಿನ ಪ್ರಮುಖ ಹಿರಿಯ ಮುಖಂಡರು ಯುವಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz