nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ನಿಗೂಢ ಸಾವು |  ಪ್ರಿನ್ಸಿಪಾಲ್, ವಾರ್ಡನ್ ಅಮಾನತು, ಸಮಗ್ರ ತನಿಖೆಗೆ ಆದೇಶ
    ಕೊರಟಗೆರೆ November 5, 2024

    ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ನಿಗೂಢ ಸಾವು |  ಪ್ರಿನ್ಸಿಪಾಲ್, ವಾರ್ಡನ್ ಅಮಾನತು, ಸಮಗ್ರ ತನಿಖೆಗೆ ಆದೇಶ

    By adminNovember 5, 2024No Comments3 Mins Read
    shubha kalyan

    ವರದಿ : ಮಂಜುಸ್ವಾಮಿ ಎಂ.ಎನ್.

    ತುಮಕೂರು : ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಜ್ಜನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.


    Provided by
    Provided by

    ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ವಾರ್ಡನ್ ಹಾಗೂ ಶಿಕ್ಷಕರ ನಿರ್ಲಕ್ಷ್ಯದಿಂದ ಅಭಿಷೇಕ್ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

    ಕೊರಟಗೆರೆ ತಾಲೂಕಿನ ಹೋಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಕುನಿತಿಮ್ಮನಹಳ್ಳಿ ಗ್ರಾಮದ ರಮೇಶ್ ಮತ್ತು ಮಂಜುಳಾ ದಂಪತಿಯ ಪುತ್ರ ಅಭಿಷೇಕ್ (13) ದೀಪಾವಳಿ ಹಬ್ಬಕ್ಕೆಂದು ಮನೆಗೆ ಹೋಗಿದ್ದ ಸೋಮವಾರ ಬೆಳಿಗ್ಗೆ ಪುನಃ ವಸತಿ ಶಾಲೆಗೆ ಮೃತ ವಿದ್ಯಾರ್ಥಿ ಬಂದಿದ್ದಾನೆ. ಮಧ್ಯಾಹ್ನದವರೆಗೂ ತರಗತಿಯಲ್ಲಿ ಕುಳಿತು ಪಾಠ ಕೇಳಿದ್ದಾನೆ. ಮಧ್ಯಾಹ್ನದ ಊಟದ ನಂತರ ಸುಸ್ತು ಆಗುತ್ತಿದೆ ಎಂದು ಹೇಳಿ ವಸತಿ ಶಾಲೆಯ ಕೊಠಡಿಗೆ ತೆರಳಿ ಮಲಗಿದ್ದಾನೆ. ಸಹಪಾಠಿಗಳು ವಿಚಾರಿಸಿದಾಗ ಅಭಿಷೇಕ್ ನನಗೆ ತುಂಬಾ ಸುಸ್ತು ಮತ್ತು ಆಯಾಸವಾಗುತ್ತಿದೆ ನಾನು ಮಲಗುತ್ತೇನೆ ಎಂದು ಹೇಳಿದ್ದಾನೆ.

    ವಸತಿ ಶಾಲೆಯ ಶಿಕ್ಷಕರ ಮತ್ತು ಪ್ರಿನ್ಸಿಪಾಲ್ ವಾರ್ಡನ್ ರವರ ದಿವ್ಯ ನಿರ್ಲಕ್ಷತೆಯಿಂದ ವಿದ್ಯಾರ್ಥಿ ಅಭಿಷೇಕ್ ಮೃತನಾಗಿದ್ದಾನೆ ಎಂದು ಪೋಷಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಸತಿ ಶಾಲೆಗೆ ಭೇಟಿ:

    ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂಬ ಮಾಹಿತಿ ಜಿಲ್ಲಾಧಿಕಾರಿಗಳ ಅಂಗಳಕ್ಕೆ ತಲುಪಿದ ಕೂಡಲೇ ಜಿಲ್ಲಾಧಿಕಾರಿ ಶುಭಕಲ್ಯಾಣ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ವಿದ್ಯಾರ್ಥಿ ಅಭಿಷೇಕ್ ಸಾವಿನ ಸಮಗ್ರ ತನಿಖೆಗೆ ಮಾಡಬೇಕೆಂದು ಆದೇಶ ನೀಡಿದರು.ನಾಲ್ಕು ದಿನಗಳಿಂದ ವಸತಿ ಶಾಲೆಯಲ್ಲಿ ಇಲ್ಲದೆ ರಜೆ ಹಾಕಿದ್ದ ಪ್ರಿನ್ಸಿಪಾಲ್ ಮತ್ತು ವಾರ್ಡನ್ ರನ್ನು ತಕ್ಷಣವೇ ಅಮಾನತು ಮಾಡಬೇಕೆಂದು ಸೂಚನೆ ನೀಡಿದರು.

    ವಸತಿ ಶಾಲೆಯ 29 ಶಿಕ್ಷಕರಿಗೂ ಕನ್ನಡ ಭಾಷೆ ಬರಲ್ಲ:

    ಹೊರ ರಾಜ್ಯದ ಶಿಕ್ಷಕರಿಗೆ ಕನ್ನಡ ಭಾಷೆ ಬಾರದ ಕಾರಣ ಸ್ಥಳೀಯ ಬಡ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಪಾಠ ಮಾಡಲು ಕನ್ನಡ ಬಾರದವರನ್ನು ಇಲಾಖೆ ನಿಯೋಜನೆ ಮಾಡಿದ್ದು, ಮಕ್ಕಳ ಕಷ್ಟ ಸುಖಗಳನ್ನು ಆಲಿಸದೆ ಗಂಟೆ ಹೊಡೆದು ಸಂಬಳ ತೆಗೆದುಕೊಳ್ಳುವ ಈ ಶಿಕ್ಷಕರು ಇದ್ದಾರೆಷ್ಟು ಬಿಟ್ಟರೆಷ್ಟು ಎಂದು ಸ್ಥಳೀಯ ಸಾರ್ವಜನಿಕರು ಹರಿಹಾಯ್ದ ಘಟನೆ ನಡೆದಿದೆ.

    ವಸತಿ ಶಾಲೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಎಲ್ಲರೂ ಕೂಡ ಗ್ರಾಮೀಣ ಭಾಗದ ವಿದ್ಯಾರ್ಥಿಗಳಾಗಿದ್ದು, ವಿದ್ಯಾರ್ಥಿಗಳಿಗೆ ಹಿಂದಿ ಭಾಷೆ ಬಾರದ ಕಾರಣ ಶಿಕ್ಷಕರೊಂದಿಗೆ ಸಂವಾದ ಮಾಡುವುದು ಕಷ್ಟಕರವಾಗುತ್ತಿದೆ. ಆದ್ದರಿಂದ ಸರ್ಕಾರ ತಕ್ಷಣ ಎಚ್ಚೆತ್ತು ಸ್ಥಳೀಯ ಶಿಕ್ಷಕರನ್ನು ನಿಯೋಜನೆ ಮಾಡಬೇಕೆಂದು ಪೋಷಕರು ಮತ್ತು ಸ್ಥಳೀಯ ಸಾರ್ವಜನಿಕರು ಆಗ್ರಹಿಸಿದ್ದಾರೆ..

    ಪ್ರಿನ್ಸಿಪಾಲ್ ಮತ್ತು ವಾರ್ಡನ್ ಅಮಾನತ್ತಿಗೆ ಡಿಸಿ ಶುಭ ಕಲ್ಯಾಣ್ ಆದೇಶ:

    ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯು ನಡೆದಿದೆ. ನಾಲ್ಕು ದಿನಗಳಿಂದ ರಜೆಯಲ್ಲಿದ್ದ ವಾರ್ಡನ್ ಮಂಜುನಾಥ್ ಮತ್ತು ಪ್ರಿನ್ಸಿಪಾಲ್ ವಿನೋದ್ ಯಾದವ್ ಅವರನ್ನು ಅಮಾನತ್ತು ಮಾಡುವಂತೆ ಸೂಚನೆ ನೀಡಿರುವ ಘಟನೆಯು ನಡೆದಿದೆ.

    ಮೃತ ವಿದ್ಯಾರ್ಥಿ ಅಭಿಷೇಕ್ ಮೂಗು ಮತ್ತು ಬಾಯಲ್ಲಿ ರಕ್ತ:

    ಸುಸ್ತು ಆಗುತ್ತಿದೆ ಎಂದು ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮೃತ ವಿದ್ಯಾರ್ಥಿ ಅಭಿಷೇಕ್ ಯನ್ನು ನೋಡಲು ಹೋದ ವಿದ್ಯಾರ್ಥಿಗಳು ಶಾಕ್ ಆದ ಘಟನೆ ನಡೆದಿದೆ ಏಕೆಂದರೆ ಮೃತ ವಿದ್ಯಾರ್ಥಿ ಅಭಿಷೇಕ್ ಮೂಗು ಮತ್ತು ಬಾಯಲ್ಲಿ ರಕ್ತ ಮತ್ತು ಜೊಲ್ಲು ಬರುತ್ತಿದ್ದನು ಅಭಿಷೇಕ್ ಸಹಪಾಠಿ ವಿದ್ಯಾರ್ಥಿಗಳು ನೋಡಿ ಶಾಕ್ ಆಗಿರುವ ಘಟನೆಯೂ ಸಹ ನಡೆದಿದೆ. ನಂತರ ವಸತಿ ಶಾಲೆಯಲ್ಲಿ ಇದ್ದ ನರ್ಸ್ ಗಮನಕ್ಕೆ ತಂದ ವಿದ್ಯಾರ್ಥಿಗಳು ವಿಚಾರವನ್ನು ತಂದಿದ್ದಾರೆ. ನಂತರ ನರ್ಸ್ ಅಭಿಷೇಕ್ ನನ್ನು ನೋಡಿದಾಗ ಅಭಿಷೇಕ್ ಮೃತಪಟ್ಟಿರುವುದು ದೃಢವಾಗಿದೆ ನಂತರ ಸ್ಥಳೀಯ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಅಭಿಷೇಕ್ ನನ್ನು ತಪಾಸಣೆ ಮಾಡಿದಾಗ ಅಭಿಷೇಕ್ ಮೃತಪಟ್ಟಿರುವುದು ತಿಳಿದು ಬಂದಿರುತ್ತದೆ.

    ಮೃತ ವಿದ್ಯಾರ್ಥಿ ಅಭಿಷೇಕ್ ಸಾವಿಗೆ ಕಾರಣರಾದ ಪ್ರಿನ್ಸಿಪಾಲ್ ಮತ್ತು ಅಮಾನತ್ತು ಮಾಡಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜುಗೆ ಈಗಾಗಲೇ ನಾನು ಸೂಚನೆ ನೀಡಿದ್ದೇನೆ. ಮರಣೋತ್ತರ ಪರೀಕ್ಷೆಯ ಬಳಿಕ ವಿದ್ಯಾರ್ಥಿಯ ಸಾವಿಗೆ ಕಾರಣ ಏನೆಂಬುದು ಸಮಗ್ರ ತನಿಖೆಗೆ ನಾನು ಈಗಾಗಲೇ ಆದೇಶಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮಧುಗಿರಿಯ ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ:  ಜ.18ರಂದು ಹೊಸ ವರ್ಷದ ಮೊದಲ ಅಮಾವಾಸ್ಯೆ ವಿಶೇಷ ದರ್ಶನ

    December 31, 2025

    ಹರಿಹರೇಶ್ವರ ತತ್ತ್ವವೇ ಇಂದಿನ ಸಮಾಜಕ್ಕೆ ಅಗತ್ಯ ಮಧುಗಿರಿಯಿಂದ ಕೇಳಿಬರುವ ಏಕತೆಯ ಮೌನ ಸಂದೇಶ ಧರ್ಮವು ಮಾನವನನ್ನು ಒಗ್ಗೂಡಿಸಬೇಕಾದ ಶಕ್ತಿಯಾಗಬೇಕಾದರೆ, ಅದು…

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.