nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ನಿಗೂಢ ಸಾವು |  ಪ್ರಿನ್ಸಿಪಾಲ್, ವಾರ್ಡನ್ ಅಮಾನತು, ಸಮಗ್ರ ತನಿಖೆಗೆ ಆದೇಶ
    ಕೊರಟಗೆರೆ November 5, 2024

    ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅಭಿಷೇಕ್ ನಿಗೂಢ ಸಾವು |  ಪ್ರಿನ್ಸಿಪಾಲ್, ವಾರ್ಡನ್ ಅಮಾನತು, ಸಮಗ್ರ ತನಿಖೆಗೆ ಆದೇಶ

    By adminNovember 5, 2024No Comments3 Mins Read
    shubha kalyan

    ವರದಿ : ಮಂಜುಸ್ವಾಮಿ ಎಂ.ಎನ್.

    ತುಮಕೂರು : ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಜ್ಜನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.


    Provided by
    Provided by

    ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ವಾರ್ಡನ್ ಹಾಗೂ ಶಿಕ್ಷಕರ ನಿರ್ಲಕ್ಷ್ಯದಿಂದ ಅಭಿಷೇಕ್ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

    ಕೊರಟಗೆರೆ ತಾಲೂಕಿನ ಹೋಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಕುನಿತಿಮ್ಮನಹಳ್ಳಿ ಗ್ರಾಮದ ರಮೇಶ್ ಮತ್ತು ಮಂಜುಳಾ ದಂಪತಿಯ ಪುತ್ರ ಅಭಿಷೇಕ್ (13) ದೀಪಾವಳಿ ಹಬ್ಬಕ್ಕೆಂದು ಮನೆಗೆ ಹೋಗಿದ್ದ ಸೋಮವಾರ ಬೆಳಿಗ್ಗೆ ಪುನಃ ವಸತಿ ಶಾಲೆಗೆ ಮೃತ ವಿದ್ಯಾರ್ಥಿ ಬಂದಿದ್ದಾನೆ. ಮಧ್ಯಾಹ್ನದವರೆಗೂ ತರಗತಿಯಲ್ಲಿ ಕುಳಿತು ಪಾಠ ಕೇಳಿದ್ದಾನೆ. ಮಧ್ಯಾಹ್ನದ ಊಟದ ನಂತರ ಸುಸ್ತು ಆಗುತ್ತಿದೆ ಎಂದು ಹೇಳಿ ವಸತಿ ಶಾಲೆಯ ಕೊಠಡಿಗೆ ತೆರಳಿ ಮಲಗಿದ್ದಾನೆ. ಸಹಪಾಠಿಗಳು ವಿಚಾರಿಸಿದಾಗ ಅಭಿಷೇಕ್ ನನಗೆ ತುಂಬಾ ಸುಸ್ತು ಮತ್ತು ಆಯಾಸವಾಗುತ್ತಿದೆ ನಾನು ಮಲಗುತ್ತೇನೆ ಎಂದು ಹೇಳಿದ್ದಾನೆ.

    ವಸತಿ ಶಾಲೆಯ ಶಿಕ್ಷಕರ ಮತ್ತು ಪ್ರಿನ್ಸಿಪಾಲ್ ವಾರ್ಡನ್ ರವರ ದಿವ್ಯ ನಿರ್ಲಕ್ಷತೆಯಿಂದ ವಿದ್ಯಾರ್ಥಿ ಅಭಿಷೇಕ್ ಮೃತನಾಗಿದ್ದಾನೆ ಎಂದು ಪೋಷಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಸತಿ ಶಾಲೆಗೆ ಭೇಟಿ:

    ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂಬ ಮಾಹಿತಿ ಜಿಲ್ಲಾಧಿಕಾರಿಗಳ ಅಂಗಳಕ್ಕೆ ತಲುಪಿದ ಕೂಡಲೇ ಜಿಲ್ಲಾಧಿಕಾರಿ ಶುಭಕಲ್ಯಾಣ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ವಿದ್ಯಾರ್ಥಿ ಅಭಿಷೇಕ್ ಸಾವಿನ ಸಮಗ್ರ ತನಿಖೆಗೆ ಮಾಡಬೇಕೆಂದು ಆದೇಶ ನೀಡಿದರು.ನಾಲ್ಕು ದಿನಗಳಿಂದ ವಸತಿ ಶಾಲೆಯಲ್ಲಿ ಇಲ್ಲದೆ ರಜೆ ಹಾಕಿದ್ದ ಪ್ರಿನ್ಸಿಪಾಲ್ ಮತ್ತು ವಾರ್ಡನ್ ರನ್ನು ತಕ್ಷಣವೇ ಅಮಾನತು ಮಾಡಬೇಕೆಂದು ಸೂಚನೆ ನೀಡಿದರು.

    ವಸತಿ ಶಾಲೆಯ 29 ಶಿಕ್ಷಕರಿಗೂ ಕನ್ನಡ ಭಾಷೆ ಬರಲ್ಲ:

    ಹೊರ ರಾಜ್ಯದ ಶಿಕ್ಷಕರಿಗೆ ಕನ್ನಡ ಭಾಷೆ ಬಾರದ ಕಾರಣ ಸ್ಥಳೀಯ ಬಡ ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಪಾಠ ಮಾಡಲು ಕನ್ನಡ ಬಾರದವರನ್ನು ಇಲಾಖೆ ನಿಯೋಜನೆ ಮಾಡಿದ್ದು, ಮಕ್ಕಳ ಕಷ್ಟ ಸುಖಗಳನ್ನು ಆಲಿಸದೆ ಗಂಟೆ ಹೊಡೆದು ಸಂಬಳ ತೆಗೆದುಕೊಳ್ಳುವ ಈ ಶಿಕ್ಷಕರು ಇದ್ದಾರೆಷ್ಟು ಬಿಟ್ಟರೆಷ್ಟು ಎಂದು ಸ್ಥಳೀಯ ಸಾರ್ವಜನಿಕರು ಹರಿಹಾಯ್ದ ಘಟನೆ ನಡೆದಿದೆ.

    ವಸತಿ ಶಾಲೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಎಲ್ಲರೂ ಕೂಡ ಗ್ರಾಮೀಣ ಭಾಗದ ವಿದ್ಯಾರ್ಥಿಗಳಾಗಿದ್ದು, ವಿದ್ಯಾರ್ಥಿಗಳಿಗೆ ಹಿಂದಿ ಭಾಷೆ ಬಾರದ ಕಾರಣ ಶಿಕ್ಷಕರೊಂದಿಗೆ ಸಂವಾದ ಮಾಡುವುದು ಕಷ್ಟಕರವಾಗುತ್ತಿದೆ. ಆದ್ದರಿಂದ ಸರ್ಕಾರ ತಕ್ಷಣ ಎಚ್ಚೆತ್ತು ಸ್ಥಳೀಯ ಶಿಕ್ಷಕರನ್ನು ನಿಯೋಜನೆ ಮಾಡಬೇಕೆಂದು ಪೋಷಕರು ಮತ್ತು ಸ್ಥಳೀಯ ಸಾರ್ವಜನಿಕರು ಆಗ್ರಹಿಸಿದ್ದಾರೆ..

    ಪ್ರಿನ್ಸಿಪಾಲ್ ಮತ್ತು ವಾರ್ಡನ್ ಅಮಾನತ್ತಿಗೆ ಡಿಸಿ ಶುಭ ಕಲ್ಯಾಣ್ ಆದೇಶ:

    ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯು ನಡೆದಿದೆ. ನಾಲ್ಕು ದಿನಗಳಿಂದ ರಜೆಯಲ್ಲಿದ್ದ ವಾರ್ಡನ್ ಮಂಜುನಾಥ್ ಮತ್ತು ಪ್ರಿನ್ಸಿಪಾಲ್ ವಿನೋದ್ ಯಾದವ್ ಅವರನ್ನು ಅಮಾನತ್ತು ಮಾಡುವಂತೆ ಸೂಚನೆ ನೀಡಿರುವ ಘಟನೆಯು ನಡೆದಿದೆ.

    ಮೃತ ವಿದ್ಯಾರ್ಥಿ ಅಭಿಷೇಕ್ ಮೂಗು ಮತ್ತು ಬಾಯಲ್ಲಿ ರಕ್ತ:

    ಸುಸ್ತು ಆಗುತ್ತಿದೆ ಎಂದು ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮೃತ ವಿದ್ಯಾರ್ಥಿ ಅಭಿಷೇಕ್ ಯನ್ನು ನೋಡಲು ಹೋದ ವಿದ್ಯಾರ್ಥಿಗಳು ಶಾಕ್ ಆದ ಘಟನೆ ನಡೆದಿದೆ ಏಕೆಂದರೆ ಮೃತ ವಿದ್ಯಾರ್ಥಿ ಅಭಿಷೇಕ್ ಮೂಗು ಮತ್ತು ಬಾಯಲ್ಲಿ ರಕ್ತ ಮತ್ತು ಜೊಲ್ಲು ಬರುತ್ತಿದ್ದನು ಅಭಿಷೇಕ್ ಸಹಪಾಠಿ ವಿದ್ಯಾರ್ಥಿಗಳು ನೋಡಿ ಶಾಕ್ ಆಗಿರುವ ಘಟನೆಯೂ ಸಹ ನಡೆದಿದೆ. ನಂತರ ವಸತಿ ಶಾಲೆಯಲ್ಲಿ ಇದ್ದ ನರ್ಸ್ ಗಮನಕ್ಕೆ ತಂದ ವಿದ್ಯಾರ್ಥಿಗಳು ವಿಚಾರವನ್ನು ತಂದಿದ್ದಾರೆ. ನಂತರ ನರ್ಸ್ ಅಭಿಷೇಕ್ ನನ್ನು ನೋಡಿದಾಗ ಅಭಿಷೇಕ್ ಮೃತಪಟ್ಟಿರುವುದು ದೃಢವಾಗಿದೆ ನಂತರ ಸ್ಥಳೀಯ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಅಭಿಷೇಕ್ ನನ್ನು ತಪಾಸಣೆ ಮಾಡಿದಾಗ ಅಭಿಷೇಕ್ ಮೃತಪಟ್ಟಿರುವುದು ತಿಳಿದು ಬಂದಿರುತ್ತದೆ.

    ಮೃತ ವಿದ್ಯಾರ್ಥಿ ಅಭಿಷೇಕ್ ಸಾವಿಗೆ ಕಾರಣರಾದ ಪ್ರಿನ್ಸಿಪಾಲ್ ಮತ್ತು ಅಮಾನತ್ತು ಮಾಡಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜುಗೆ ಈಗಾಗಲೇ ನಾನು ಸೂಚನೆ ನೀಡಿದ್ದೇನೆ. ಮರಣೋತ್ತರ ಪರೀಕ್ಷೆಯ ಬಳಿಕ ವಿದ್ಯಾರ್ಥಿಯ ಸಾವಿಗೆ ಕಾರಣ ಏನೆಂಬುದು ಸಮಗ್ರ ತನಿಖೆಗೆ ನಾನು ಈಗಾಗಲೇ ಆದೇಶಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    ಬೆಂಗಳೂರು: ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ರಾಜ್ಯ…

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.