nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲ್ಲೂಕಿನಲ್ಲಿ ಇಳಿಮುಖವಾದ ಚರ್ಮಗಂಟು ರೋಗ: ನಿಟ್ಟುಸಿರು ಬಿಟ್ಟ ರೈತಾಪಿ ವರ್ಗ
    ಕೊರಟಗೆರೆ January 18, 2023

    ಕೊರಟಗೆರೆ ತಾಲ್ಲೂಕಿನಲ್ಲಿ ಇಳಿಮುಖವಾದ ಚರ್ಮಗಂಟು ರೋಗ: ನಿಟ್ಟುಸಿರು ಬಿಟ್ಟ ರೈತಾಪಿ ವರ್ಗ

    By adminJanuary 18, 2023No Comments3 Mins Read
    ganturoga
    • ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ಕೊರಟಗೆರೆ: ಇಡೀ ರಾಜ್ಯದಲ್ಲೇ ರೈತರ ನಿದ್ದೆಗೆಡಿಸಿದ್ದ ಜಾನುವಾರುಗಳಲ್ಲಿ ಕಂಡುಬಂದಿದ್ದ ಚರ್ಮಗಂಟು ರೋಗದ ಭಯದಿಂದ ರೈತರ ಬದುಕು ಬೀದಿಗೆ ಬಿದ್ದಂತಾಗಿತ್ತು. ಅಕ್ಕ ಪಕ್ಕದ ರಾಜ್ಯಗಳಿಂದ ತಗುಲಿದ್ದ ಚರ್ಮಗಂಟು ರೋಗ ರಾಜ್ಯಾದ್ಯಂತ ಹರಡಿ ಸಾವಿರಾರು ಜಾನುವಾರುಗಳು ಮರಣ ಹೊಂದಿದ್ದವು.

    ಚರ್ಮಗಂಟು ರೋಗ ಉಲ್ಬಣ ವಾಗುತ್ತಿದ್ದoತೆಯೇ ಎಚ್ಛೆತ್ತುಕೊಂಡ ಸರ್ಕಾರ ಸಂಬಂಧ ಪಟ್ಟ ಪಶು ಸಂಗೋಪನಾ ಇಲಾಖೆಯ ಮೂಲಕ ರಾಜ್ಯದಲ್ಲಿರುವ ಎಲ್ಲಾ ಪಶು ವೈದ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಲಸಿಕೆ ನೀಡಲು ಸೂಚಿಸಿದ್ದರಿಂದ ಚರ್ಮಗಂಟು ರೋಗ ನಿಯಂತ್ರಣದಲ್ಲಿದೆ.


    Provided by
    Provided by

    ಈ ರೋಗವು ಅತೀ ವೇಗವಾಗಿ ಹರಡಿದ ಹಿನ್ನೆಲೆ ರಾಜ್ಯಾಧ್ಯoತ ನಡೆಯುವ ಜಾನುವಾರು, ಕುರಿ ಮತ್ತು ಮೇಕೆಗಳ ಸಂತೆಗಳನ್ನು ನಡೆಸದಂತೆ ಸರ್ಕಾರ ಎಲ್ಲಾ ತಾಲ್ಲೂಕ್ ಆಡಳಿತಕ್ಕೆ ಆದೇಶ ಹೊರಡಿಸುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳು ಖಡಕ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಇದರಿಂದ ಈ ಚರ್ಮಗಂಟು ರೋಗದಲ್ಲಿ ಇಳಿಮುಖ ಕಂಡಿದೆ ಇಲ್ಲದಿದ್ದರೆ ರೈತಾಪಿ ವರ್ಗಕ್ಕೆ ಬರಸಿಡಿಲು ಬಡಿದಂತಾಗುತ್ತಿತ್ತು. ನಮ್ಮ ರಾಜ್ಯದಲ್ಲಿ ಮುಂದುವರಿದಿದ್ದ ಗೋಹತ್ಯೆ ಯನ್ನು ನಿಷೇಧಿಸಿ ಗೋವುಗಳನ್ನು ಉಳಿಸಲು, ಅವುಗಳನ್ನು ಬೆಳೆಸಲು ಸರ್ಕಾರ ಈಗಾಗಲೇ ನೂರಕ್ಕೂ ಹೆಚ್ಚು ಗೋಆಶ್ರಮಗಳನ್ನು ಪ್ರಾರಂಭ ಮಾಡಿದೆ.

    ಈ ರೋಗದಿಂದ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ  ಸರಿ ಸುಮಾರು  932 ರಾಸುಗಳು ಮೃತಪಟ್ಟಿದ್ದು, ಚಿಕ್ಕನಾಯಕನಹಳ್ಳಿ 39, ತುರುವೇಕೆರೆ 18, ತಿಪಟೂರು 29, ಮಧುಗಿರಿ  79 , ಶಿರಾ 230, ಕುಣಿಗಲ್ 111, ಕೊರಟಗೆರೆ 87, ಪಾವಗಡ 192, ಗುಬ್ಬಿ 88, ತುಮಕೂರು ತಾಲ್ಲೂಕಿನಲ್ಲಿ 49  ರಾಸುಗಳು ಚಮಗಂಟು ರೋಗದಿಂದ ಮರಣ ಹೊಂದಿವೆ.

    ಕೊರಟಗೆರೆ ತಾಲ್ಲೂಕಿನದ್ಯoತ ಒಟ್ಟು 37588 ರಾಸುಗಳಿದ್ದು, ಇದರಲ್ಲಿ ಸುಮಾರು 36996 ರಾಸುಗಳಿಗೆ ಲಸಿಕೆಯನ್ನು ನೀಡಲಾಗಿದೆ ಉಳಿದ 592 ರಾಸುಗಳು 3 ತಿಂಗಳ ಒಳಗಿರುವ ಕರುಗಳಾಗಿರುವುದರಿಂದ ಲಸಿಕೆಯನ್ನು ನೀಡಿಲ್ಲ.

    ಚರ್ಮಗಂಟು ರೋಗಕ್ಕೆ ನಮ್ಮ ತಾಲ್ಲೂಕಿನಲ್ಲಿ ಒಟ್ಟಾರೆ 87 ಜಾನುವಾರುಗಳು ಬಲಿಯಾಗಿದ್ದು ಈಗಾಗಲೇ ಸಂಬಂಧ ಪಟ್ಟ ಪಶು ಇಲಾಖೆಯ ಅಧಿಕಾರಿಗಳು 14 ಲಕ್ಷದ 10 ಸಾವಿರ ರೂಗಳನ್ನು ಸರ್ಕಾರಕ್ಕೆ ಪ್ರಸ್ತಾವನೆಗೆ ಸಲ್ಲಿಸಲಾಗಿದೆ. ಮೊದಲನೇ ಹಂತದಲ್ಲಿ 4 ರಾಸುಗಳಿಗೆ 1 ಲಕ್ಷ ರೂಪಾಯಿಗಳು ನೇರವಾಗಿ ರೈತರ ಖಾತೆಗೆ ಜಮಾ ಆಗಿದೆ, 2ನೇ ಹಂತದಲ್ಲಿ 4 ರಾಸುಗಳಿಗೆ 75. ಸಾವಿರ ಬಿಡುಗಡೆಯಾಗಿ ರೈತರ ಖಾತೆಗೆ ಜಮಾ ಆಗಬೇಕಾಗಿದೆ ಇದರ ಜೊತೆಗೆ 3 ನೇ ಹಂತದಲ್ಲಿ 42 ರಾಸುಗಳಿಗೆ 7 ಲಕ್ಷದ 10 ಸಾವಿರ ರೂಪಾಯಿ ಬಿಡುಗಡೆಯಾಗಿದೆ ಕೆಲ ದಿನಗಳಲ್ಲೇ ರೈತರ ಖಾತೆಗೆ ಸಂದಾಯವಾಗಲಿದೆ. ಇನ್ನು 5 ಲಕ್ಷದ 25 ಸಾವಿರ ರೂಪಾಯಿ ಬಿಡುಗಡೆಯಗಬೇಕಾಗಿದೆ.

    ಚರ್ಮಗಂಟು ರೋಗಕ್ಕೆ ಬಲಿಯಾದ ರಾಸುಗಳಿಗೆ ಸರ್ಕಾರದಿಂದ 1 ವರ್ಷದೊಳಗಿರುವ ಕರುಗಳಿಗೆ 5 ಸಾವಿರ, 1 ವರ್ಷ ಮೇಲ್ಪಟ್ಟ ಪಡ್ಡೆ ಅಥವಾ ಹಸುಗೆ 20 ಸಾವಿರ, 1 ವರ್ಷದ ಮೇಲ್ಪಟ್ಟ ಎತ್ತು ಅಥವಾ ಹೋರಿ ಮೃತಪಟ್ಟರೆ ರೈತರಿಗೆ 30 ಸಾವಿರ ಪರಿಹಾರ ಸಿಗಲಿದೆ. ಇದರ ಜೊತೆಗೆ ರೈತರು ತಮ್ಮ ರಾಸುಗಳಿಗೆ ವಿಮೆ ಮಾಡಿಸಿದ್ದಲ್ಲಿ ಅಂತಹವರಿಗೆ ವಿಮೆಯ ಹಣ ಬರುತ್ತದೆಯೇ ವಿನಃ ಅವರಿಗೆ ಸರ್ಕಾರದಿಂದ ಪರಿಹಾರದ ಹಣ ಸಿಗುವುದಿಲ್ಲ.

    ಚರ್ಮಗಂಟು ರೋಗಕ್ಕೆ ಸಂಬಂಧಿಸಿದಂತೆ ಇಡೀ ತಾಲ್ಲೂಕಿನಾದ್ಯoತ ಪ್ರತಿ ಹಳ್ಳಿ ಹಳ್ಳಿಗೂ ನಮ್ಮ ಇಲಾಖೆಯ ವೈದ್ಯರು ಭೇಟಿ ನೀಡಿ ಶೇಕಡಾ 100 ರಷ್ಟು ಲಸಿಕೆಯನ್ನು ನೀಡಿದ್ದೇವೆ. ಗ್ರಾಮೀಣ ಭಾಗದಲ್ಲಿ ಕೊಟ್ಟಿಗೆಯ ಅಕ್ಕಪಕ್ಕದಲ್ಲೇ ತಿಪ್ಪೆಗಳು ಇರುವುದರಿಂದ ನೊಣ, ಸೊಳ್ಳೆಗಳ ಹಾವಳಿಯಿಂದ ಈ ಖಾಯಿಲೆ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ರೈತರು ಕೊಟ್ಟಿಗೆಯನ್ನು ಸ್ವಚ್ಛವಾಗಿ ಇರಿಸುವುದು, ಜಾನುವಾರುಗಳಿಗೆ ಸಮತೋಲನದ ಆಹಾರವನ್ನು ಕೊಡಬೇಕಾಗಿದೆ ಈ ರೋಗವೂ ಕೊರಟಗೆರೆ ತಾಲ್ಲೂಕಿನಲ್ಲಿ ಶೇ. 98 ರಷ್ಟು ಇಳಿಮುಖ ಕಂಡಿದೆ. ತಾಲ್ಲೂಕಿನಲ್ಲಿ ಯಾವುದೇ ರೈತರ ರಾಸುಗಳಿಗೆ ಈ ರೋಗ ಕಂಡುಬದoರೆ ತಕ್ಷಣ ನಮ್ಮ ಪಶು ಆಸ್ಪತ್ರೆಯಲ್ಲಿ ಲಸಿಕೆ ಪಡೆಯಬಹುದು. ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರು ಡೈರಿಗಳ ಅಥವಾ ನಮ್ಮ ಪಶು ಇಲಾಖೆಗಳ ಮುಖಾoತರ ರಾಸುಗಳ ವಿಮೆಯನ್ನು ಮಾಡಿಸಿಕೊಳ್ಳಬೇಕಾಗಿದೆ.

    -ಡಾ.ಸಿದ್ದನಗೌಡ. ಆಡಳಿತ  ಮುಖ್ಯ ಪಶು ವೈದ್ಯಾಧಿಕಾರಿ. ಕೊರಟಗೆರೆ.

     

    ಚರ್ಮಘಂಟು ರೋಗದಿಂದ ನಮ್ಮ ಜಿಲ್ಲೆ ಸೇರಿದಂತೆ ತಾಲೂಕಿನಲ್ಲಿ ನೂರಾರು ರೈತರುಗಳು  ತಮ್ಮ ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ, ಗ್ರಾಮೀಣ ಭಾಗದಲ್ಲಿ ರೈತರು  ತಮ್ಮ ರಾಸುಗಳನ್ನು ಕಟ್ಟುವ ಕೊಟ್ಟಿಗೆಯ  ಅಕ್ಕ ಪಕ್ಕದಲ್ಲಿ  ನೊಣ ಹಾಗೂ ಸೊಳ್ಳೆಗಳು ಬಾರದಂತೆ ಸ್ವಚ್ಛತೆ ಕಾಪಾಡಬೇಕಾಗಿದೆ, ತಾಲೂಕಿನಾದ್ಯಂತ  ಪಶು ಇಲಾಖೆ ಅಧಿಕಾರಿಗಳು  ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ  ರಾಶಿಗಳಿಗೆ ಲಸಿಕೆಯನ್ನು ನೀಡುತ್ತಿದ್ದಾರೆ, ರೈತರು ಅತಿ ಮುಖ್ಯವಾಗಿ  ತಮ್ಮ ರಾಸುಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕಾಗಿದೆ  ಚರ್ಮಗುಂಟು ರೋಗದಿಂದ ತುತ್ತಾದ  ಜಾನುವಾರುಗಳ  ಕುಟುಂಬದ ರೈತರಿಗೆ ಸಿಗುತ್ತಿರುವ ಪರಿಹಾರ ಹಣವನ್ನು ಸರ್ಕಾರ  ಇನ್ನು ಹೆಚ್ಚು ಮಾಡಬೇಕಾಗಿದೆ.

    -ಶ್ರೀನಿವಾಸ್. ರೈತ ಹೊಳವನಹಳ್ಳಿ.

     

    ಚರ್ಮ ಗಂಟು  ಎಂಬ ಈ ಮಹಾಮಾರಿ ರೋಗದಿಂದ  ಸಾವಿರಾರು ಮೂಕ ಪ್ರಾಣಿಗಳು ಬಲಿಯಾಗಿವೆ. ಕರ್ನಾಟಕದಲ್ಲಿ  2020 ರಲ್ಲಿ ಕಾಣಿಸಿಕೊಂಡ ಈ ರೋಗವು  ರೈತರಲ್ಲಿ ಆತಂಕ ಸೃಷ್ಟಿಸಿತ್ತು, ಹೈನುಗಾರಿಕೆಯನ್ನೇ ನಂಬಿ  ಜೀವನ ಮಾಡುತ್ತಿದ್ದ ನಮ್ಮ ರೈತರಿಗೆ  ಈ ರೋಗದಿಂದ  ಬರಸಿಡಿಲು ಬಡಿದಂತಾಗಿತ್ತು. ಯಾವ ರೈತರ ಕುಟುಂಬಗಳು ಈ ಚರ್ಮಗಂಟು ರೋಗದಿಂದ  ರಾಸುಗಳನ್ನು ಕಳೆದುಕೊಂಡಿದ್ದರೋ ಅಂತಹ ರೈತರಿಗೆ ಹೆಚ್ಚು ದಿನಗಳ ಕಾಲ ಕಾಯಿಸದೆ ಸರ್ಕಾರ ಅತಿ ಜರೂರಾಗಿ   ಪರಿಹಾರದ ಹಣವನ್ನು   ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು. ತಾಲ್ಲೂಕಿನ ಕೆಲ ಪಶು ವೈದ್ಯರು ಸರ್ಕಾರದಿಂದ ಉಚಿತವಾಗಿ ಕೊಡುವ ಪಶು ಔಷದಿಗಳನ್ನು ರೈತರ ಜಾನುವಾರುಗಳಿಗೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಹಣ ಪಡೆಯುತ್ತಿದ್ದಾರೆ ಇದನ್ನು ಸಂಬಂಧ ಪಟ್ಟ ಮೇಲಾಧಿಕಾರಿಗಳು ಕೂಡಲೇ ಗಮನಿಸಿ ಕ್ರಮ ಕೈಗೊಳ್ಳಬೇಕು.

    -ರುದ್ರೇಶ್ ಗೌಡ, ತುಮಕೂರು ಜಿಲ್ಲಾ ಕಾರ್ಯದರ್ಶಿ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ. ಸದಸ್ಯರು. ಹಾಲು ಉತ್ಪಾದಕ ಸಹಕಾರ ಸಂಘ.ಲಂಕೇನಹಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಸಂತಪುರ: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರದ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.