ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದು ಇದನ್ನ ಗಮನದಲ್ಲಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ.
ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ ಒಪ್ಪಿಗೆ ಪಡೆಯಲಿದ್ದಾರೆ. ಬಜೆಟ್ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


