ತುಮಕೂರು: ಕೇವಲ ಪದವಿಗಾಗಿ ವಾಣಿಜ್ಯಶಾಸ್ತ್ರ ಅಧ್ಯಯನ ಮಾಡಬೇಡಿ. ವಾಣಿಜ್ಯೋದ್ಯಮಿಗಳಾದರೆ ಇಡೀ ಪ್ರಪಂಚವನ್ನೇ ಆಳಬಹುದು ಎಂದು ಕುಲಸಚಿವೆ ನಾಹಿದಾ ಜಮ್ ಜಮ್ ಹೇಳಿದರು.
ತುಮಕೂರು ವಿವಿ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗವು ಶನಿವಾರ ಆಯೋಜಿಸಿದ್ದ ಪ್ರಥಮವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೊಸ ಕಲ್ಪನೆಗಳು, ಆಲೋಚನೆಗಳಿಂದ ಸಂಪಾದನೆಯನ್ನು ವಿಶಿಷ್ಟ ರೀತಿಯಲ್ಲಿ ಮಾಡಬಹುದು. ಸ್ವಯಂ ಉದ್ಯೋಗದ ಕುರಿತು ವಿಚಾರ ಮಾಡಿ. ಪ್ರತಿ ದಿನಕ್ಕೂ ಬೆಲೆ ಇದೆ. ಮೃದು ಕೌಶಲ್ಯಗಳು, ಸಂವಹನದ ಕಡೆ ಗಮನಹರಿಸಿ ಎಂದು ಕಿವಿಮಾತು ಹೇಳಿದರು.
ವಿವಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಶೇಖರ್, ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಿ.ಪರಮಶಿವಯ್ಯ, ಪ್ರೊ.ಜಿ.ಸುದರ್ಶನರೆಡ್ಡಿ, ಸಹ ಪ್ರಾಧ್ಯಾಪಕ ಡಾ.ಸುರೇಶ್ ಬಿ.ಕೆ., ಕರ್ನಾಟಕ ಕೇಂದ್ರಿಯ ವಿವಿಯ ಪ್ರಾಧ್ಯಾಪಕ ಪ್ರೊ.ದೇವರಾಜಪ್ಪಎಸ್., ಉಪನ್ಯಾಸಕ ವಿಜಯ್ ಎನ್. ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx