nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025
    Facebook Twitter Instagram
    ಟ್ರೆಂಡಿಂಗ್
    • ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!
    • ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
    • ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ
    • ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ
    • ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ
    • ಬಮೂಲ್​​ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ: ಡಿ.ಕೆ. ಸುರೇಶ್​
    • ಸರೋಜಾದೇವಿ ಎಂದ ತಕ್ಷಣ ಚೆನ್ನಮ್ಮ, ಬಬ್ರುವಾಹನ ನೆನಪಾಗುತ್ತದೆ: ಸಿಎಂ ಸಂತಾಪ
    • ಅಭಿನಯ ಸರಸ್ವತಿ ಬಿ.ಸರೋಜಾದೇವಿ ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನುಕುಲ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯ: ಸಚಿವ ಡಾ.ಜಿ.ಪರಮೇಶ್ವರ
    ರಾಜ್ಯ ಸುದ್ದಿ October 4, 2024

    ಮನುಕುಲ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆ ಅಗತ್ಯ: ಸಚಿವ ಡಾ.ಜಿ.ಪರಮೇಶ್ವರ

    By adminOctober 4, 2024No Comments3 Mins Read
    dr g parameshwar

    ತುಮಕೂರು: ಮನುಷ್ಯ ಮತ್ತು ಸಕಲ ಜೀವಸಂಕುಲಗಳು ಬದುಕುಳಿಯಬೇಕಾದರೆ ಪರಿಸರವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು.

    ನಗರದ ಎಂಪ್ರೆಸ್ ಶಾಲೆ ಸಭಾಂಗಣದಲ್ಲಿಂದು ನಡೆದ 70ನೇ ವನ್ಯಜೀವಿ ಸಪ್ತಾಹ ಕಾರ್ಯ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ಪರಿಸರವನ್ನು ನಾಶಮಾಡಿರುವ ಪರಿಣಾಮ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಪ್ರಪಂಚದ ಹಸಿರು ಪದರ ಶೇಕಡಾ 30ರಷ್ಟಿದ್ದು, ದೇಶದಲ್ಲಿ ಶೇ.21.6, ರಾಜ್ಯದಲ್ಲಿ ಶೇ.21.2 ಹಾಗೂ ಜಿಲ್ಲೆಯಲ್ಲಿ ಶೇ.15ರಷ್ಟು ಮಾತ್ರ ಇದೆ. ಹಸಿರು ಪದರದ ಶೇಕಡ ಪ್ರಮಾಣ ಕಡಿಮೆಯಾಗಿ ಅನೇಕ ಜೀವ ಪ್ರಭೇದಗಳು ನಾಶದ ಅಂಚಿಗೆ ಬಂದು ನಿಂತಿವೆ. ಅರಣ್ಯ ನಾಶವಾದರೆ ವನ್ಯ ಜೀವಿಗಳೂ ಸಹ ನಾಶವಾಗುತ್ತವೆ. ವನ್ಯಜೀವಿಗಳನ್ನು ಸಂರಕ್ಷಿಸದಿದ್ದರೆ ಮುಂದಿನ ಪೀಳಿಗೆಯು ಪುಸ್ತಕ ಹಾಗೂ ಚಿತ್ರಗಳಲ್ಲಿ ಮಾತ್ರ ವನ್ಯ ಜೀವಿಗಳನ್ನು ನೋಡುವಂತಾಗುತ್ತದೆ ಎಂದರು.


    Provided by
    Provided by

    ಜಿಲ್ಲೆಯಲ್ಲಿ ಶೇಕಡಾ 15ರಷ್ಟು ಮಾತ್ರ ಹಸಿರು ಪದರವಿದ್ದು, ಹೆಚ್ಚಿನ ಗಿಡ-ಮರಗಳನ್ನು ಬೆಳೆಸಿ ಸಂರಕ್ಷಿಸಿ ಹಸಿರು ಪದರದ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಅರಣ್ಯ ಪ್ರದೇಶ ವಿಸ್ತರಣೆ ಮಾಡಬೇಕು. ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ನೆಡಲಾಗುವ ಲಕ್ಷಾಂತರ ಗಿಡಗಳನ್ನು ಸಂರಕ್ಷಿಸಿ ಬೆಳಸುವುದರ ಮೂಲಕ ಜಿಲ್ಲೆಯಲ್ಲಿ ಅರಣ್ಯ ಪ್ರದೇಶವನ್ನು ವಿಸ್ತರಿಸಬೇಕು ಎಂದು ತಿಳಿಸಿದರು.

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ, ವೈಯಕ್ತಿಕ ಬದುಕನ್ನು ಕಟ್ಟಿಕೊಳ್ಳಲು ಕಾಡುಗಳ ನಾಶ ಮಾಡುತ್ತಾ ಬಂದಿದ್ದೇವೆ. ಕಾಡುಗಳ ನಾಶದಿಂದ ಮನುಷ್ಯ ಮತ್ತು ವನ್ಯಜೀವಿಗಳ ನಡುವೆ ನಿರಂತರ ಸಂಘರ್ಷ ಉಂಟಾಗುವAತಾಗಿದೆ. ಈ ನಿಟ್ಟಿನಲ್ಲಿ ಶಾಲೆ ಆವರಣ ಸೇರಿದಂತೆ ಸರ್ಕಾರಿ ಜಾಗಗಳಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಡುವ ಮೂಲಕ ಅರಣ್ಯ ಪ್ರದೇಶವನ್ನು ಬೆಳೆಸಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಅರಣ್ಯ ಸಂರಕ್ಷಣೆ, ಒತ್ತುವರಿ ತೆರವು, ವನ್ಯ ಜೀವಿ ಸಂರಕ್ಷಣೆ, ಉತ್ತಮ ನೆಡುತೋಪು ಬೆಳವಣಿಗೆ ಮತ್ತು ಸಂರಕ್ಷಣೆ ಸೇರಿದಂತೆ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಗುಬ್ಬಿ ಉಪ ವಲಯದ ಅರಣ್ಯಾಧಿಕಾರಿ ಶಿವಪ್ರಸಾದ್; ಗಸ್ತು ಅರಣ್ಯಪಾಲಕರಾದ ಶಿರಾ ವಲಯದ ಬಿ.ಸಿ.ಮಂಜುನಾಥ್, ಕೊರಟಗೆರೆ ವಲಯದ ಟಿ.ನಿಂಗರಾಜು, ಕುಣಿಗಲ್ ವಲಯದ ಶಿವರಾಜು ಹಾಗೂ ಆರ್.ಶೇಖರ್; ಕ್ಷೇಮಾಭಿವೃದ್ಧಿ ನೌಕರರಾದ ಚಿಕ್ಕನಾಯಕನಹಳ್ಳಿ ವಲಯದ ಡಿ.ಸಿ.ಕೆಂಪಯ್ಯ, ತುಮಕೂರು ವಲಯದ ಹೆಚ್.ಎಲ್. ಗಂಗಣ್ಣ, ತಿಪಟೂರು ವಲಯದ ಹೊನ್ನಯ್ಯ, ಪಾವಗಡ ವಲಯದ ಮೂಡ್ಲಗಿರಿಯಪ್ಪ, ಮಧುಗಿರಿ ವಲಯದ ಶಿವರಾಜು ಹಾಗೂ ಬುಕ್ಕಾ ಪಟ್ಟಣ ವಲಯದ ನೆಡುತೋಪು ಕಾವಲುಗಾರ ರಾಮಚಂದ್ರಪ್ಪ ಸೇರಿದಂತೆ ಒಟ್ಟು 11 ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

    ವನ್ಯಜೀವಿ ಸಪ್ತಾಹ ಅಂಗವಾಗಿ ಆಯೋಜಿಸಿದ್ದ ವನ್ಯ ಜೀವಿ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಗಳಿಸಿದ ಶಿವಕುಮಾರ್ ನಟರಾಜನ್, ದ್ವಿತೀಯ ಸ್ಥಾನ ಗಳಿಸಿದ ಪ್ರಶಾಂತ್ ಬಿ. ನರ್ವಾಣಿ ರಾವ್, ತೃತೀಯ ಸ್ಥಾನ ಗಳಿಸಿದ ಕಿರಣ್ ವಾಸುದೇವ್ ಮತ್ತು ಉಮಾಶಂಕರ್ ಅವರಿಗೆ ಬಹುಮಾನ ವಿತರಿಸಲಾಯಿತು.

    ಅರಣ್ಯ ಸಂರಕ್ಷಿಸುವ ಹಾಗೂ ಅರಣ್ಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವನ್ಯ ಜೀವಿ ಛಾಯಾಗ್ರಾಹಕರಾದ ಬಿ.ವಿ. ಗುಂಡಪ್ಪ, ಡಾ: ಅಭಿಜಿತ್, ಡಾ: ಕೆ.ವಿ.ನಟರಾಜ್, ಹೇಮಂತ್, ಪ್ರೊ. ರುದ್ರಮೂರ್ತಿ ಹಾಗೂ ಜಿ.ಎ. ಚಂದುಬಾಬು; ಮಕ್ಕಳ ತಜ್ಞ ಹಾಗೂ ವನ್ಯ ಜೀವಿ ಛಾಯಾಗ್ರಾಹಕ ಡಾ: ಎಂ.ಎಲ್. ರಜಿತ್; ಹವ್ಯಾಸಿ ಪಕ್ಷಿ ಛಾಯಾಗ್ರಾಹಕ ಡಾ: ಬಿ. ಉಮಾಶಂಕರ್; ವಾರ್ಕೋ ಸಂಸ್ಥಾಪಕ ಕಾರ್ತಿಕ್ ಸಿಂಗ್; ವೈಲ್ಡ್ಲೈಫ್ ಅವೇರ್ ನೇಚರ್ ಕ್ಲಬ್ ಸದಸ್ಯ ಎಂ. ಮಲ್ಲಿಕಾರ್ಜುನ್, ವಿಪಿನ್ ರಾಯ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ತುಮಕೂರು ಜಿಲ್ಲೆಯಲ್ಲಿರುವ ವಿವಿಧ ಪ್ರಬೇಧಗಳ ಪಕ್ಷಿ ಸಂಕುಲ, ಚಿಟ್ಟೆ, ಸರೀಸೃಪ ಸಂಕುಲಗಳ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಲಾಯಿತು.
    ಎಸ್.ಐ.ಟಿ.ಯ ಅರುಣ್ಸ್ ಆಲ್ಫಾ ಅಕಾಡೆಮಿಯಿಂದ ವನ್ಯ ಜೀವಿಗಳೊಂದಿಗೆ ಸಹಬಾಳ್ವೆಯಿಂದ ಬದುಕುವ ಬಗ್ಗೆ ಕಿರು ನಾಟಕ ಪ್ರದರ್ಶಿಸಲಾಯಿತು.

    ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಸ್ವಾಗತಿಸಿದರು. ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್. ರವಿಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವರಾಜ್ ವಂದಿಸಿದರು. ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಎನ್ಸಿಸಿ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025
    Our Picks

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಸ ವಿಲೇವಾರಿ ವಾಹನವನ್ನೇ ಕದ್ದ ಕಳ್ಳರು!

    July 14, 2025

    ರಾಯಚೂರು: ಕಸ ವಿಲೇವಾರಿ ವಾಹನಗಳನ್ನು ಕದ್ದಿರುವ ಘಟನೆ ಕವಿತಾಳ ಪಟ್ಟಣ ಪಂಚಾಯತಿ ಕಚೇರಿ ಆವರಣದಲ್ಲಿ ನಡೆದಿದೆ. ಪಟ್ಟಣ ಪಂಚಾಯತಿ ಕಚೇರಿ…

    ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

    July 14, 2025

    ಕೌಠಾ ಬಿ ಗ್ರಾಮ ಪಂಚಾಯತ್: ಹೆದ್ದಾರಿಗೆ ರಸ್ತೆಗೆ ಬ್ಯಾರಿಕೇಡ್ ಅಳವಡಿಕೆ

    July 14, 2025

    ‘ಶಕ್ತಿ ಯೋಜನೆ’ ಹೊಸ ಮೈಲಿಗಲ್ಲು: 500ನೇ ಕೋಟಿ ಟಿಕೆಟ್ ವಿತರಣೆ

    July 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.