nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026
    Facebook Twitter Instagram
    ಟ್ರೆಂಡಿಂಗ್
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎರಡು ವರ್ಷದಲ್ಲಿ ಹಸ್ತಪ್ರತಿ, ತಾಳೆಗರಿಗೆ ಡಿಜಿಟಲ್ ರೂಪ: ಡಾ.ಸಿ.ಎನ್. ಅಶ್ವಥ್ ನಾರಾಯಣ್
    ರಾಜ್ಯ ಸುದ್ದಿ September 29, 2022

    ಎರಡು ವರ್ಷದಲ್ಲಿ ಹಸ್ತಪ್ರತಿ, ತಾಳೆಗರಿಗೆ ಡಿಜಿಟಲ್ ರೂಪ: ಡಾ.ಸಿ.ಎನ್. ಅಶ್ವಥ್ ನಾರಾಯಣ್

    By adminSeptember 29, 2022No Comments2 Mins Read
    ashwath narayana

    ಇನ್ನೆರಡು ವರ್ಷದಲ್ಲಿ ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಪ್ರಾಚ್ಯ ವಸ್ತು ಸಂಗ್ರಹಾಲಯದಲ್ಲಿರುವ ತಾಳೆಗರಿ ಹಾಗೂ ಹಸ್ತಪ್ರತಿಗೆ ಡಿಜಿಟಲ್‌ ಸ್ಪರ್ಶ ಸಿಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
    ಮೈಸೂರು ವಿಶ್ವವಿದ್ಯಾನಿಲಯ ಮತ್ತು ದಿ ಮಿಥಿಕ್ ಸೊಸೈಟಿ ಸಹಯೋಗದೊಂದಿಗೆ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ನಡೆದ ಹಸ್ತಪ್ರತಿ ಸಂರಕ್ಷಣಾ ಮತ್ತು ಪ್ರಧೂಮೀಕರಣ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

    ನಮ್ಮ ಪ್ರಾಚೀನ ಪರಂಪರೆ ಹಾಗೂ ಜ್ಞಾನ ಭಂಡಾರವನ್ನು ಹಿರಿಯರು ತಾಳೆಗರಿಯಲ್ಲಿ ಸಂಗ್ರಹಿಸಿದ್ದಾರೆ. ತಾಳೆಗರಿಯಲ್ಲಿ ಸಾಧಕರ ಬಗ್ಗೆ ಮಾಹಿತಿ ಇದೆ. ಇದು ಸಂರಕ್ಷಣೆ ಆಗಬೇಕು. ಇದರ ಪ್ರಯೋಜನ ಮುಂದಿನ ಪೀಳಿಗೆಗೆ ಸಿಗಬೇಕೆಂಬ ಉದ್ದೇಶದಿಂದ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಡಿಜಿಟಲೀಕರಣ ನಡೆಯುತ್ತಿದೆ.‌ ಈ ನಿಟ್ಟಿನಲ್ಲಿ ಈಗಾಗಲೇ ಐದು ತಿಂಗಳ‌ ಕೆಲಸ ಮುಗಿದಿದೆ. ಇನ್ನೆರಡು ವರ್ಷದಲ್ಲಿ ತಾಳೆಗರಿ ಮತ್ತು ಹಸ್ತಪ್ರತಿ ಸಂಪೂರ್ಣ ಡಿಜಿಟಲ್ ಆಗಲಿದೆ ಎಂದು ತಿಳಿಸಿದರು.

    ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಜ್ಞಾನದ ಸಂಪನ್ಮೂಲ ತಾಳೆಗರಿ. ಮೈಸೂರು ವಿವಿ ಜಗತ್ತಿಗೆ ಜ್ಞಾನದ ದಾಸೋಹ ಕೊಟ್ಟಿದೆ.‌ ಮೈಸೂರು ವಿವಿ ಶುರುವಾಗುವ ಮುನ್ನ ಪ್ರಾಚ್ಯ ವಸ್ತುಸಂಗ್ರಹಾಲಯ ಕೇಂದ್ರ ಶುರುವಾಗಿತ್ತು. ಇಲ್ಲಿಂದಲೇ ಜ್ಞಾನ ಸಂಪನ್ಮೂಲ ಹಂಚಿಕೆ ಆಯಿತು. ಹೀಗಾಗಿ ಮೈಸೂರು ಸಂಸ್ಥಾನ ವಿಶ್ವದಲ್ಲೇ ಗಮನ ಸೆಳೆದಿದೆ. ನಾವು ಸಮಾಜದ ಅಭಿವೃದ್ಧಿಗೆ ಮರಳಿ‌ಕೊಡುವ ಕೆಲಸವನ್ನು ಮಾಡಬೇಕು.ಈ ನಿಟ್ಟಿನಲ್ಲಿ ಇದೊಂದು ಉತ್ತಮ ಕಾರ್ಯ ಎಂದರು.

    ಮೈಸೂರು ಪ್ರಾಚ್ಯ ವಸ್ತು ಸಂಗ್ರಹಾಲಯದಲ್ಲಿ 16 ಸಾವಿರ ತಾಳೆಗರಿ, ಐದು ಸಾವಿರ ಹಸ್ತಪ್ರತಿ ಇವೆ. ಇವೆಲ್ಲದಕ್ಕೂ ಡಿಜಿಟಲ್ ಸ್ಪರ್ಶ ಸಿಗುಲಿದೆ. ಮುಂದಿನ ಪೀಳಿಗೆಗೆ ಇದು ಲಭ್ಯವಾಗಲಿದೆ. ಸಂಶೋಧನಾ ವಿದ್ಯಾರ್ಥಿಗಳಿಗೂ ಇದರಿಂದ ಅನುಕೂಲವಾಗಲಿದೆ.‌ 21 ನೇ ಶತಮಾನ ಜ್ಞಾನವನ್ನೇ ಅವಲಂಬಿಸಿದೆ. ಜ್ಞಾನಕ್ಕೆ ಪೂರಕವಾದ ಕೆಲಸಕ್ಕೆ ಹಸ್ತಪ್ರತಿ ಗಳೇ ಆಧಾರ. ಹಾಗೆ ದ್ವೇಷ, ವೈಷಮ್ಯಕ್ಕೆ ಜ್ಞಾನವೇ ಪರಿಹಾರ. ಜ್ಞಾನ ಧಾರೆ ಹೆಚ್ಚಿಸುವ ಕೆಲಸ ಇದು ಎಂದು ಶ್ಲಾಘಿಸಿದರು.

    ಜನಸಂಖ್ಯೆ ಗೆ ಅನುಗುಣವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಿಲಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಅನುಷ್ಠಾನಕ್ಕೆ ತರುತ್ತಿರುವ ಮೂರನೇ ಶಿಕ್ಷಣ ನೀತಿ ಇದು. ಜ್ಞಾನದ ಜೊತೆಗೆ ಕೌಶಲ್ಯ ವೃದ್ದಿಗೂ ಇದು ಅವಕಾಶ‌ ಮಾಡಿಕೊಟ್ಟಿದೆ. ಇದೊಂದು ಅತ್ಯುನ್ನತ ಶಿಕ್ಷಣ ನೀತಿ ಎಂದು ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಸಿಎಂ ಸಲಹೆಗಾರರಾದ ಬೇಳೂರು ಸುದರ್ಶನ್, ಮಿಥಿಕ್ ಸೊಸೈಟಿ ಗೌ.ಕಾರ್ಯದರ್ಶಿ ವಿ. ನಾಗರಾಜ್, ಪ್ರಾಚ್ಯ ವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ.ರಾಮಪ್ರಿಯ ಸೇರಿದಂತೆ ಇತರರು ಇದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳು…

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.