nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 40% ಕಮಿಷನ್ ದಂಧೆ: ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
    ತುಮಕೂರು April 20, 2022

    40% ಕಮಿಷನ್ ದಂಧೆ: ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

    By adminApril 20, 2022No Comments3 Mins Read
    congress protest

    ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮೀಷನ್ ದಂಧೆ ಖಂಡಿಸಿ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಇಲ್ಲಿನ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ಜಿಲ್ಲಾ ಕಾಂಗ್ರೆಸ್ ನಾಯಕರು ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.


    Provided by
    Provided by
    Provided by

    ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಎಫ್ಐಆರ್‌ನಲ್ಲಿ ಸೇರ್ಪಡೆ ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

    ಬಿಜೆಪಿ ಪಕ್ಷದ ಮುಖಂಡನಾಗಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಹ ದಯನೀಯ ಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಇದು ಆ ಪಕ್ಷ ಹಾಗೂ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದು ಕಿಡಿಕಾರಿದರು.

    ಭ್ರಷ್ಟಾಚಾರದ ಆರೋಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಈಶ್ವರಪ್ಪನವರ ಬಗ್ಗೆ ಮುಖ್ಯಮಂತ್ರಿಗಳು ನೀಡುತ್ತಿರುವ ಹೇಳಿಕೆಯನ್ನು ಗಮನಿಸಿದರೆ ಈಗಾಗಲೇ ಈಶ್ವರಪ್ಪನವರು ನಿರ್ದೋಷಿ ಎಂದು ಅವರೇ ತೀರ್ಮಾನ ಮಾಡಿದಂತೆ ಕಂಡು ಬರುತ್ತಿದೆ. ಮುಖ್ಯಮಂತ್ರಿಗಳು ಇಂತಹ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದರು.

    ಭ್ರಷ್ಟಾಚಾರ ಎಲ್ಲ ಕಾಲದಲ್ಲೂ ಇದೆ. ಆದರೆ ಈ ರೀತಿ ಅತಿರೇಖಕ್ಕೆ ಹೋಗಿದ್ದನ್ನು ನಾನೆಂದೂ ನೋಡಿರಲಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

    ಸ್ವಾಮೀಜಿಗಳನ್ನು ನಾವು ಎರಡನೇ ದೇವರು ಎಂದು ಕರೆಯುತ್ತೇವೆ. ಆದರೆ ಬಿಜೆಪಿ ಸರ್ಕಾರ ಸ್ವಾಮೀಜಿಗಳ ಬಳಿಯೂ ಕಮೀಷನ್ ಪಡೆದಿದೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ ಅವರು, ಈ ಸರ್ಕಾರ ಜನರ ತೆರಿಗೆ ಹಣವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ. ಇದು ಸರಿಯಲ್ಲ. ರಾಜ್ಯದ ಜನರ ಶ್ರೇಯೋಭಿವೃದ್ಧಿಗೆ ತೆರಿಗೆ ಹಣ ವಿನಿಯೋಗವಾಗಬೇಕು ಎಂದರು.

    ಬಿಜೆಪಿ ಸರ್ಕಾರ ಬಂದ ಮೇಲೆ ಸರ್ಕಾರಿ ಕಚೇರಿಗಳು ಲಂಚಮಯವಾಗಿವೆ. ಭ್ರಷ್ಟಚಾರ ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿಗಳು ಇದುವರೆಗೂ ಹೇಳಿದ ಮಾತಿನಂತೆ ನಡೆದುಕೊಳ್ಳದೆ ಬರೀ ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು.

    ದೇಶದ ಜನರ ಖಾತೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದ ಪ್ರಧಾನಿಗಳು ಅವರ ಖಾತೆಗೆ ಹಣ ಹಾಕುವುದಿರಲಿ, ಇದ್ದ ಉದ್ಯೋಗವನ್ನು ಕಿತ್ತುಕೊಂಡು ನಿರುದ್ಯೋಗ ಸಮಸ್ಯೆ ತಾಂಡವವಾಡುವಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮಾಜಿ ಸಚಿವ ಟಿ.ಬಿ. ಜಯಚಂದ್ರ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸಂಟೇಜ್ ಕಮೀಷನ್ ನೀಡಬೇಕಾಗಿದೆ ಎಂದು ಸ್ವತಃ ಗುತ್ತಿಗೆದಾರರೇ ಆರೋಪಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೂ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. ಪ್ರತಿಭಟನೆ ಮಾಡಿದಷ್ಟೂ ಪರ್ಸಂಟೇಜ್ ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿದರು.

    ಭ್ರಷ್ಟ ಬಿಜೆಪಿ ಪಕ್ಷ ರಾಜ್ಯದಿಂದ ತೊಲಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದರು.

    ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿದ್ದರು. ಈಗ ಮಂತ್ರಿಗಳು ಸಹ ಜೈಲಿಗೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡು ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದರು.

    ಶಾಸಕ ವೆಂಕಟರಮಣಪ್ಪ ಮಾತನಾಡಿ, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ನಡೆಯುತ್ತಿರುವ 40 ಪರ್ಸೆಂಟ್ ಕಮೀಷನ್ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿದರು.

    ಮಾಜಿ ಶಾಸಕ ಡಾ. ರಫೀಕ್ಅಹಮದ್ ಮಾತನಾಡಿ,  ಮಾಜಿ ಸಚಿವ ಈಶ್ವರಪ್ಪ ಹಾಗೂ ಇತರೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತನಿಖೆಯನ್ನು ಹಾಲಿ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಬೇಕು ಎಂದರು.

    ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಅಜಯ್ ಅವರಿಗೆ ಕಾಂಗ್ರೆಸ್ ನಾಯಕರುಗಳು ಮನವಿ ಪತ್ರ ಸಲ್ಲಿಸಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಮಾಜಿ ಶಾಸಕರಾದ ಆರ್. ನಾರಾಯಣ್, ಕೆ. ಷಡಕ್ಷರಿ, ಬಿ.ಬಿ. ರಾಮಸ್ವಾಮಿಗೌಡ, ಎಂ.ಡಿ. ಲಕ್ಷ್ಮೀನಾರಾಯಣ್, ಹೊನ್ನಗಿರಿಗೌಡ, ಚೌದ್ರಿರಂಗಪ್ಪ, ಇಕ್ಭಾಲ್ ಅಹಮದ್, ಅತೀಕ್ ಅಹಮದ್, ಲೋಕೇಶ್ವರ್, ಕೆಂಚಮಾರಯ್ಯ, ಸಿಮೆಂಟ್ ಮಂಜುನಾಥ್, ಆಟೋರಾಜು, ಮೆಹಬೂಬು ಪಾಷ, ಪಾಲಿಕೆ ಸದಸ್ಯರಾದ ಮಹೇಶ್, ಶಕೀಲ್ ಅಹಮದ್, ರೂಪ ಶೆಟ್ಟಳ್ಳಯ್ಯ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಬೀದರ್: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲ…

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.