nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    • ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
    • ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
    • ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    • ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ರೋಹಿತ್, 66 ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ನಾಯಕ
    ರಾಷ್ಟ್ರೀಯ ಸುದ್ದಿ March 7, 2022

    ಚೊಚ್ಚಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸಿದ ರೋಹಿತ್, 66 ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ನಾಯಕ

    By adminMarch 7, 2022No Comments2 Mins Read
    rohith

    ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 222 ರನ್‌ಗಳಿಂದ ಸೋಲಿಸಿದೆ. ಇದರೊಂದಿಗೆ ಭಾರತ ತಂಡ ಎರಡು ಟೆಸ್ಟ್‌ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ ಟೆಸ್ಟ್ ಗೆಲುವಿನೊಂದಿಗೆ ನಾಯಕನಾಗಿ ಕೂಡ ಶುಭಾರಂಭ ಮಾಡಿದ್ದಾರೆ.

    ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾದವು. ರವೀಂದ್ರ ಜಡೇಜಾಗೆ ಈ ಪಂದ್ಯವು ತುಂಬಾ ವಿಶೇಷವಾಗಿತ್ತು, ಜಡೇಜಾ ಅವರು ಅಂತರರಾಷ್ಟ್ರೀಯ ವೃತ್ತಿಜೀವನದ ಅತಿದೊಡ್ಡ ಇನ್ನಿಂಗ್ಸ್ ಆಡಿದರು, ನಂತರ ವಿರಾಟ್ ಕೊಹ್ಲಿ (Virat Kohli) ತಮ್ಮ ವೃತ್ತಿಜೀವನದಲ್ಲಿ 100 ಟೆಸ್ಟ್ ಪಂದ್ಯಗಳನ್ನು ಪೂರ್ಣಗೊಳಿಸಿದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕನಾಗಿಯೂ ಅಂತಹ ದಾಖಲೆಯನ್ನು ಮಾಡಿದ್ದಾರೆ, ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ (Mahendra SIngh Dhoni) ಕೂಡ ಅವರ ಹೆಸರಿನಲ್ಲಿ ಈ ದಾಖಲೆ ಮಾಡಲು ಸಾಧ್ಯವಾಗಲಿಲ್ಲ.

    ಮತ್ತೊಂದು ವಿಶೇಷ ದಾಖಲೆ ನಿರ್ಮಿಸಿದ ರೋಹಿತ್ :

    ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ತಂಡವೂ ನಿರಂತರವಾಗಿ ಜಯಗಳಿಸುತ್ತಾ ಹಲವು ದಾಖಲೆಗಳನ್ನು ತನ್ನ ಹೆಸರಲ್ಲಿ ಬರೆಯುತ್ತಿದೆ. ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಈ ಪಂದ್ಯದ ಗೆಲುವಿನೊಂದಿಗೆ ರೋಹಿತ್ ತಮ್ಮ ಚೊಚ್ಚಲ ನಾಯಕತ್ವದಲ್ಲಿಯೇ ಹೊಸ ಇತಿಹಾಸ ನಿರ್ಮಿಸಿದ್ದಾರೆ. ರೋಹಿತ್ ಪಾಲಿ ಉಮ್ರಿಗರ್ ನಂತರ ತಮ್ಮ ಮೊದಲ ಟೆಸ್ಟ್ ಅನ್ನು ಇನ್ನಿಂಗ್ಸ್ ಅಂತರದಿಂದ ಗೆದ್ದ ಎರಡನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೊಹಾಲಿ ಟೆಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧದ ಸಂಪೂರ್ಣ ಪಂದ್ಯದಲ್ಲಿ ಭಾರತ ಪ್ರಾಬಲ್ಯ ಸಾಧಿಸಿದೆ. 1955ರಲ್ಲಿ ಉಮ್ರಿಗರ್ ನಾಯಕತ್ವದಲ್ಲಿ ಭಾರತ ತಂಡ ಇನಿಂಗ್ಸ್ ಅಂತರದಿಂದ ಜಯಗಳಿಸಿತು. ಈ ಪಂದ್ಯದಲ್ಲಿ ಉಮ್ರಿಗರ್ ಅವರು ಟೀಮ್ ಇಂಡಿಯಾದ ಕಮಾಂಡರ್ ಆಗಿದ್ದರು.

    ಜಡೇಜಾ-ಅಶ್ವಿನ್‌ ಗೆ ಮೊದಲ ಟೆಸ್ಟ್:

    ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ (Ravindra Jadeja) ಮತ್ತು ರವಿಚಂದ್ರನ್ ಅಶ್ವಿನ್ ಕಪಿಲ್ ದೇವ್ ಅವರ ಎರಡು ದೊಡ್ಡ ದಾಖಲೆಗಳನ್ನು ಮುರಿದರು. ಮೊದಲು ಜಡೇಜಾ ಏಳನೇ ಸ್ಥಾನಕ್ಕೆ ಬಂದು ಅಜೇಯ 175 ರನ್ ಗಳಿಸಿದರು ಮತ್ತು ಈ ಸಂಖ್ಯೆಯಲ್ಲಿ ಭಾರತಕ್ಕೆ ಅತಿದೊಡ್ಡ ಇನ್ನಿಂಗ್ಸ್ ಆಡಿದ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು ಕಾನ್ಪುರದಲ್ಲಿ ಶ್ರೀಲಂಕಾ ವಿರುದ್ಧ ಕಪಿಲ್ ದೇವ್ 163 ರನ್ ಗಳಿಸಿದ್ದರು. ಇದಾದ ಬಳಿಕ ಅಶ್ವಿನ್ ಅತಿ ಹೆಚ್ಚು ವಿಕೆಟ್ ಪಡೆದ ವಿಚಾರದಲ್ಲಿ ಕಪಿಲ್ ದೇವ್ ಅವರನ್ನು ಹಿಂದಿಕ್ಕಿದರು. ಟೆಸ್ಟ್‌ನಲ್ಲಿ ಅಶ್ವಿನ್ 436 ವಿಕೆಟ್ ಪಡೆದಿದ್ದರೆ, ಕಪಿಲ್ ದೇವ್ 434 ವಿಕೆಟ್ ಪಡೆದಿದ್ದಾರೆ. ಮೊಹಾಲಿ ಟೆಸ್ಟ್ 3 ದಿನಗಳಲ್ಲಿ ಕೊನೆಗೊಂಡಿತು:

    ಮೊಹಾಲಿ ಟೆಸ್ಟ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎರಡನೇ ದಿನ 8 ವಿಕೆಟ್‌ಗೆ 574 ರನ್ ಗಳಿಸುವ ಮೂಲಕ ತನ್ನ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿದೆ. ಇದಕ್ಕೆ ಉತ್ತರವಾಗಿ, ಶ್ರೀಲಂಕಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 174 ರನ್‌ಗಳಿಗೆ ಆಲೌಟ್ ಆಯಿತು ಮತ್ತು ಭಾರತವು ಶ್ರೀಲಂಕಾವನ್ನು ಫಾಲೋ-ಆನ್ ಮಾಡಲು ಒತ್ತಾಯಿಸಿತು. ಎರಡನೇ ಇನ್ನಿಂಗ್ಸ್‌ನಲ್ಲೂ ಶ್ರೀಲಂಕಾ ತಂಡ ಸಂಪೂರ್ಣ ಒತ್ತಡಕ್ಕೆ ಸಿಲುಕಿದ್ದು, ಈ ಇನಿಂಗ್ಸ್‌ನಲ್ಲಿ 60 ಓವರ್‌ಗಳಲ್ಲಿ 178 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಜಡೇಜಾ 4 ಹಾಗೂ ಅಶ್ವಿನ್ 4 ವಿಕೆಟ್ ಪಡೆದರು. ಇದೀಗ ಉಭಯ ತಂಡಗಳ ನಡುವೆ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಟೆಸ್ಟ್ ಪಂದ್ಯವನ್ನು ಡೇ ನೈಟ್ ಟೆಸ್ಟ್ ಆಗಿ ಆಡಲಾಗುತ್ತದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ

    August 13, 2026

    ಕೊರಟಗೆರೆ: ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಯಾವುದೇ ಕೊರತೆಯಿಲ್ಲ, ಆದರೆ ಪ್ರಾಮಾಣಿಕತೆಯ ಕೊರತೆ ಕಂಡುಬರುತ್ತಿದೆ. ಇದನ್ನು ಹೋಗಲಾಡಿಸಲು ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯತೆ…

    ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!

    August 13, 2026

    ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ

    August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.