ಪಾವಗಡ: ಪ್ರಸ್ತುತ ದಿನಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮುಂದಿನ ಪೀಳಿಗೆಯ ಬಗ್ಗೆ ಯೋಚಿಸದೆ ಮರಗಳನ್ನು ಕಡಿಯುತ್ತಿದ್ದು, ಇದರಿಂದ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪಾವಗಡ ತಾಲ್ಲೂಕಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ರೇಣುಕಾರಾಜ್ ಹೇಳಿದರು.
ಪರಿಸರ ಯುವಮಿತ್ರ ಬಳಗದ ಹೆಸರಿನಲ್ಲಿ ಐತಿಹಾಸಿಕ ಸ್ಥಳವಾದ ನಿಡಿಗಲ್ಲು ದುರ್ಗದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಬೀಜ ಉತ್ಪಾದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಸಹಕರಿಸಿ, ಅರಣ್ಯ ಬೆಳೆಸಲು ಶ್ರಮಿಸಬೇಕು ಎಂದು ಕೋರಿದರು.
ಶಾಲಾ ವಿದ್ಯಾರ್ಥಿಗಳು, ಯುವಮಿತ್ರ ಬಳಗದ ಸದಸ್ಯರಾದ ವಿನಯ್ಕುಮಾರ್, ಭೂತೇಗೌಡ, ವಿದ್ಯಾಶಂಕರಗೌಡ, ತ್ರಿಶೂಲ್ ಗೌಡ, ಮಹೇಶ್, ಶ್ರೀನಿವಾಸುಲು, ಗುಜ್ಜರಿ, ದಿನೇಶ್, ಆರ್.ಟಿ.ಗೌಡ, ರೂಪಿತ್ ಮತ್ತು ಹೇಮಂತ್ ಅವರನ್ನು ಶಾಲಾ ಸಿಬ್ಬಂದಿ ಅಭಿನಂದಿಸಿದರು.
ವರದಿ : ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA