nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026
    Facebook Twitter Instagram
    ಟ್ರೆಂಡಿಂಗ್
    • ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    • ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!
    ಜಿಲ್ಲಾ ಸುದ್ದಿ September 5, 2026

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    By Ganesh TumkuruSeptember 5, 2026No Comments2 Mins Read
    holenarasipur

    ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ ಮುಚ್ಚಿದ ಪ್ರಕರಣ ಈಗ ಜೆಡಿಎಸ್ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ! ಅಂದು ‘ತಮ್ಮದೇ ಆಡಳಿತ’ ಎಂಬ ಅಹಂನಲ್ಲಿ ಸಾರ್ವಜನಿಕ ರಸ್ತೆಯನ್ನೇ ನಕಲಿ ದಾಖಲೆ ಸೃಷ್ಟಿಸಿ ಬಂದ್ ಮಾಡಿದ್ದ ನಾಯಕರಿಗೆ, ಈಗ ಲೋಕಾಯುಕ್ತ ತನಿಖೆಯ ಬಿಸಿ ತಟ್ಟಲಾರಂಭಿಸಿದೆ.

    ಪುರಸಭೆಯ 23 ವಾರ್ಡ್ ಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಂಬ ಏಕೈಕ ಕಾರಣಕ್ಕೆ, ಸಾರ್ವಜನಿಕ ಹಿತಾಸಕ್ತಿಯನ್ನು ಬಲಿಕೊಟ್ಟು ತಾಲ್ಲೂಕು ಕಚೇರಿಯ ಪೂರ್ವ ಭಾಗದ ಮುಖ್ಯ ರಸ್ತೆಗೆ ಬೀಗ ಜಡಿಯಲಾಗಿತ್ತು. ನಿಯಮಗಳನ್ನು ಗಾಳಿಗೆ ತೂರಿ, ಅಧಿಕಾರಿಗಳನ್ನು ಹೆದರಿಸಿ–ಬೆದರಿಸಿ ಕಾನೂನುಬಾಹಿರ ಕೆಲಸ ಮಾಡಿಸಲಾಯಿತು. ಆದರೆ, ಈ ‘ಪಾಳೇಗಾರಿ ಆಡಳಿತ’ದ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸುತ್ತಿದ್ದಂತೆ, ಬಣ್ಣ ಬಯಲಾಗುತ್ತಿದ್ದು, ಉತ್ತರಿಸಲಾಗದೆ ಅಧಿಕಾರಿಗಳು ಬೆವರುತ್ತಿದ್ದಾರೆ.

    ಸಾಲು ಸಾಲು ಅಕ್ರಮಗಳ ಪಟ್ಟಿ!

    ಬಿಇಒ ಕರ್ತವ್ಯಲೋಪ ಸಾಬೀತು: ಶಾಲೆಯ ಆಟದ ಮೈದಾನದಲ್ಲೇ ಅನಧಿಕೃತ ಕಟ್ಟಡ ತಲೆಎತ್ತುತ್ತಿದ್ದರೂ ಕಣ್ಣುಮುಚ್ಚಿ ಕುಳಿತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಬೇಜವಾಬ್ದಾರಿ ಸಾಬೀತಾಗಿದೆ.

    ಅನಧಿಕೃತ ಮಳಿಗೆ ನಿರ್ಮಾಣ: ಶಾಲಾ ಮೈದಾನವನ್ನು ಒತ್ತುವರಿ ಮಾಡಿ ಪುರಸಭೆಯು 2 ಅನಧಿಕೃತ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಸಿಕ್ಕಿಬಿದ್ದಿದೆ.

    ಕಾನೂನುಬಾಹಿರ ರಸ್ತೆ ಬಂದ್: ಸಾರ್ವಜನಿಕರ ಸಂಚಾರ ಹಕ್ಕನ್ನು ಕಸಿದುಕೊಂಡು ನಿರ್ಮಿಸಿದ ಅಕ್ರಮ ತಡೆಯ ಗೋಡೆ ಈಗ ತನಿಖೆಯ ಕೇಂದ್ರಬಿಂದುವಾಗಿದೆ.

    ಚುನಾವಣೆಯಲ್ಲಿ ಜನ ನೀಡಿದ ತಕ್ಕ ಪಾಠ!

    ಸಾರ್ವಜನಿಕರ ರಸ್ತೆ ಮುಚ್ಚಿದ್ದೇ ಕ್ಷೇತ್ರದಲ್ಲಿ ಜೆಡಿಎಸ್ ಸಾಮ್ರಾಜ್ಯ ಕುಸಿಯಲು ಪ್ರಮುಖ ಕಾರಣವಾಯಿತು.  ರಸ್ತೆ ಬಂದ್ ನಿಂದ ರೊಚ್ಚಿಗೆದ್ದ ಎಲ್ಲಾ ವಾರ್ಡ್ ಗಳ ಜನರು ಒಗ್ಗೂಡಿ ಜೆಡಿಎಸ್ ವಿರುದ್ಧ ಪ್ರಚಾರ ಮಾಡಿದರು. ಪರಿಣಾಮ — ಶಾಸಕರಾದ ಹೆಚ್.ಡಿ. ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಭಾವಿ ಪ್ರಚಾರವೂ ಮಂಕಾಗಿ, ಜಾತಿ ಬಲವಿಲ್ಲದ ಜನ ಸಾಮಾನ್ಯ ಕಾಂಗ್ರೆಸ್ ಅಭ್ಯರ್ಥಿ ಐತಿಹಾಸಿಕ ಗೆಲುವು ಸಾಧಿಸಿದರು.

    ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಹಿನ್ನಡೆ: ವಿಧಾನಸಭೆ ಚುನಾವಣೆಯಲ್ಲಿ ಶಾಸಕ ರೇವಣ್ಣ ಅವರು ಕೇವಲ ಕೂದಲೆಳೆಯ ಅಂತರದಲ್ಲಿ ಗೆದ್ದು ದಡ ಸೇರಿದ್ದರೆ, ಲೋಕಸಭಾ ಚುನಾವಣೆಯಲ್ಲಿ ಈ ರಸ್ತೆ ವಿವಾದವೇ ಜೆಡಿಎಸ್ ವರ್ಚಸ್ಸಿಗೆ ಭಾರಿ ಧಕ್ಕೆ ತಂದು ಕಾಂಗ್ರೆಸ್ ಮುನ್ನಡೆ ಸಾಧಿಸಲು ದಾರಿಯಾಯಿತು.

    ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ!

    ಅಧಿಕಾರಿಗಳನ್ನು ಬೆದರಿಸಿ ಕೆಲಸ ಮಾಡಿಸಿದ್ದು ಅವರಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ರಸ್ತೆ ಮುಚ್ಚುವಾಗ ಯಾವ ಕಾನೂನನ್ನೂ ಪಾಲಿಸದ ಕಾರಣ, ಇದೀಗ ಆ ರಸ್ತೆಯನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಪುರಸಭೆಯಲ್ಲಿ ಅಧಿಕೃತ ನಿರ್ಣಯ ಅಂಗೀಕರಿಸಲಾಗಿದೆ. ಆದರೂ, ಶಾಸಕರು ಮಾತ್ರ ಈ ನಿರ್ಣಯ ಅನುಷ್ಠಾನಗೊಳ್ಳದಂತೆ ತಡೆಯಲು ಯತ್ನಿಸುತ್ತಿದ್ದಾರೆ.

    ಒಂದೆಡೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕಾನೂನು ಮೀರಿ ಕೆಲಸ ಮಾಡಿಸುವುದು, ಇನ್ನೊಂದೆಡೆ “ಅಧಿಕಾರಿಗಳು ನನ್ನ ಮಾತು ಕೇಳುತ್ತಿಲ್ಲ” ಎಂದು ಮಾಧ್ಯಮಗಳ ಮುಂದೆ ಧರಣಿ ಕುಳಿತು ನಾಟಕವಾಡುವುದು ಸಾರ್ವಜನಿಕರ ಹಾಸ್ಯಕ್ಕೆ ಈಡಾಗಿದೆ.

    ಶಾಸಕರ ವರ್ಚಸ್ಸು ಕುಸಿಯಲು ತಾಲ್ಲೂಕು ಕಚೇರಿ ರಸ್ತೆ ಬಂದ್ ಮಾಡಿದ್ದೇ ಮೂಲ ಕಾರಣ ಎಂದು ಜೆಡಿಎಸ್ ಕಾರ್ಯಕರ್ತರೇ ಈಗ ಬಹಿರಂಗವಾಗಿ ಅಳಲು ತೋಡಿಕೊಳ್ಳುತ್ತಿದ್ದಾರೆ.

    ವರದಿ:  ಮಂಜು ಶ್ರವಣೂರು, ಹೊಳೆನರಸೀಪುರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Holenarasipur ಜೆಡಿಎಸ್ ಸಾಮ್ರಾಜ್ಯ ರಸ್ತೆ ಬಂದ್ ಸ್ವಯಂಕೃತ ಕಂಠಕ ಹೊಳೆನರಸೀಪುರ
    Ganesh Tumkuru
    • Website

    Related Posts

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ

    September 4, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ಪೋಟಕ ವರದಿ: ಹೊಳೆನರಸೀಪುರದಲ್ಲಿ ‘ರಸ್ತೆ ಬಂದ್’ ರಾಜಕೀಯ — ಜೆಡಿಎಸ್ ಸಾಮ್ರಾಜ್ಯಕ್ಕೆ ಸ್ವಯಂಕೃತ ಕಂಠಕ!

    September 5, 2026

    ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ…

    ಬೀದರ್: 40 ವರ್ಷಗಳ ಬಳಿಕ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಆರಂಭವಾಯಿತು ಅಭಿವೃದ್ಧಿ ಕಾಮಗಾರಿ; ಪಿಡಿಒ ಕಾರ್ಯಕ್ಕೆ ಶ್ಲಾಘನೆ

    September 5, 2026

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.