- ಮಂಜುಸ್ವಾಮಿ.ಎಂ.ಎನ್, ಕೊರಟಗೆರೆ.
ಕೊರಟಗೆರೆ: ಜನ ಸ್ನೇಹಿ ತಹಶೀಲ್ದಾರ್ ಎಂದೇ ಹೆಸರು ಪಡೆದಿರುವ ತುಮಕೂರು ಜಿಲ್ಲೆ ಕೊರಟಗೆರೆಯ ತಹಶೀಲ್ದಾರ್ ನಾಹೀದಾ ಜಮ್ ಜಮ್ ಅವರು, ಮಾರುವೇಷದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ್ದು, 108 ತುರ್ತು ಸೇವೆಯ ನಿರ್ವಹಣೆ ವೈಫಲ್ಯವನ್ನು ಬಯಲು ಮಾಡಿದ್ದಾರೆ.
ಚಿರತೆ ದಾಳಿಯಿಂದ ಗಾಯಗೊಂಡು ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತರು ಮತ್ತು ಮಕ್ಕಳ ಆರೋಗ್ಯ ವಿಚಾರಣೆಗೆ ಬಂದ ನಾಹಿದಾ ಅವರ ಬಳಿ ತುರ್ತು ಆರೋಗ್ಯ ಸೇವೆ 108 ಕುರಿತು ದೂರು ನೀಡಿದ್ದರು. ಚಿರತೆ ದಾಳಿ ಸಂದರ್ಭದಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಕುರಿತು ವಿವರಿಸಿ ಕಣ್ಣೀರು ಹಾಕಿದ್ದರು.
ಈ ಹಿನ್ನೆಲೆಯಲ್ಲಿ 108 ಕ್ಕೆ ರಾಮಕ್ಕನ ಹೆಸರಿನಲ್ಲಿ ವಡ್ಡಗೆರೆ ಕ್ರಾಸ್ ಬಳಿ ಅಪಘಾತ ಆಗಿದೆ ಎಂದು ತಹಶೀಲ್ದಾರ್ ಕರೆ ಮಾಡ್ತಾರೆ. 2 ನಿಮಿಷ 108 ಗ್ರಾಹಕ ಸೇವಾಕೇಂದ್ರದ ಸಿಬ್ಬಂದಿ ಮಾಹಿತಿ ಪಡೆಯುತ್ತಾರೆ. ನಂತರ ಕರೆಯು ಆಂಬ್ಯುಲೆನ್ಸ್ ಸಿಬ್ಬಂದಿಗೆ ವರ್ಗಾವಣೆ ಆಗುತ್ತದೆ. ಆಂಬ್ಯುಲೆನ್ಸ್ ಸಿಬ್ಬಂದಿ ಉಮಾದೇವಿಯ ಜೊತೆ 8 ನಿಮಿಷ ತಹಶೀಲ್ದಾರ್ ಮಾತನಾಡುತ್ತಾರೆ. ಒಟ್ಟು 10 ನಿಮಿಷ ದೂರವಾಣಿ ಕರೆಯಲ್ಲಿಯೇ ಕಾಲಕಳೆದು, 1 ಗಂಟೆ ತಡವಾಗಿ ಬರ್ತಿವಿ ಕಾಯಿರಿ ಅಥವಾ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ರವಾನಿಸಿ ಎಂಬ ಉಢಾಪೆಯ ಉತ್ತರ ಸಿಬ್ಬಂದಿ ನೀಡ್ತಾರೇ.
108 ಗ್ರಾಹಕ ಪ್ರತಿನಿಧಿ ಜೊತೆ 2 ನಿಮಿಷ, ಆಂಬ್ಯುಲೆನ್ಸ್ ಸಿಬ್ಬಂದಿ ಜೊತೆ 7 ನಿಮಿಷ ಸಂಭಾಷಣೆಯ ವೇಳೆ ಆ್ಯಂಬುಲೆನ್ಸ್ ಸಿಬ್ಬಂದಿ, 1 ಗಂಟೆ ಆಗುತ್ತೆ, ಕಾಯ್ತಿರಾ? ಎಂದು ಪ್ರಶ್ನಿಸಿದ್ದಾರೆ. ತೋವಿನಕೆರೆಯಿಂದ ಕೊರಟಗೆರೆ ಪಟ್ಟಣಕ್ಕೆ ಆಗಮಿಸಲು ಕೇವಲ 20 ನಿಮಿಷ ಸಾಕು, ಆದರೆ ತಹಶೀಲ್ದಾರ್ ಕರೆ ಮಾಡಿ 56 ನಿಮಿಷಗಳ ಬಳಿಕ ಸ್ಥಳಕ್ಕೆ ಆ್ಯಂಬುಲೆನ್ಸ್ ತಲುಪಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ಡಿಹೆಚ್ ಓಗೆ ದಾಖಲೆ ಸಹಿತ ದೂರು ನೀಡಲಾಗಿದೆ.
5 ತುರ್ತುವಾಹನ ಇದ್ರೂ ನಿರ್ವಹಣೆ ಇಲ್ಲ:
ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತುರ್ತುವಾಹನ, ನಗುಮಗು, 108 ತುರ್ತುವಾಹನ ಇದೆ. ತೋವಿನಕೆರೆ ಮತ್ತು ಕೋಳಾಲದಲ್ಲಿ ತಲಾ ಒಂದು 108 ವಾಹನ ಸೌಲಭ್ಯವಿದೆ. ನಿರ್ವಹಣೆ ವಿಫಲವಾಗಿ ತುರ್ತುವೇಳೆ 108 ವಾಹನ ಕೆಲಸ ಮಾಡುವುದೇ ಇಲ್ಲ. ಆಸ್ಪತ್ರೆಯ ಮುಖ್ಯಾಧಿಕಾರಿ ಅಥವಾ ಟಿಹೆಚ್ ಓ ಆಂಬ್ಯುಲೇನ್ಸ್ ಸಿಬ್ಬಂದಿಗಳಿಗೆ ಸಮಸ್ಯೆಯ ಬಗ್ಗೆ ಪ್ರಶ್ನಿಸುವ ಹಾಗೇ ಇಲ್ಲ. ಸಿಬ್ಬಂದಿಗಳ ನಿರ್ಲಕ್ಷದಿಂದ ಗ್ರಾಮೀಣ ಪ್ರದೇಶದ ಬಡಜನರಿಗೆ ಪ್ರಾಣಸಂಕಟ ಎದುರಾಗಿದೆ.
108 ಮೇಲೆ ಆರೋಪಗಳ ಸುರಿಮಳೆ:
ಅಪಘಾತ ಆದಾಗ, ಹೆರಿಗೆಯ ವೇಳೆ, ಸರ್ಜರಿ ತುರ್ತುವೇಳೆ, ರಾತ್ರಿ ಪಾಳೇಯದಲ್ಲಿ ತುರ್ತುವಾಹನ ಸಿಗೋದೇ ಅಪರೂಪ.. 108 ವಾಹನ ಎಲ್ಲಿ ನಿಂತಿರುತ್ತೆ? ಅದರ ಜವಾಬ್ದಾರಿ ಯಾರದ್ದು? ನಿರ್ವಹಣೆ ಮಾಡೋರು ಯಾರು? ಎಂಬುದೇ ಯಕ್ಷಪ್ರಶ್ನೆ ಆಗಿದೆ. ಬಡಜನರಿಗೆ ಆರೋಗ್ಯ ಸೇವೆ ಸಲ್ಲಿಸುವ 108 ವಾಹನಗಳು ಪೇಟ್ರೋಲ್ ಬಂಕ್ ಮುಂಭಾಗ, ಡಾಬಾಗಳ ಮುಂದೆ ಅಥವಾ ರಾಜ್ಯ ಹೆದ್ದಾರಿಯಲ್ಲಿ ನಿಂತಿರುತ್ತೇ ಎಂಬುದೇ ಸ್ಥಳೀಯರ ಆರೋಪವಾಗಿದೆ.
ಅನಗತ್ಯ ಚರ್ಚೆ ಮಾಡ್ತಾರೇ 108 ಸಿಬ್ಬಂದಿ..
ತುರ್ತುಸೇವೆಗಾಗಿ ಜನರು 108 ಕ್ಕೆ ಕರೆಮಾಡಿದರೇ ಸ್ವೀಚ್ಆಪ್ ಬರೋದು, ಬ್ಯುಸಿ ಬರೋದು ಸರ್ವೇ ಸಾಮಾನ್ಯ ಆಗಿದೆ. ಇನ್ನೂ ಕರೆ ಕನೇಕ್ಟ್ ಆದರೇ 108 ಗ್ರಾಹಕ ಸಿಬ್ಬಂದಿ 2 ನಿಮಿಷ ಮಾಹಿತಿ ಪಡಿತಾರೇ ನಂತರ 108 ಸಿಬ್ಬಂದಿಗೆ ದೂರವಾಣಿ ಕರೆ ವರ್ಗಾವಣೆ ಆಗುತ್ತೇ. ಗ್ರಾಹಕ ಸೇವಾ ಸಿಬ್ಬಂದಿ ಮತ್ತು ಆಂಬ್ಯುಲೇನ್ಸ್ ಸಿಬ್ಬಂದಿ ಇಬ್ಬರು ಅನಗತ್ಯ ಚರ್ಚೆಗೆ ಇಳಿದು ಪ್ರಶ್ನೆಗಳ ಸುರಿಮಳೆಯನ್ನು ಕೇಳ್ತಾರೇ. ಮತ್ತೇ ಕೊನೆಗೆ 1 ಗಂಟೆ ಆಗುತ್ತೇ ಕಾಯ್ತೀರಾ ಅಥವಾ ಖಾಸಗಿ ವಾಹನದಲ್ಲಿ ಹೋಗ್ತೀರಾ ಎಂಬ ಪ್ರಶ್ನೆಯನ್ನು ಕೇಳುವುದು ಸಾಮಾನ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz