nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಾಯಕ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ವರ್ಗಾವಣೆಗೆ  ರೈತ ಮುಖಂಡರಿಂದ ಒತ್ತಾಯ
    ಜಿಲ್ಲಾ ಸುದ್ದಿ September 24, 2025

    ಸಹಾಯಕ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ವರ್ಗಾವಣೆಗೆ  ರೈತ ಮುಖಂಡರಿಂದ ಒತ್ತಾಯ

    By adminSeptember 24, 2025No Comments2 Mins Read
    ಸರಗೂರು ತಾಲೂಕಿನ ಸಮೀಪದ ಹೆಡಿಯಾಲ ವಲಯದ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ರವರನ್ನು ವರ್ಗಾವಣೆ ಮಾಡಿ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.

    ಸರಗೂರು:  ತಾಲ್ಲೂಕಿನಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರ ಜೀವನ ಕಷ್ಟಕರವಾಗಿದೆ, ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ನೆರವಿಗೆ ಬರುತ್ತಿಲ್ಲ’ ಹಾಗೂ ರೈತರ ಬಗ್ಗೆ ಅವಹೇಳನಾಕಾರಿ ಮಾತನಾಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ವಿರುದ್ಧ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆ ಮಂಗಳವಾರದಂದು ಅರಣ್ಯ ಇಲಾಖೆ  ಕಚೇರಿ ಮುಂಭಾಗ ವಿವಿಧ ಘೋಷಣೆ ಕೂಗಿ ಎಸಿಎಫ್ ಸತೀಶ್ ರವರನ್ನು  ವರ್ಗಾವಣೆ ಮಾಡಬೇಕು ಪ್ರತಿಭಟನೆ ಒತ್ತಾಯಿಸಿದರು.

    ನಂತರ ಸಭೆ ಕುರಿತು ಮಾತನಾಡಿದ ರೈತ ಸಂಘದ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಳೆಹೆಗ್ಗುಡಿಲು ನವೀನ್,  ಸೆ.10ರಂದು ರೈತ ಸಭೆಯಲ್ಲಿ “ರೈತರು ನಿಮಗೆ ನಾಚಿಕೆಯಾಗಬೇಕು” ಎಂದು ಅವಹೇಳನಾಕಾರಿಯಾಗಿ ಮಾತನಾಡಿರುವ ಈ ಭಾಗದ ಸಹಾಯಕ ಸಂರಕ್ಷಣಾಧಿಕಾರಿ ರೈತರ ಬಗ್ಗೆ ಅರಿವು ಇಲ್ಲದಂತೆ ಮಾತನಾಡಿದ ವ್ಯಕ್ತಿಯನ್ನು ಅಮಾನತು ಮತ್ತು ವರ್ಗಾವಣೆ ಮಾಡಿ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.


    Provided by
    Provided by

    ದಸಂಸ ಮುಖಂಡ ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎ‌.ಎಸ್.ಡಿ.ಸಣ್ಣಸ್ವಾಮಿ ಮಾತನಾಡಿ, ಕಾಡು ಪ್ರಾಣಿಗಳು ಮತ್ತು ಕಾಡಾನೆಗಳು ನಿರಂತರವಾಗಿ ದಾಳಿ ನಡೆಸಿ ರೈತರ ಬೆಳೆದ ಫಸಲನ್ನು ನಾಶ ಮಾಡುತ್ತಿವೆ. ದೀರ್ಘಕಾಲ ರೈತರಿಗೆ ಫಸಲು ಕೊಡುವ ಆರ್ಥಿಕವಾಗಿ ಶಕ್ತಿ ತುಂಬುವ ಹೊಗೆಸೊಪ್ಪು, ರಾಗಿ, ಜೋಳ, ಹತ್ತಿ ಇನ್ನೂ ಮುಂತಾದ  ಕಾಡಾನೆ ದಾಳಿಗೆ ಬಲಿಯಾಗುತ್ತಿವೆ. ಕಾಡು ಪ್ರಾಣಿಗಳ ದಾಳಿಗೆ ಕೇವಲ ರೈತರ ಫಸಲು ನಾಶವಾಗದೆ, ರೈತರೂ ಬಲಿಯಾಗುತ್ತಿದ್ದಾರೆ. ರೈತ ಸಂಘವು ಕಾಡಾನೆ ದಾಳಿ ತಡೆಗಟ್ಟುವಂತೆ ಹಲವು ಬಾರಿ ಒತ್ತಾಯಿಸಿ ಇಲಾಖೆಗೆ ಮನವಿ ಮಾಡಿದ್ದರೂ ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ, ಕಾಡಾನೆಗಳನ್ನು ತಡೆಗಟ್ಟುತ್ತಿಲ್ಲ ಎಂದು ದೂರಿದರು.

    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ರವರು ರೈತರ ಬಗ್ಗೆ ಯಾವುದೇ ಸಭೆಯಲ್ಲಿ ಏಕವಚನದಲ್ಲಿ ಕರೆಯುವುದು ಇವರ ಅಭ್ಯಾಸ, ರೈತರು ಹಾಗೂ ಈ ಭಾಗದ ಗ್ರಾಮಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಇರುವ ಸಿಬ್ಬಂದಿಗಳಿಗೂ ಅವಾಚ್ಯ ಶಬ್ದಗಳಿಂದ ಬೈಯ್ದು ಮಾತನಾಡಿರುವ ಬಗ್ಗೆ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮರ್ಕಾಂಡಯ್ಯ ಮಾತನಾಡಿ, ಕಾಡು ಪ್ರಾಣಿಗಳು ಮತ್ತು ಕಾಡಾನೆಗಳು ದಾಳಿ ನಡೆಸಿ  ಬೆಳೆಗಳನ್ನು ನಾಶ ಮಾಡಿ, ರೈತರ ಬದುಕನ್ನು ಕಿತ್ತುಕೊಳ್ಳುತ್ತಿವೆ. ಅರಣ್ಯ ಇಲಾಖೆಯ ಹಿರಿಯ ಮತ್ತು ಉನ್ನತ ಅಧಿಕಾರಿಗಳು ತಾಲ್ಲೂಕಿಗೆ ಭೇಟಿ ನೀಡಿ ಇಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕಾಡಾನೆ ದಾಳಿಗೆ ಶಾಶ್ವತ ಪರಿಹಾರವನ್ನು ದೊರಕಿಸಬೇಕು. ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತವು ಕ್ರಮಕ್ಕೆ ಮುಂದಾಗಿ ರೈತರ ರಕ್ಷಣೆಗೆ ಧಾವಿಸಬೇಕು. ಆ ಕೆಲಸವನ್ನು ಇಂದೇ ಮಾಡಬೇಕು ಎಂದು ಪಟ್ಟು ಹಿಡಿದರು. ನಂಜನಗೂಡು ಪ್ರಧಾನ ಕಾರ್ಯದರ್ಶಿ ಎಚ್ಚಿಗೆ ಪ್ರಕಾಶ್, ಶ್ರೀನಿವಾಸ, ಮಹದೇವಸ್ವಾಮಿ, ಎಚ್.ಡಿ.ಕೋಟೆ ತಾಲೂಕು ರೈತ ಅಧ್ಯಕ್ಷ ಮಹಾದೇವ ನಾಯಕ ಮಾತನಾಡಿದರು.

    ಈ ಸಂದರ್ಭದಲ್ಲಿ  ತಾಲ್ಲೂಕು ರೈತ ಸಂಘ ಅಧ್ಯಕ್ಷ ಚನ್ನನಾಯಕ, ಮಹದೇವನಾಯಕ, ದಯಾನಂದ, ರೈತ ಸಂಘ ಉಪಾಧ್ಯಕ್ಷರು ಮಹಲಿಂಗು,ಕುಮಾರಗೌಡ, ನಿಂಗನಾಯಕ, ನಾಗರಾಜು, ನವೀನ್, ಶಿವಪ್ಪ, ಕಾರ್ಯಾಧ್ಯಕ್ಷ ರವಿಕುಮಾರ್, ಮಹದೇವ, ಬಸವರಾಜಪ್ಪ, ಸಿದ್ದರಾಮೇಗೌಡ, ಉಮೇಶ್, ಭೂ ಹಕ್ಕುಗಳ ಸಮಿತಿ ಸದಸ್ಯ ಬಸವರಾಜಪ್ಪ, ಶಿವಲಿಂಗಪ್ಪ, ಸೋಮಣ್ಣ, ಪ್ರಭಾಕರ್, ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಹಾದನೂರು ಮಹಾದೇವಯ್ಯ, ರಾಮಕೃಷ್ಣ, ಇನ್ನೂ ಮುಖಂಡರು ಸೇರಿದಂತೆ ರೈತ ಸಂಘದ ಕಾರ್ಯಕರ್ತರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.