nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ

    December 31, 2025

    ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ

    December 31, 2025

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    • ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
    • ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ರದ್ದು
    ಕೊರಟಗೆರೆ September 23, 2025

    ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ರದ್ದು

    By adminSeptember 23, 2025No Comments3 Mins Read
    samanya sabhe

    ಕೊರಟಗೆರೆ : ತಾಲೂಕಿನ ಮಾವತ್ತೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಸರ್ವ ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡದ ಕಾರಣಕ್ಕೆ ಸಭೆ ರದ್ದಾಗಿದೆ.

    ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೪–೨೫ನೇ ಸಾಲಿನ ವಾರ್ಷಿಕ ಮಹಾಸಭೆಯನ್ನ ಏರ್ಪಡಿಸಲಾಗಿತ್ತು. ವಾರ್ಷಿಕ ಸಭೆ ನಡೆಸಲು ಸರ್ವ ಸದಸ್ಯರಿಗೆ ೧೫ ದಿನ ಮುಂಚೆಯೇ ಆಹ್ವಾನ ಪತ್ರಿಕೆ ನೀಡಬೇಕಾಗಿತ್ತು ಸಂಘದ ಎರಡು ಬಣದ ಸದಸ್ಯರ ನಡುವೆ ಮಾತಿನ ಜಟಾಪಟಿಯಿಂದ ರೈತರಿಗೆ ಸೇರಿದ ೩೦ ಸಾವಿರಕ್ಕೂ ಹೆಚ್ಚಿನ ಹಣ ಖರ್ಚು ಮಾಡಿ ಆಯೋಜಿಸಿದ್ದ ಸಭೆಯನ್ನ ರದ್ದುಪಡಿಸಲಾಗಿದೆ.


    Provided by
    Provided by

    ರೈತರಿಗೆ ಕಳೆದ ೪ ವರ್ಷದಿಂದ ಸಹಕಾರ ಸಂಘದಿಂದ ಯಾವುದೇ ಸಾಲ ಸೌಲಭ್ಯ ನೀಡಲಾಗಿದೆ ಎಂದು ರೈತರ ಪಹಣಿಯಲ್ಲಿ ಉಲ್ಲೇಖವಾಗಿದೆ. ಹಾಗೂ ಒಂದು ಮೂಟೆ ಗೊಬ್ಬರವನ್ನು ಮಾರಾಟ ಮಾಡಿಲ್ಲ ಎಂದು ರೈತರು ಸಭೆಯಲ್ಲಿ ಸದಸ್ಯರನ್ನ ತರಾಟೆ ತೆಗೆದುಕೊಂಡರು. ಇದರ ಜೊತೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಅವರು ಸಂಘ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕಾರ್ಯನಿರ್ವಾಹಣಾಧಿಕಾರಿ ಮತ್ತು ಅಧ್ಯಕ್ಷರ ಬೇಜಾವಬ್ದಾರಿತನವೇ ಇಂದಿನ ಸಭೆ ರದ್ದಾಗಲು ಕಾರಣ ಎಂದು ರೈತರು ಬೇಸರ ವ್ಯಕ್ತಪಡಿಸಿದರು.

    ವಿಎಸ್‌ ಎಸ್‌ ಎನ್ ಮಾಜಿ ಅಧ್ಯಕ್ಷ ಶಂಕರಣ್ಣ ಮಾತನಾಡಿ, ನಾಲ್ಕು ವರ್ಷದ ಹಿಂದೆ ನಾನು ಅಧ್ಯಕ್ಷ ಆಗಿದ್ದ ಸಂದರ್ಭದಲ್ಲಿ ಸಹಕಾರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರನ್ನ ಭೇಟಿ ಮಾಡಿ ಸಾಲ ಮಂಜೂರು ಮಾಡಿಕೊಂಡು ಬಂದಿದ್ದೆ. ಆದರೆ ಈಗಿನ ಅಧ್ಯಕ್ಷರಾದ ಧನಂಜಯ ಅವರು ಸ್ವಲ್ಪ ತಡವಾಗಿ ಸಾಲ ನೀಡಲಾಗುತ್ತದೆ ಎಂದು ತಿಳಿಸಿದಾಗ ಕೆ.ಎನ್.ರಾಜಣ್ಣ ಅವರ ಅಪ್ಪನ ಮನೆಯಿಂದ ಸಾಲ ಕೊಡಲ್ಲ ಎಂದು ಉದ್ದಟನದ ಮಾತಿನಿಂದ ಇಲ್ಲಿಯವರೆಗೂ ನಮ್ಮ ಸಂಘಕ್ಕೆ ಒಂದು ರೂಪಾಯಿ ಸಾಲ ಮಂಜೂರು ಆಗಿಲ್ಲ ಎಂದು ತಿಳಿಸಿದರು.

    ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಬೋರಣ್ಣ ಮಾತನಾಡಿ ೨೦೨೪– ೨೫ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯನ್ನ ಆಯೋಜನೆ ಮಾಡಲಾಗಿತ್ತು. ಸಹಕಾರ ಸಂಘದ ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಸಭೆಯಲ್ಲಿ ತಿಳಿಸಲಾಗಿದೆ. ನನಗೂ ಸಹ ಯಾವುದೆ ಆಮಂತ್ರಣ ನೀಡಿಲ್ಲ. ಸಂಘದ ಆಡಳಿತ ಮಂಡಳಿ ರೈತರ ಪಹಣಿಯಲ್ಲಿ ಸಾಲ ಮಂಜೂರು ಆಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿಂದೆ ಸಾಲ ನೀಡುವ ಸಂದರ್ಭದಲ್ಲಿ ಪಹಣಯಲ್ಲಿ ಸಾಲ ಮಂಜೂರು ಆಗಿದೆ ಎಂದು ಬಂದಿದ್ದು, ನಾನೇ ಖುದ್ದು ನಿಂತು ಅದನ್ನ ತೆಗೆಸಲಾಗುವುದು. ಸಭೆ ರದ್ದಾದ ವಿಷಯವನ್ನ ನಮ್ಮ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ.

    ಮಾವತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಮಾತನಾಡಿ, ನಮ್ಮ ಮನೆಯ ಸದಸ್ಯರಿಗೆ ಆರೋಗ್ಯದ ಸಮಸ್ಯೆ ಇರುವ ಕಾರಣ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ವಾರ್ಷಿಕ ಸಭೆಯನ್ನ ಆಯೋಜನೆ ಮಾಡಲು ತಿಳಿಸಲಾಗಿತ್ತು. ವಾರ್ಷಿಕ ಸಭೆ ಮಾಡಲು ಎಂಟು ಜನರ ಹಾಜರಾತಿಯಿಂದಲೇ ಸಭೆಯನ್ನ ಆಯೋಜನೆ ಮಾಡಲಾಗಿದೆ. ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ದೂರಿದ್ದಾರೆ. ಅದ್ದರಿಂದ ಸಭೆಯನ್ನ ಮುಂದೂಡಲಾಗಿದೆ.

    ಗ್ರಾಪಂ ಸದಸ್ಯ ಹಾಗೂ ವಿಎಸ್‌ ಎಸ್‌ ಎನ್ ನಿರ್ದೇಶಕ ಮಂಜುನಾಥ್ ಮಾತನಾಡಿ, ಸಂಘದ ಕಾರ್ಯನಿರ್ವಾಹಣಾಧಿಕಾರಿ ಮತ್ತು ಅಧ್ಯಕ್ಷರ ಬೇಜವಾಬ್ದಾರಿತನವೇ ಇಂದಿನ ಸಭೆ ರದ್ದಾಗಲು ಕಾರಣ. ಸದಸ್ಯರಿಗೆ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಸಭೆ ರದ್ದಾಗಿದೆ. ನಿರ್ದೇಶಕರ ಸಭೆಯನ್ನ ಕರೆಯದೆ ಏಕಾ ಚಕ್ರಾಧಿಪತ್ಯ ಧೋರಣೆಯಿಂದ ಇಷ್ಟೇಲ್ಲ ಬೆಳವಣಿಗೆ ಆಗುತ್ತಿದೆ. ನಮ್ಮ ಭಾಗದ ರೈತರಿಗೆ ಒಂದು ಮೂಟೆ ಗೊಬ್ಬರ ಆಗಲಿ ಸಾಲವಾಗಲಿ ನೀಡಿಲ್ಲ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರನ್ನ ಅಪ್ಪನ ಮನೆಯಿಂದ ಸಾಲ ಕೊಡಲ್ಲ ಎಂದು ನಾಲ್ಕು ವರ್ಷದ ಹಿಂದೆ ಮಾತನಾಡಿದ್ದಾರೆ. ಆದ್ದರಿಂದ ಇಲ್ಲಿಯವರೆಗೂ ನಮ್ಮ ಸಂಘಕ್ಕೆ ಸಾಲ ಮಂಜೂರಾಗಿಲ್ಲ ಎಂದು ಅಧ್ಯಕ್ಷರ ವಿರುದ್ದ ಆರೋಪ ಮಾಡಿದರು.

    ಈ ಹಿಂದೆ ರೈತರಿಗೆ ಸಾಲ ಮಂಜೂರು ಮಾಡಲು ಸಲುವಾಗಿ ರೈತರ ಪಹಣಿಯಲ್ಲಿ ಸಾಲ ನೀಡಲಾಗಿದೆ ಎಂದು ನಮೂದಿಸಲಾಗಿದೆ. ಅದನ್ನ ಆದಷ್ಟು ಬೇಗ ತೆಗಿಸಲಾಗುವುದು, ಡಿಸಿಸಿ ಬ್ಯಾಂಕ್ ಜಿಲ್ಲಾ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಅವರ ಅಪ್ಪನ ಮನೆಯಿಂದ ಸಾಲ ಕೊಡಲ್ಲ ಎಂದು ಅವರಿಗೆ ಅವಮಾನ ಮಾಡುವ ರೀತಿ ನಾನು ಮಾತನಾಡಿಲ್ಲ, ನನ್ನ ವಿರೋಧಿಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.

    — ಧನಂಜಯ ವಿಎಸ್‌ ಎಸ್‌.ಎನ್. ಅಧ್ಯಕ್ಷ ಮಾವತ್ತೂರು.


    ಸಭೆಯಲ್ಲಿ ಸಂಘದ ಸಿಇಒ ತಿಮ್ಮಯ್ಯ, ಉಪಾಧ್ಯಕ್ಷ ನರಸಿಂಹಮೂರ್ತಿ ನಿರ್ದೇಶಕರಾದ ಮತ್ತರಾಜು, ಪ್ರಕಾಶ್, ಮಂಜುನಾಥ್, ನವೀನ್‌ಕುಮಾರ್, ರಂಗದಾಸಯ್ಯ, ರಮೇಶ್, ನಲ್ಲಪ್ಪ, ಪಾರ್ವತಮ್ಮ, ಭಾಗ್ಯಮ್ಮ, ಕೃಷ್ಣಪ್ಪ, ಮುಖಂಡರಾದ ವೆಂಕಟಗೌಡ, ಮಂಜುನಾಥ್, ನರಸೇಗೌಡ, ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ

    December 31, 2025

    ತುಮಕೂರು: ದೇಶದ ಬೆನ್ನೆಲುಬು ಪ್ರತಿಯೊಬ್ಬರಿಗೂ ಅನ್ನ ನೀಡುವ ಶ್ರಮಿಕ ವರ್ಗವೆಂದರೆ ಅದು ರೈತ ಕುಟುಂಬ. ದೇಶಕ್ಕೆ ಅನ್ನ ಹಾಕುವ ಅನ್ನದಾತನ…

    ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ

    December 31, 2025

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.