nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ

    September 19, 2026

    ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

    September 19, 2026
    Facebook Twitter Instagram
    ಟ್ರೆಂಡಿಂಗ್
    • ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    • ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ
    • ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
    • ದೀಕ್ಷಾಭೂಮಿ ಯಾತ್ರೆಗೆ ಆನ್ ಲೈನ್ ಅರ್ಜಿ ಆಹ್ವಾನ
    • ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ
    • ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ
    • ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣಿಗಾರಿಕೆ ವಿರುದ್ದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ | ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ
    ಕೊರಟಗೆರೆ March 14, 2025

    ಗಣಿಗಾರಿಕೆ ವಿರುದ್ದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ | ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ

    By adminMarch 14, 2025No Comments2 Mins Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.     

    ಕೊರಟಗೆರೆ : ಚೀಲಗಾನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ಸ್ಥಾಪನೆಗೆ 15 ವರ್ಷದಿಂದ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಕೊರಟಗೆರೆ ಆಡಳಿತ ಮತ್ತು ಗಣಿ ಇಲಾಖೆ ವಿರುದ್ದ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

    ಕೊರಟಗೆರೆ ಪಟ್ಟಣದ ಮಿನಿ ವಿಧಾನಸೌಧಕ್ಕೆ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಹಾಗೂ ಚೀಲಗಾನಹಳ್ಳಿ ರೈತರಿಂದ ಟ್ರಾಕ್ಟರ್ ಸಮೇತ ಮುತ್ತಿಗೆ ಹಾಕಿ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ನಿರ್ಮಾಣಕ್ಕೆ ಸರಕಾರಿ ಅಧಿಕಾರಿಗಳೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಮಾತನಾಡಿ, ತುಮಕೂರು ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಗಣಿಗಾರಿಕೆಯಿಂದ ಪರಿಸರ ಹಾಳಾಗಿದೆ. ಈಗ ಮತ್ತೆ ಕೊರಟಗೆರೆಯಲ್ಲಿ ಗಣಿಗಾರಿಕೆ ಪ್ರಾರಂಭಕ್ಕೆ ಅಧಿಕಾರಿಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿರೋದು ನಮ್ಮ ದುರ್ದೈವ ಎಂದು ಕಿಡಿಕಾರಿದರು.

    ಕೊರಟಗೆರೆ ರೈತಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರವು ಮಿನಿ ಬಳ್ಳಾರಿ ಆಗುವತ್ತಾ ಹೆಜ್ಜೆ ಇಟ್ಟಿದೆ. ನಮ್ಮ ಕ್ಷೇತ್ರದ ಬೆಟ್ಟ-ಗುಡ್ಡಗಳನ್ನು ಅಧಿಕಾರಿ ವರ್ಗ ಮಾರಾಟಕ್ಕೆ ಇಟ್ಟಿದ್ದಾರೇ. ನಮ್ಮ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ಗಣಿಗಾರಿಕೆ ನಡೆಸದಂತೆ ಅಧಿಕಾರಿಗಳ ಕಟ್ಟುನಿಟ್ಟಿನ ಆದೇಶ ಮಾಡಬೇಕಿದೆ ಎಂದರು.

    ಪ್ರತಿಭಟನೆಯಲ್ಲಿ ರೈತಸಂಘದ ಲೊಕೇಶ್, ಪ್ರಸನ್ನ, ರಾಮಚಂದ್ರಪ್ಪ, ಕೆಂಪರಾಜು, ರಾಜಣ್ಣ, ವೀರಕ್ಯಾತರಾಯ, ಶ್ರೀರಂಗಯ್ಯ, ಹನುಮಂತರಾಯಪ್ಪ, ಜುಂಜಣ್ಣ, ದಯಾನಂದ್, ಶಾಂತಮ್ಮ, ವೆಂಕಟಲಕ್ಷ್ಮಮ್ಮ, ಸಿದ್ದಗಂಗಯ್ಯ, ರಾಮಯ್ಯ, ಜಯರಾಮಯ್ಯ, ಕೊಂಡಪ್ಪ, ಸಿದ್ದರಾಜು, ಶ್ರೀನಿವಾಸ ಸೇರಿದಂತೆ ಇತರರು ಇದ್ದರು.

    ಊಟ–ತಿಂಡಿ–ನಿದ್ರೇ ಎಲ್ಲವೂ ಇಲ್ಲೇ:

    ಕಲ್ಲುಗಣಿಗಾರಿಕೆ ವಿರೋಧಿಸಿ ಮಿನಿ ವಿಧಾಸೌಧ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ರೈತರಿಗೆ ಊಟ–ತಿಂಡಿ ಮತ್ತು ನಿದ್ರೆಗೆ ಅಲ್ಲೇ ವ್ಯವಸ್ಥೆ ನಡೆದಿದೆ. ಟ್ರಾಕ್ಟರ್‍ಗಳನ್ನು ಹೊರಗಡೆ ನಿಲ್ಲಿಸಿ ಕಚೇರಿಗೆ ತೆರಳುವ ಮಾರ್ಗದ ಮೆಟ್ಟಿಲುಗಳ ಮೇಲೆಯೇ ರೈತರು ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ತಹಶೀಲ್ದಾರ್ ಮನವಿಗೆ ಜಗ್ಗದ ರೈತರು:

    ಪ್ರತಿಭಟನೆ ವೇಳೆ ತಹಶೀಲ್ದಾರ್ ಮಂಜುನಾಥ ರೈತರ ಮನವೋಲಿಸುವ ಪ್ರಯತ್ನ ಮಾಡಿದರು. ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೋಳ್ಳಲು ನಮ್ಮ ಶಾಸಕರು ಹೇಳಿದ್ದಾರೆ ಎಂದರು ಸಹ ರೈತರು ಪಟ್ಟು ಹಿಡಿದಿದ್ದಾರೆ. ಶಾಸಕರು ನಮಗೇ ಭರವಸೆ ನಿಡುವ ತನಕ ಅಹೋರಾತ್ರಿ ಧರಣಿ ಕೈಬೀಡುವ ಪ್ರಶ್ನೆಯೇ ಇಲ್ಲ ಎಂದು ಧರಣಿ ಮುಂದುವರೆಸಿದ್ದಾರೆ.


    ಹೈಕೋರ್ಟ್ ಆದೇಶದಂತೆ ಡ್ರೋನ್ ಸರ್ವೆಗೆ ಹೋದಾಗ ಚೀಲಗಾನಹಳ್ಳಿ ರೈತರಿಂದ ವಿರೋಧ ವ್ಯಕ್ತವಾಗಿದೆ. ಗಣಿಗಾರಿಕೆಗೆ ಗುರುತಿಸಿರುವ ಭೂಮಿಯ ಅಕ್ಕಪಕ್ಕ ದೇವಾಲಯ, ಕೆರೆಕಟ್ಟೆ, ಅರಣ್ಯ ಮತ್ತು ನಿರಾಶ್ರಿತರಿಗೆ ನಿವೇಶದ ಭೂಮಿಯಿದೆ. ಗಣಿಗಾರಿಕೆಗೆ ಅವಕಾಶ ನೀಡದಂತೆ  ಗೃಹಸಚಿವ ಡಾ.ಜಿ.ಪರಮೇಶ್ವರ ಸಾಹೇಬ್ರ ಆದೇಶವು ಸಹ ನಮಗೇ ಇದೆ. ಪ್ರತಿಭಟನೆ ಕೈಬಿಡಲು ರೈತರಿಗೆ ಮನವಿ ಮಾಡಿದ್ದೇನೆ.

    —  ಮಂಜುನಾಥ ಕೆ. ತಹಶೀಲ್ದಾರ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಬೆಂಗಳೂರು: ಮಹಾರಾಷ್ಟ್ರದ ನಾಗಪುರದಲ್ಲಿರುವ ಐತಿಹಾಸಿಕ ದೀಕ್ಷಾಭೂಮಿಗೆ ಭೇಟಿ ನೀಡಲು ಇಚ್ಛಿಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಹಾಗೂ ಅರ್ಹ…

    ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ

    September 19, 2026

    ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

    September 19, 2026

    ದೀಕ್ಷಾಭೂಮಿ ಯಾತ್ರೆಗೆ ಆನ್ ಲೈನ್ ಅರ್ಜಿ ಆಹ್ವಾನ

    September 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.