nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣಿಗಾರಿಕೆ ವಿರುದ್ದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ | ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ
    ಕೊರಟಗೆರೆ March 14, 2025

    ಗಣಿಗಾರಿಕೆ ವಿರುದ್ದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ | ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ

    By adminMarch 14, 2025No Comments2 Mins Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.     

    ಕೊರಟಗೆರೆ : ಚೀಲಗಾನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ಸ್ಥಾಪನೆಗೆ 15 ವರ್ಷದಿಂದ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಕೊರಟಗೆರೆ ಆಡಳಿತ ಮತ್ತು ಗಣಿ ಇಲಾಖೆ ವಿರುದ್ದ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.


    Provided by
    Provided by

    ಕೊರಟಗೆರೆ ಪಟ್ಟಣದ ಮಿನಿ ವಿಧಾನಸೌಧಕ್ಕೆ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಹಾಗೂ ಚೀಲಗಾನಹಳ್ಳಿ ರೈತರಿಂದ ಟ್ರಾಕ್ಟರ್ ಸಮೇತ ಮುತ್ತಿಗೆ ಹಾಕಿ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ನಿರ್ಮಾಣಕ್ಕೆ ಸರಕಾರಿ ಅಧಿಕಾರಿಗಳೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಮಾತನಾಡಿ, ತುಮಕೂರು ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಗಣಿಗಾರಿಕೆಯಿಂದ ಪರಿಸರ ಹಾಳಾಗಿದೆ. ಈಗ ಮತ್ತೆ ಕೊರಟಗೆರೆಯಲ್ಲಿ ಗಣಿಗಾರಿಕೆ ಪ್ರಾರಂಭಕ್ಕೆ ಅಧಿಕಾರಿಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿರೋದು ನಮ್ಮ ದುರ್ದೈವ ಎಂದು ಕಿಡಿಕಾರಿದರು.

    ಕೊರಟಗೆರೆ ರೈತಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರವು ಮಿನಿ ಬಳ್ಳಾರಿ ಆಗುವತ್ತಾ ಹೆಜ್ಜೆ ಇಟ್ಟಿದೆ. ನಮ್ಮ ಕ್ಷೇತ್ರದ ಬೆಟ್ಟ-ಗುಡ್ಡಗಳನ್ನು ಅಧಿಕಾರಿ ವರ್ಗ ಮಾರಾಟಕ್ಕೆ ಇಟ್ಟಿದ್ದಾರೇ. ನಮ್ಮ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ಗಣಿಗಾರಿಕೆ ನಡೆಸದಂತೆ ಅಧಿಕಾರಿಗಳ ಕಟ್ಟುನಿಟ್ಟಿನ ಆದೇಶ ಮಾಡಬೇಕಿದೆ ಎಂದರು.

    ಪ್ರತಿಭಟನೆಯಲ್ಲಿ ರೈತಸಂಘದ ಲೊಕೇಶ್, ಪ್ರಸನ್ನ, ರಾಮಚಂದ್ರಪ್ಪ, ಕೆಂಪರಾಜು, ರಾಜಣ್ಣ, ವೀರಕ್ಯಾತರಾಯ, ಶ್ರೀರಂಗಯ್ಯ, ಹನುಮಂತರಾಯಪ್ಪ, ಜುಂಜಣ್ಣ, ದಯಾನಂದ್, ಶಾಂತಮ್ಮ, ವೆಂಕಟಲಕ್ಷ್ಮಮ್ಮ, ಸಿದ್ದಗಂಗಯ್ಯ, ರಾಮಯ್ಯ, ಜಯರಾಮಯ್ಯ, ಕೊಂಡಪ್ಪ, ಸಿದ್ದರಾಜು, ಶ್ರೀನಿವಾಸ ಸೇರಿದಂತೆ ಇತರರು ಇದ್ದರು.

    ಊಟ–ತಿಂಡಿ–ನಿದ್ರೇ ಎಲ್ಲವೂ ಇಲ್ಲೇ:

    ಕಲ್ಲುಗಣಿಗಾರಿಕೆ ವಿರೋಧಿಸಿ ಮಿನಿ ವಿಧಾಸೌಧ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ರೈತರಿಗೆ ಊಟ–ತಿಂಡಿ ಮತ್ತು ನಿದ್ರೆಗೆ ಅಲ್ಲೇ ವ್ಯವಸ್ಥೆ ನಡೆದಿದೆ. ಟ್ರಾಕ್ಟರ್‍ಗಳನ್ನು ಹೊರಗಡೆ ನಿಲ್ಲಿಸಿ ಕಚೇರಿಗೆ ತೆರಳುವ ಮಾರ್ಗದ ಮೆಟ್ಟಿಲುಗಳ ಮೇಲೆಯೇ ರೈತರು ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ತಹಶೀಲ್ದಾರ್ ಮನವಿಗೆ ಜಗ್ಗದ ರೈತರು:

    ಪ್ರತಿಭಟನೆ ವೇಳೆ ತಹಶೀಲ್ದಾರ್ ಮಂಜುನಾಥ ರೈತರ ಮನವೋಲಿಸುವ ಪ್ರಯತ್ನ ಮಾಡಿದರು. ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೋಳ್ಳಲು ನಮ್ಮ ಶಾಸಕರು ಹೇಳಿದ್ದಾರೆ ಎಂದರು ಸಹ ರೈತರು ಪಟ್ಟು ಹಿಡಿದಿದ್ದಾರೆ. ಶಾಸಕರು ನಮಗೇ ಭರವಸೆ ನಿಡುವ ತನಕ ಅಹೋರಾತ್ರಿ ಧರಣಿ ಕೈಬೀಡುವ ಪ್ರಶ್ನೆಯೇ ಇಲ್ಲ ಎಂದು ಧರಣಿ ಮುಂದುವರೆಸಿದ್ದಾರೆ.


    ಹೈಕೋರ್ಟ್ ಆದೇಶದಂತೆ ಡ್ರೋನ್ ಸರ್ವೆಗೆ ಹೋದಾಗ ಚೀಲಗಾನಹಳ್ಳಿ ರೈತರಿಂದ ವಿರೋಧ ವ್ಯಕ್ತವಾಗಿದೆ. ಗಣಿಗಾರಿಕೆಗೆ ಗುರುತಿಸಿರುವ ಭೂಮಿಯ ಅಕ್ಕಪಕ್ಕ ದೇವಾಲಯ, ಕೆರೆಕಟ್ಟೆ, ಅರಣ್ಯ ಮತ್ತು ನಿರಾಶ್ರಿತರಿಗೆ ನಿವೇಶದ ಭೂಮಿಯಿದೆ. ಗಣಿಗಾರಿಕೆಗೆ ಅವಕಾಶ ನೀಡದಂತೆ  ಗೃಹಸಚಿವ ಡಾ.ಜಿ.ಪರಮೇಶ್ವರ ಸಾಹೇಬ್ರ ಆದೇಶವು ಸಹ ನಮಗೇ ಇದೆ. ಪ್ರತಿಭಟನೆ ಕೈಬಿಡಲು ರೈತರಿಗೆ ಮನವಿ ಮಾಡಿದ್ದೇನೆ.

    —  ಮಂಜುನಾಥ ಕೆ. ತಹಶೀಲ್ದಾರ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ

    January 31, 2026

    ಅಗ್ರಹಾರ ಗ್ರಾ.ಪಂ.ಅಧ್ಯಕ್ಷ ಸಿ.ಡಿ.ಪ್ರಭಾಕರ್ ಅಧ್ಯಕ್ಷತೆಯಲ್ಲಿ ವಿಶೇಷ ಚೇತನರ ಸಭೆ

    January 30, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ನಗರದ ಎಸ್‌ ವಿಪಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೃಹತ್…

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.