nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ

    January 21, 2026

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026
    Facebook Twitter Instagram
    ಟ್ರೆಂಡಿಂಗ್
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    • ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!
    • ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    • ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?
    • ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣಿಗಾರಿಕೆ ವಿರುದ್ದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ | ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ
    ಕೊರಟಗೆರೆ March 14, 2025

    ಗಣಿಗಾರಿಕೆ ವಿರುದ್ದ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ | ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಆಕ್ರೋಶ

    By adminMarch 14, 2025No Comments2 Mins Read
    koratagere

    ವರದಿ : ಮಂಜುಸ್ವಾಮಿ ಎಂ.ಎನ್.     

    ಕೊರಟಗೆರೆ : ಚೀಲಗಾನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ಸ್ಥಾಪನೆಗೆ 15 ವರ್ಷದಿಂದ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಕೊರಟಗೆರೆ ಆಡಳಿತ ಮತ್ತು ಗಣಿ ಇಲಾಖೆ ವಿರುದ್ದ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.


    Provided by
    Provided by

    ಕೊರಟಗೆರೆ ಪಟ್ಟಣದ ಮಿನಿ ವಿಧಾನಸೌಧಕ್ಕೆ ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ ಹಾಗೂ ಚೀಲಗಾನಹಳ್ಳಿ ರೈತರಿಂದ ಟ್ರಾಕ್ಟರ್ ಸಮೇತ ಮುತ್ತಿಗೆ ಹಾಕಿ ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ಘಟಕ ನಿರ್ಮಾಣಕ್ಕೆ ಸರಕಾರಿ ಅಧಿಕಾರಿಗಳೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಮಾತನಾಡಿ, ತುಮಕೂರು ಮತ್ತು ಕೊರಟಗೆರೆ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಗಣಿಗಾರಿಕೆಯಿಂದ ಪರಿಸರ ಹಾಳಾಗಿದೆ. ಈಗ ಮತ್ತೆ ಕೊರಟಗೆರೆಯಲ್ಲಿ ಗಣಿಗಾರಿಕೆ ಪ್ರಾರಂಭಕ್ಕೆ ಅಧಿಕಾರಿಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿರೋದು ನಮ್ಮ ದುರ್ದೈವ ಎಂದು ಕಿಡಿಕಾರಿದರು.

    ಕೊರಟಗೆರೆ ರೈತಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರವು ಮಿನಿ ಬಳ್ಳಾರಿ ಆಗುವತ್ತಾ ಹೆಜ್ಜೆ ಇಟ್ಟಿದೆ. ನಮ್ಮ ಕ್ಷೇತ್ರದ ಬೆಟ್ಟ-ಗುಡ್ಡಗಳನ್ನು ಅಧಿಕಾರಿ ವರ್ಗ ಮಾರಾಟಕ್ಕೆ ಇಟ್ಟಿದ್ದಾರೇ. ನಮ್ಮ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ಗಣಿಗಾರಿಕೆ ನಡೆಸದಂತೆ ಅಧಿಕಾರಿಗಳ ಕಟ್ಟುನಿಟ್ಟಿನ ಆದೇಶ ಮಾಡಬೇಕಿದೆ ಎಂದರು.

    ಪ್ರತಿಭಟನೆಯಲ್ಲಿ ರೈತಸಂಘದ ಲೊಕೇಶ್, ಪ್ರಸನ್ನ, ರಾಮಚಂದ್ರಪ್ಪ, ಕೆಂಪರಾಜು, ರಾಜಣ್ಣ, ವೀರಕ್ಯಾತರಾಯ, ಶ್ರೀರಂಗಯ್ಯ, ಹನುಮಂತರಾಯಪ್ಪ, ಜುಂಜಣ್ಣ, ದಯಾನಂದ್, ಶಾಂತಮ್ಮ, ವೆಂಕಟಲಕ್ಷ್ಮಮ್ಮ, ಸಿದ್ದಗಂಗಯ್ಯ, ರಾಮಯ್ಯ, ಜಯರಾಮಯ್ಯ, ಕೊಂಡಪ್ಪ, ಸಿದ್ದರಾಜು, ಶ್ರೀನಿವಾಸ ಸೇರಿದಂತೆ ಇತರರು ಇದ್ದರು.

    ಊಟ–ತಿಂಡಿ–ನಿದ್ರೇ ಎಲ್ಲವೂ ಇಲ್ಲೇ:

    ಕಲ್ಲುಗಣಿಗಾರಿಕೆ ವಿರೋಧಿಸಿ ಮಿನಿ ವಿಧಾಸೌಧ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ರೈತರಿಗೆ ಊಟ–ತಿಂಡಿ ಮತ್ತು ನಿದ್ರೆಗೆ ಅಲ್ಲೇ ವ್ಯವಸ್ಥೆ ನಡೆದಿದೆ. ಟ್ರಾಕ್ಟರ್‍ಗಳನ್ನು ಹೊರಗಡೆ ನಿಲ್ಲಿಸಿ ಕಚೇರಿಗೆ ತೆರಳುವ ಮಾರ್ಗದ ಮೆಟ್ಟಿಲುಗಳ ಮೇಲೆಯೇ ರೈತರು ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ತಹಶೀಲ್ದಾರ್ ಮನವಿಗೆ ಜಗ್ಗದ ರೈತರು:

    ಪ್ರತಿಭಟನೆ ವೇಳೆ ತಹಶೀಲ್ದಾರ್ ಮಂಜುನಾಥ ರೈತರ ಮನವೋಲಿಸುವ ಪ್ರಯತ್ನ ಮಾಡಿದರು. ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೋಳ್ಳಲು ನಮ್ಮ ಶಾಸಕರು ಹೇಳಿದ್ದಾರೆ ಎಂದರು ಸಹ ರೈತರು ಪಟ್ಟು ಹಿಡಿದಿದ್ದಾರೆ. ಶಾಸಕರು ನಮಗೇ ಭರವಸೆ ನಿಡುವ ತನಕ ಅಹೋರಾತ್ರಿ ಧರಣಿ ಕೈಬೀಡುವ ಪ್ರಶ್ನೆಯೇ ಇಲ್ಲ ಎಂದು ಧರಣಿ ಮುಂದುವರೆಸಿದ್ದಾರೆ.


    ಹೈಕೋರ್ಟ್ ಆದೇಶದಂತೆ ಡ್ರೋನ್ ಸರ್ವೆಗೆ ಹೋದಾಗ ಚೀಲಗಾನಹಳ್ಳಿ ರೈತರಿಂದ ವಿರೋಧ ವ್ಯಕ್ತವಾಗಿದೆ. ಗಣಿಗಾರಿಕೆಗೆ ಗುರುತಿಸಿರುವ ಭೂಮಿಯ ಅಕ್ಕಪಕ್ಕ ದೇವಾಲಯ, ಕೆರೆಕಟ್ಟೆ, ಅರಣ್ಯ ಮತ್ತು ನಿರಾಶ್ರಿತರಿಗೆ ನಿವೇಶದ ಭೂಮಿಯಿದೆ. ಗಣಿಗಾರಿಕೆಗೆ ಅವಕಾಶ ನೀಡದಂತೆ  ಗೃಹಸಚಿವ ಡಾ.ಜಿ.ಪರಮೇಶ್ವರ ಸಾಹೇಬ್ರ ಆದೇಶವು ಸಹ ನಮಗೇ ಇದೆ. ಪ್ರತಿಭಟನೆ ಕೈಬಿಡಲು ರೈತರಿಗೆ ಮನವಿ ಮಾಡಿದ್ದೇನೆ.

    —  ಮಂಜುನಾಥ ಕೆ. ತಹಶೀಲ್ದಾರ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ

    January 21, 2026

    ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮತ್ತು ತರಬೇತುದಾರರಾಗಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of…

    ಒಂದೇ ರಸ್ತೆ ನಿರ್ಮಾಣಕ್ಕೆ  2 ಇಲಾಖೆಯಿಂದ ಕಿತ್ತಾಟ: ಮಧ್ಯಸ್ಥಿಕೆ ವಹಿಸಿದ ಪೊಲೀಸರು!

    January 21, 2026

    ಅಲ್ಪಸಂಖ್ಯಾತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸರ್ಕಾರದ ಆದ್ಯತೆ: ಸಚಿವ ಜಮೀರ್ ಅಹ್ಮದ್ ಖಾನ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.