nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026
    Facebook Twitter Instagram
    ಟ್ರೆಂಡಿಂಗ್
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    ತುಮಕೂರು July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    By adminJuly 9, 2026No Comments2 Mins Read
    g parameshwar.jpg

    ತುಮಕೂರು: ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವ ಬೆಳೆ ಎಂದರೆ ಸಿಲ್ಕು ಮತ್ತು ಮಿಲ್ಕು ಮಾತ್ರವೇ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

    ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ರೇಷ್ಮೆ ಬೆಳೆಗಾರರ ಕಾರ್ಯಾಗಾರ ಹಾಗೂ ‘ನನ್ನ ರೇಷ್ಮೆ-ನನ್ನ ಹೆಮ್ಮೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ ಒಂದು ಎಕರೆ ಭೂಮಿ ಇದ್ದರೆ ಒಂದು ಕುಟುಂಬವನ್ನು ಸಾಕುವಷ್ಟು ಸಾಮರ್ಥ್ಯ ಇರುವುದು ರೇಷ್ಮೆ ಬೆಳೆಗೆ ಮಾತ್ರ ಎಂದು ಹೇಳಿದ ಅವರು, ವಿಶೇಷವಾಗಿ ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವುದು ರೇಷ್ಮೆ ಬೆಳೆ ಮತ್ತು ಹೈನುಗಾರಿಕೆ ಮಾತ್ರ ಎಂದು ಅಭಿಪ್ರಾಯಪಟ್ಟರು.

    ರೇಷ್ಮೆ ಉದ್ದಿಮೆ ಕೇವಲ ಬೆಳೆ ಅಲ್ಲ, ಇದೊಂದು ಕೈಗಾರಿಕೆ ಎಂದು ಅವರು ಆ ಕಾರಣದಿಂದಲೇ ಈ ಇಲಾಖೆಯನ್ನು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಇಡಲಾಗಿದೆ ಎಂದರು. ಕಡಿಮೆ ಭೂಮಿಯಲ್ಲಿ ಅತ್ಯಧಿಕ ಲಾಭ ತರಬಹುದಾದ ರೇಷ್ಮೆ ಬೆಳೆಯ ವಿಸ್ತೀರ್ಣವನ್ನು ಹೆಚ್ಚು ಮಾಡಬೇಕಿದೆ ಎಂದ ಅವರು, ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದಲೂ ಪೂರಕ ನೆರವು, ಸಹಕಾರವನ್ನು ನೀಡುವ ಅತ್ಯಂತ ಅವಶ್ಯ ಇದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ನೀಡುವ ಹಾಗೂ ರೇಷ್ಮೆ ಉದ್ದಿಮೆಯನ್ನು ಉತ್ತೇಜಿಸುವ ಯೋಜನೆಗಳನ್ನು ರೂಪಿಸುವುದಾಗಿ ಅವರು ತಿಳಿಸಿದರು.

    ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದರಿಂದ ರೈತರು ರೇಷ್ಮೆ ಬೆಳೆಯನ್ನು ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವುದು ಅನಿವಾರ್ಯ ಮತ್ತು ಅಗತ್ಯ ಎಂದ ಅವರು, ರೇಷ್ಮೆ ಇಲಾಖೆ ಸೇರಿದಂತೆ ಈಗಾಗಲೇ ರಾಜ್ಯ ಸರ್ಕಾರ ವಿವಿಧ ಇಲಾಖೆಗಳಿಗೆ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿದ್ದು, ಇಲಾಖೆಯನ್ನು ಬಲಪಡಿಸುವ ಎಲ್ಲಾ ಕಾರ್ಯಗಳನ್ನು ರೂಪಿಸುವುದಾಗಿ ಅವರು ತಿಳಿಸಿದರು.

    ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮಾತನಾಡಿ, ರೇಷ್ಮೆ ಕೃಷಿ ಲಾಭದಾಯಕ ಉದ್ದಿಮೆಯಾಗಿದ್ದು, ಚೀನಾಕ್ಕೆ ಸರಿಸಮಾನವಾಗಿ ಉತ್ತೇಜನಗಳನ್ನು ನಮ್ಮ ರೈತರಿಗೆ ಕೊಡುವ ಅಗತ್ಯವಿದೆ ಎಂದರು. ರೇಷ್ಮೆ ಕೃಷಿಯಲ್ಲಿ ಕೇವಲ ಗೂಡು ಬೆಳೆಯುವುದು ಅಷ್ಟೇ ಅಲ್ಲದೆ, ನೂಲು ಬಿಚ್ಚುವ ತಂತ್ರಜ್ಞಾನಕ್ಕೆ ಉದ್ದಿಮೆಗಳು ಮುಂದಾಗಬೇಕು. ಇದರಿಂದ ರೇಷ್ಮೆ ಕೃಷಿ ಉದ್ದಿಮೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ. ಇದಕ್ಕಾಗಿ ಸರ್ಕಾರವನ್ನು ಅವಲಂಬಿಸಿದರೆ ಸಾಲದು. ಖಾಸಗಿ ವಲಯಗಳು ನೂಲು ಬಿಚ್ಚುವ ಕೈಗಾರಿಕೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಅಲ್ಲದೆ, ತುಮಕೂರಿನಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಸರ್ಕಾರ ಮುಂದಾಗಬೇಕು ಎಂದು ಅವರು ತಿಳಿಸಿದರು.

    ಇದಕ್ಕೂ ಮುನ್ನ ರೇಷ್ಮೆ ಬೆಳೆಗಾರರಾದ ಶಿವಾನಂದ್ ಅವರು ಮಾತನಾಡಿ, ರಾಜ್ಯದಲ್ಲಿ ರೇಷ್ಮೆ ಬೇಸಾಯವನ್ನು ಉತ್ತೇಜಿಸುವ ಹಾಗೂ ರೇಷ್ಮೆ ಇಲಾಖೆಯನ್ನು ಬಲಪಡಿಸಲು ಸರ್ಕಾರ ಮುಂದಾಗಬೇಕೆಂದು ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಬಿ.ಎಂ.ಟಿ.ಸಿ. ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಬಿ.ವಿ. ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ರೇಷ್ಮೆ ಅಪರ ನಿರ್ದೇಶಕಿ ಬಿ.ಆರ್. ಪ್ರತಿಭಾ, ರೇಷ್ಮೆ ಜಂಟಿ ನಿರ್ದೇಶಕರಾದ ಕೆ.ಎನ್. ರವಿ, ರಾಜಪ್ಪ, ವಿಜ್ಞಾನಿ ಡಾ. ವೈ. ಶ್ರೀನಿವಾಸಲು ಉಪಸ್ಥಿತರಿದ್ದರು. ರೇಷ್ಮೆ ಉಪನಿರ್ದೇಶಕ ಟಿ. ಲಕ್ಷ್ಮಿ ನರಸಯ್ಯ ಸ್ವಾಗತಿಸಿದರು.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/H1duNIQRfXnJcfQKWPzNqD


    Provided by
    Provided by
    admin
    • Website

    Related Posts

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು…

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.