ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಅವಧಾರನಹಳ್ಳಿ ರೈತರು ತಹಶೀಲ್ದಾರ್ ಕಚೇರಿ ಮುತ್ತಿಗೆ ಹಾಕಿದರು.
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಾಜಿಹಳ್ಳಿ ಗ್ರಾಮದ ಸರ್ವೇ ನಂಬರ್ 33ರಲ್ಲಿ ಸುಮಾರು 30 ವರ್ಷಗಳಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಬಗರ್ ಹುಕ್ಕುಮ್ ಅಡಿಯಲ್ಲಿ ಅರ್ಜಿ ಹಾಕಿ ಸರ್ಕಾರಕ್ಕೆ ಟಿ.ಟಿ. ಸಹ ಈ ಬಡರೈತರು ಕಟ್ಟಿದ್ದಾರೆ. ಆದರೆ ಇದೀಗ ಅನುಭವದಲ್ಲಿ ಇರುವ ರೈತರನ್ನು ಒಕ್ಕಲು ಎಬ್ಬಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ತೋಟಗಾರಿಕೆ ಇಲಾಖೆಯ ಕೆಂಪೇಗೌಡ ಎಂಬ ಅಧಿಕಾರಿ ರೈತರಿಗೆ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ದನ ಕುರಿಗಾಹಿ ಹೆಣ್ಣು ಮಕ್ಕಳು ಕುರಿ ದನ ಕಾಯುಲು ಹೋದರೆ ಅಸಭ್ಯವಾಗಿ ವರ್ತಿಸುವುದು ಪೋಟೊ ತೆಗೆಯುವುದು ಮಾಡುತ್ತಾರೆ ಎಂದು ಆರೋಪಿಸಿದರು.
ತಹಶೀಲ್ದಾರ್ ಕಚೇರಿ ಮುತ್ತಿಗೆ ಹಾಕಿದ ರೈತರು ಸೂಕ್ತ ನ್ಯಾಯ ಒದಗಿಸುವಂತೆ ತಹಶೀಲ್ದಾರ್ ಗೆ ಮನವಿ ಮಾಡಿದರು. ತೋಟಗಾರಿಕೆ ಇಲಾಖೆಗೆ ಸೂಕ್ತ ದಾಖಲೆಗಳೇ ಇಲ್ಲ ಎಂದು ಆರೋಪಿಸಿದ ರೈತರು, 40 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದ ಜಮೀನನ್ನು ಉಳುಮೆ ಮಾಡಲು ಮುಂದಾಗ ಘರ್ಷಣೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತೋಟಗಾರಿಕೆ ಇಲಾಖೆಯ ಅಧಿಕಾರಿ ಕೆಂಪೇಗೌಡ ವಿರುದ್ಧ ಇದೇ ವೇಳೆ ರೈತರು ಧಿಕ್ಕಾರ ಕೂಗಿದರು. ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಗೆ ಮನವಿ ಸಲ್ಲಿಸಿ ಸೂಕ್ತ ನ್ಯಾಯ ನೀಡುವಂತೆ ಆಗ್ರಹಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW