ತುಮಕೂರು: ಹೇಮಾವತಿ ಲಿಂಕ್ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಒಳಗೆ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಅಮರಣಾಂತರ ಉಪವಾಸ ಸತ್ಯಾಗ್ರಹ ಕುಳಿತಿದ್ದ ಸೊಗಡು ಶಿವಣ್ಣ, ತುಮಕೂರಿನ ಡಿಸಿ ಕಚೇರಿ ಒಳಗೆ ಚಾಪೆ, ದಿಂಬು ಹಾಕಿಕೊಂಡು ಮಲಗಿದ್ದರು.
ಇಂದು ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಸತ್ಯಾಗ್ರಹನಿರತ ಶಿವಣ್ಣರನ್ನ ತುಮಕೂರು ಎಎಸ್ಪಿ ಹಾಗೂ ಪೊಲೀಸ್ ಸಿಬ್ಬಂದಿಗಳು ವಶಕ್ಕೆ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW