nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026
    Facebook Twitter Instagram
    ಟ್ರೆಂಡಿಂಗ್
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಕೆರೆಯ ಫಲವತ್ತಾದ ಮಣ್ಣು ರಾತ್ರಿ ವೇಳೆ ಬಗೆದು ಫ್ಯಾಕ್ಟರಿ ಒಳಗೆ ಸಾಗಾಟ
    ಕೊರಟಗೆರೆ September 2, 2025

    ಸರ್ಕಾರಿ ಕೆರೆಯ ಫಲವತ್ತಾದ ಮಣ್ಣು ರಾತ್ರಿ ವೇಳೆ ಬಗೆದು ಫ್ಯಾಕ್ಟರಿ ಒಳಗೆ ಸಾಗಾಟ

    By adminSeptember 2, 2025No Comments2 Mins Read
    koratagere
    •  ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣು
    • ರಸ್ತೆಗೆ ಮಣ್ಣು ಸುರಿದ್ದಿದ್ದರಿಂದ ಅಪಘಾತ ಸಂಭವಿಸಿ 3 ಜನರಿಗೆ ಗಾಯ

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಅಕ್ರಮವಾಗಿ ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣಿನಿಂದ ಅಪಘಾತ ಸಂಭವಿಸಿ 3 ಜನ ಗಾಯಾಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


    Provided by
    Provided by

    ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಸಮೀಪ ಇರುವ ವಿಶಾಲ್ ನ್ಯಾಚರಲ್ ಫುಡ್ ಪ್ರಾಡೆಕ್ಟ್ ಇಂಡಿಯಾ ಪ್ರವೇಟ್ ಲಿಮಿಟೆಡ್‌ ನ ವ್ಯವಸ್ಥಾಪಕ ಕ್ರಮವಾಗಿ ರಾತ್ರೋರಾತ್ರಿ ಮಣ್ಣು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಟಿಪ್ಪರ್ ಲಾರಿ ಒಳಗೆ ಹೋಗದೇ ಕೊರಟಗೆರೆ ಬೆಂಗಳೂರು ರಸ್ತೆಯ ರಾಜ್ಯ ಹೆದ್ದಾರಿಯ ಮಧ್ಯ ಭಾಗದಲ್ಲಿ ಸುರಿದು ಹೋಗಿದ್ದಾರೆ.

    ಮಧುಗಿರಿ ತಾಲೂಕಿನ ಕತ್ತಿರಾಜನಹಳ್ಳಿ ಗ್ರಾಮದ ಸಿದ್ದೇಶ್, ಕಮಲ, ಹೇಮಂತ್ ಎನ್ನವವರ ಸ್ಕೂಟಿ ವಾಹನದಲ್ಲಿ ಬೆಂಗಳೂರು ಮಾರ್ಗವಾಗಿ ಆಗಮಿಸುತ್ತಿದ್ದರು, ರಸ್ತೆ ಮಧ್ಯೆ ಸುರಿದ ಮಣ್ಣು ಕಣ್ಣಿಗೆ ಕಾಣದೆ ಮಣ್ಣಿನ ಮೇಲೆ ಹಾರಿ ಎದುರಿಗೆ ಬರುತ್ತಿದ್ದ ಓಮಿನಿ ವಾಹನಕ್ಕೆ ಗುದ್ದಿದ್ದಾರೆ. ಗುದ್ದಿದ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಯಾಗಿದ್ದು, ಗಾಯಾಳುಗಳಿಗೆ ಕಾಲು ಕೈಗೆ ಬಲವಾಗಿ ಹೊಡೆತ ಬಿದ್ದ ಕಾರಣ ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ರಾತ್ರೋರಾತ್ರಿ ಮಣ್ಣು ಸುರಿದು ಈ ಅವಗಡಕ್ಕೆ ಸಂಭಂದಿಸಿದ ವ್ಯವಸ್ಥಾಪಕರ ಪ್ರಶ್ನೆ ಮಾಡಲು ಹೋದ ಸಾರ್ವಜನಿಕರಿಗೆ ಅಲ್ಲಿನ ಸೆಕ್ಯೂರಿಟಿಗಳು ದಮಕಿ ಹಾಕಿದ್ದಾರೆ ಎಂದು ಸಾರ್ವಜನಿಕ ತಿಳಿಸಿದರು.

    ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಣ್ಣು ಮಾಫಿಯಾ ಹೆಗ್ಗಿಲ್ಲದೇ ಸಾಗುತ್ತಿದ್ದು, ಕೆರೆಯ ಮಣ್ಣು ರಾತ್ರಿ ವೇಳೆ ಬಗೆದು ಫ್ಯಾಕ್ಟರಿ ಒಳಗೆ ಸಾಗಿಸುತ್ತಿದ್ದರೂ ಯಾವುದೆ ಅಧಿಕಾರಿಗಳು ಇವರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಮಣ್ಣು ಮಟ್ಟ ಮಾಡುತ್ತಿದ್ದ ಜೆಸಿಬಿ ಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

    ಏಕಾಏಕಿ ಸುಮಾರು 5–10 ಲೋಡ್ ಗಳಷ್ಟು ಮಣ್ಣು ಹೆದ್ದಾರಿಗೆ ಸುರಿದು ಬೇಜಾವಾಬ್ದಾರಿ ವರ್ತನೆ ತೋರಿದ ಮಾಲೀಕ ಹಾಗೂ ವ್ಯವಸ್ಥಾಪಕರ ಈ ನಡೆಗೆ ಅಪಘಾತ ನಡೆದಿದ್ದು ಫ್ಯಾಕ್ಟರಿ ಮಾಲೀಕನ ವಿರುದ್ದ ಕ್ರಮ ಜರಿಗಿಸುವಂತೆ ಸಾರ್ವಜನಿಕರ ಒತ್ತಾಯವಾಗಿದೆ.

    ಕೊರಟಗೆರೆ–ದಾಬಸ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಇರುವ ಈ ಫ್ಯಾಕ್ಟರಿ ಮುಂದೆ ಯಾವುದೆ ಸೂಚನ ಫಲಕವಾಗಲಿ ಅಥವಾ ಅಪಘಾತ ವಲಯ ಎಂದಾಗಲಿ ಅಳವಡಿಸಿಲ್ಲ. ಪದೇ ಪದೇ ಇಲ್ಲಿ ಅಪಘಾತ ಸಂಭಿಸುತ್ತಿವೆ. ತಿಂಗಳಿಗೆ 10ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ ಆಸ್ಪತ್ರೆ ದಾಖಲಾಗುತ್ತಿದ್ದು, ರಾತ್ರಿ ಈ ಸುರಿದ ಮಣ್ಣಿನಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿ ಸವಾರರು ಪಾರದಾಡುವಂತಾಗಿತ್ತು.

    ಪೊಲೀಸರ ಮೇಲೆಯೇ ದರ್ಪ:

    ಪ್ಯಾಕ್ಟರಿಯ ವ್ಯವಸ್ಥಾಪಕರನ್ನ ಪ್ರಶ್ನೆ ಮಾಡಲು ಹೋದ ಸಾರ್ವಜನಿಕರನ್ನ ನಿಯಂತ್ರಣ ಮಾಡಲು ಬಂದ ಪೂಲೀಸ್ ಅಧಿಕಾರಿಗಳ ಮೇಲೆ ಐವರು ಸೆಕ್ಯೂರಿಟಿಗಳು ದರ್ಪ ಮೆರೆದಿದ್ದಾರೆ. ನಂತರ ಪೂಲೀಸ್ ಅಧಿಕಾರಿಗಳು ಸೆಕ್ಯೂರಿಟಿಗಳಿಗೆ ತರಾಟೆ ತೆಗೆದುಕೊಂಡರು. ನಂತರ ಸಾರ್ವಜನಿಕರನ್ನ ಮನವಲಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದರು.

    ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಹೆದ್ದಾರಿಗೆ ಸುರಿದಿದ್ದ ಮಣ್ಣನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಮಾಡಿಕೊಟ್ಟರು. ಇದೇ ವೇಳೆ ಸ್ಥಳಕ್ಕೆ ಕೋಳಾಲ ಪಿಎಸ್ ಐ ಅಭಿಷೇಕ್ ಭೇಟಿ ನೀಡಿ ಪರಿಶೀಲನೆ ನಡೆದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

    May 28, 2026

    ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…

    ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ

    May 28, 2026

    ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 

    May 28, 2026

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.