nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    • ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕ್ಷೇತ್ರೋತ್ಸವ ಮತ್ತು ದಶಮಾನೊತ್ಸವ: 2024
    ಕುಣಿಗಲ್ November 7, 2024

    ಕುಣಿಗಲ್ ಕೃಷಿ ಸಂಶೋಧನಾ ಕೇಂದ್ರದಲ್ಲಿ ಕ್ಷೇತ್ರೋತ್ಸವ ಮತ್ತು ದಶಮಾನೊತ್ಸವ: 2024

    By adminNovember 7, 2024No Comments2 Mins Read
    kunigal

    ಕುಣಿಗಲ್ ಕೃಷಿ ಸಂಶೋಧನಾಕೇಂದ್ರ, ಕುಣಿಗಲ್‌ ನಲ್ಲಿ ದಿನಾಂಕ : 06—11–2024ರಂದು ಬೆಂಗಳೂರು, ಕೃಷಿ ವಿಜ್ಞಾನಕೇಂದ್ರ, ಕೊನೆಹಳ್ಳಿ, ಸಿಮಿಟ್ ಹೈದರಾಬಾದ್, ಕುಣಿಗಲ್‌ ನ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ, ಐ.ಡಿ.ಎಫ್ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಮತ್ತು ತುಮಕೂರು ಹಾಲು ಒಕ್ಕೂಟಸಹಯೋಗದಲ್ಲಿಕ್ಷೇತ್ರೋತ್ಸವ ಮತ್ತು ದಶಮಾನೋತ್ಸವ–2024 ಕಾರ್ಯಕ್ರಮವನ್ನುಏರ್ಪಡಿಸಲಾಯಿತು.

    ಈ ಕಾರ್ಯಕ್ರಮವನ್ನುವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರಾದ ಡಾ.ಕೇಶವಯ್ಯರವರು ಉದ್ಘಾಟಿಸಿ ಮಾತನಾಡಿ ಕರ್ನಾಟದ ರಾಜ್ಯದ ಕೃಷಿ ಪ್ರದೇಶವು ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಖುಷ್ಕಿ ಬೇಸಾಯದ ನಿರ್ವಹಣೆ ಕುರಿತಂತೆ ಎರಡನೇ ಹಸಿರುಕ್ರಾಂತಿ ಯಾಗಬೇಕೆಂದುಕರೆಕೊಟ್ಟುರು. ಮುಂದುವರೆದು, ರೈತರು ಆಹಾರ ಬದ್ದತೆಯ ಜೊತೆಗೆ ಪೌಷ್ಟಿಕತೆ ಭದ್ರತೆಯ ಕಡೆ ಹೆಚ್ಚು ಗಮನ ನೀಡಬೇಕೆಂದುಕರೆಕೊಟ್ಟರು.


    Provided by
    Provided by
    Provided by

    ತುಮಕೂರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಡಾ.ರಮೇಶ್‌ ಮಾತನಾಡಿ, ಪ್ರಸ್ತುತ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ರೈತರ ಅಭಿವೃದ್ದಿಗಾಗಿ ಚಾಲ್ತಿಯಲ್ಲಿರುವ ಯೋಜನೆಗಳ ಬಗ್ಗೆ ತಿಳಿಸಿದರು ಹಾಗೂ ಮುಂದಿನ ದಿನಗಳಲ್ಲಿ ನ್ಯಾನೊಗೊಬ್ಬರ ಬಳಕೆಯ ಪ್ರಾತ್ಯಾಕೆಗಳನ್ನು ಹಮ್ಮಿಕೊಳ್ಳುತ್ತಿದ್ದು ಮತ್ತು ಹಸಿರುಗೊಬ್ಬರ ಬಳಕೆಯ ಪ್ರೋತ್ಸಾಹಕ್ಕಾಗಿ 70% ಸಬ್ಸಿಡಿ ನೀಡಲಾಗುವುದು ಎಂದು ತಿಳಿಸಿದರು.

    ನಂತರ ಡಾ.ಪಿ.ಮಹದೇವು ಪ್ರಾಧ್ಯಾಪಕರು ವಲಯ ಕೃಷಿ ಸಂಶೋಧನಾಕೇಂದ್ರ, ಮಂಡ್ಯರವರು ನೀರಿನ ಸಂರಕ್ಷಣೆ, ಮಣ್ಣಿನ ಪೋಶಕಾಂಶಗಳ ನಿರ್ವಹಣೆ ಹಾಗೂ ಸಮಗ್ರ ಕೃಷಿ ಪದ್ದತಿಯನ್ನು ಅಳಡಿಸಿಕೊಳ್ಳುವುದರಿಂದ ಕೃಷಿಯಲ್ಲಿ ಲಾಭದಾಯಕತೆಯನ್ನು ಕಾಣುವ ಬಗ್ಗೆ ಹಾಗೂ ವಿವಿಧ ಮೇವಿನ ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳ ಬಗ್ಗೆ ಮಾಹಿತಿ ನೀಡಿದರು.

    ನಂತರ ಡಾ.ದಿನೇಶ್ ಬೇಸಾಯತಜ್ಞರು ಕೃಷಿ ವಿಜ್ಞಾನಕೇಂದ್ರ, ರಾಮನಗರ ಅವರು ಪ್ರಸ್ತುತ ಸ್ಥಿತಿಯ ಒಣಬೇಸಾಯದಲ್ಲಿ ಬಳಸಬೇಕಾದ ನೂತನ ತಂತ್ರಜ್ಞಾನಗಳು ಹಾಗೂ ಸುಧಾರಿತ ತಳಿಗಳ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು.

    ಸಂತೋಷ್ ಶೇಠ್ ಯೋಜನಾಧಿಕಾರಿಗಳು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಕುಣಿಗಲ್‌ ರವರುತಮ್ಮಕೇಂದ್ರದಿಂದ ರೈತರಿಗೆ ನೀಡುವ ಸೌಲಭ್ಯಗಳು ಹಾಗೂ ಕೈಗೊಂಡಿರುವ ಯೋಜನೆಗಳ ಬಗ್ಗೆ ತಿಳಿಸಿದರು. ಮುಂದುವರೆದು ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬಂದಿದ್ದು ಮುಂದಿನ ದಿನಗಳಲ್ಲಿ ನಡೆಸುವಂತಹ ಕೃಷಿ ಚಟುವಟಿಕೆಗಳಲ್ಲಿ ನಮ್ಮ ಸಹಕಾರವಿರುತ್ತದೆ ಎಂದರು.

    ಡಾ.ಲೋಗಾನಂದನ್, ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನಕೇಂದ್ರ ಹಿರೆಹಳ್ಳಿ ಕೇಂದ್ರದಿಂದ ರೈತಬಾಂದವರಿಗೆ ದೊರೆಯುವ ಸೌಲಭ್ಯಗಳು, ತರಬೇತಿ ಮತ್ತು ಪರಿಕರಗಳ ಬಗ್ಗೆ ಮಾಹಿತಿ ನೀಡಿ ಈ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.

    ಈ ಸಂದರ್ಭಧಲ್ಲಿಕಾರ್ಯಕ್ರಮಕ್ಕೆ ಆಗಮಿಸಿದ ರೈತರಿಗೆಕೇಂದ್ರದಲ್ಲಿಕೈಗೊಂಡಿರುವ ವಿವಿಧ ಬೆಳೆಗಳ ತಳಿಗಳು ಮತ್ತು ತಾಂತ್ರಿಕತೆಗಳ ಕುರಿತಂತೆ ಕೇಂದ್ರದ ಕ್ಷೇತ್ರ ಅಧೀಕ್ಷಕರಾದ ಡಾ.ಕೆ.ಆರ್. ಶ್ರೀನಿವಾಸ್ ಬಂದಂತ ವರಿಸಿದರು.

    ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರ, ಕೊನೆಹಳ್ಳಿ, ಕೇಂದ್ರದ ಮುಖ್ಯಸ್ಥರಾದ ವಿ.ಗೋವಿಂದೇಗೌಡರವರು ರೈತ ಸ್ನೇಹಿ ಹಾಗೂ ರೈತರ ಸಮಸ್ಯೆಗೆ ಅನುಗುಣವಾಗಿ ವಿಶ್ವವಿದ್ಯಾನಿಲಯದ ಸಂಬಂಧಪಟ್ಟ ಸಂಶೋಧನಾ ಕೇಂದ್ರಗಳು ನೂತನ ಸುಧಾರಿತ ತಳಿಗಳು, ಬೆಳೆ ಪದ್ದತಿಗಳ ಕುರಿತು ಪ್ರಾಯೋಗಗಳನ್ನು ನಡೆಸಿ ಕ್ಷೇತ್ರೋತ್ಸವ ಆಯೋಜಿಸಲಾಗಿದೆ. ಈ ಕ್ಷೇತ್ರೋತ್ಸವದಲ್ಲಿ ಪ್ರದರ್ಶಿಸುತ್ತಿರುವ ತಂತ್ರಜ್ಞಾನಗಳನ್ನು ರೈತರು ಅಳವಡಿಸಿಕೊಳ್ಳಬೇಕು ಎಂದರು. ಮುಂದುವರೆದು ರೈತರುಜಮೀನಿನಲ್ಲಿಒಂದು ಬೆಳೆಗೆ ಸೀಮಿತರಾಗದೆ ಸಮಗ್ರ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡು ಬಂದಂತಹ ಉತ್ಪಾನೆಗೆ ಮೌಲ್ಯವರ್ಧನೆ ಮಾಡಿ ರೈತಗುಂಪುಗಳ ಮುಖಾಂತರ ಮಾರಾಟ ಮಾಡಿ ಉದ್ಯಮಿಗಳಾಗುವುದರ ಜೊತೆಗೆ ಬಳಕೆ ಮಾಡಬೇಕೆಂದು ಕರೆಕೊಟ್ಟರು.

    ಕಾರ್ಯಕ್ರಮದ ಭಾಗವಹಿಸಿದ ಗಣ್ಯವ್ಯಕ್ತಿಗಳನ್ನು ಹಾಗೂ ರೈತರಿಗೆ ವಂದಿಸುತ್ತಾ ಪ್ರಸ್ತುತ ಹವಾಮಾನ ಚತುರ ಡಿಜಿಟಲ್ ಕೃಷಿ ಘೋಷವಾಕ್ಯದೊಂದಿಗೆ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನಕೇಂದ್ರದಲ್ಲಿ ನವೆಂಬರ್ 14 ರಿಂದ 17 ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೆಚ್ಚಿನ ರೈತರು ಬಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕರೆನೀಡಿದರು.

    ಈ ಕಾರ್ಯಕ್ರಮದಲ್ಲಿ ಸಿಮಿಟ್ ಸಂಸ್ಥೆಯ ವಿಜ್ಞಾನಿ ಡಾ.ಟಿ.ಸತೀಸ್, ಸಹಾಯಕ ಕೃಷಿ ನಿರ್ದೇಶಕರಾದರಂಗನಾಥ್, ಪಶು ಸಂಗೋಪನೆ ಪಾಲಿಟೆಕ್ನಿಕ್‌ ನ ಪ್ರಾಂಶುಪಾಲರಾದ ಡಾ.ಸುಮ ಕೇವಿಕೆ ಗೃಹ ವಿಜ್ಞಾನಿ ಡಾ.ಸಿಂಧು ಡಾ.ಸಿದ್ದಗಂಗಯ್ಯ, ಡಾ.ಸೋಮಶೇಖರಪ್ಪ ಪಿ. ಮುಂತಾದವರು ಉಪಸ್ಥಿತರಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕುಣಿಗಲ್ | ಮುಚ್ಚಿದ ತೂಬು ತೆರವಿಗೆ ಹೇಮಾವತಿ ನಾಲಾ ವಲಯ ಅಧಿಕಾರಿಗಳಿಂದ ಪರಿಶೀಲನೆ

    September 26, 2025

    ಕುಣಿಗಲ್: ಪೌರಕಾರ್ಮಿಕರಿಗೆ ನಿವೇಶನ ನೀಡಲು ಮೂರು ಎಕರೆ ಜಮೀನು ಗುರುತು: ಶಾಸಕ ರಂಗನಾಥ್

    September 24, 2025

    ಕುಣಿಗಲ್: ರಸಗೊಬ್ಬರಕ್ಕೆ ರೈತರ ಪರದಾಟ

    September 23, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ…

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.