ತುಮಕೂರು: ಆಹಾರ ಅರಸಿ ಗ್ರಾಮದಲ್ಲಿರುವ ಶ್ವಾನಗಳನ್ನು ಬೇಟೆಯಾಡಿ ತಿಂದು ಹಾಕುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದಿರುವ ಘಟನೆ ತುಮಕೂರು ತಾಲ್ಲೂಕಿ ಕಸಬಾ ಹೋಬಳಿ ಊರುಕೆರೆಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅನೇಕ ದಿನಗಳಿಂದ ಗ್ರಾಮದ ಸುತ್ತಮುತ್ತ ಜಾನುವಾರುಗಳನ್ನು ಹಾಗೂ ಕುರಿ ಮೇಕೆಗಳನ್ನು ಚಿರತೆಯು ತಿಂದು ಹಾಕುತ್ತಿತ್ತು.
ಚಿರತೆಯನ್ನು ಸರಿ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ನಿರಂತರವಾಗಿ ಅರಣ್ಯ ಇಲಾಖೆ, ಸಿಬ್ಬಂದಿಗಳಿಗೆ ಒತ್ತಡ ಹೇರುತ್ತಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು.
,ಸಂಜೆಯಾಗುತ್ತಿದ್ದಂತೆ ಊರ ಸಮೀಪವೇ ಎರಡು ಚಿರತೆಗಳು ಪ್ರತ್ಯಕ್ಷವಾಗುತ್ತಿದ್ದವು,ಜನರು ಭೀತಿಗೊಂಡಿದ್ದರು.
ಚಿರತೆ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಸ್ತಳೀಯ ಗ್ರಾಮಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ತರು ಅರಣ್ಯ ಇಲಾಖೆ ಗಮನಕ್ಕೆ ತಂದಾಗ ,ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಸೆರೆಸಿಕ್ಕಿದೆ. ಇನ್ನೂ ಎರಡು ಚಿರತೆಗಳಿದ್ದು ಅವುಗಳನ್ನು ಶೀಘ್ರವಾಗಿ ಸೆರೆ ಹಿಡಿಯುವಂತೆ ಗ್ರಾಮಸ್ತರು ಒತ್ತಾಯಿಸಿದ್ದಾರೆ.