nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026
    Facebook Twitter Instagram
    ಟ್ರೆಂಡಿಂಗ್
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊದಲ ಹಂತದ ಮತದಾನ: ಈ 5 ವಿಷಯಗಳು ನಿಮಗೆ ತಿಳಿದಿರಲಿ
    ರಾಜ್ಯ ಸುದ್ದಿ April 26, 2024

    ಮೊದಲ ಹಂತದ ಮತದಾನ: ಈ 5 ವಿಷಯಗಳು ನಿಮಗೆ ತಿಳಿದಿರಲಿ

    By adminApril 26, 2024No Comments2 Mins Read
    vote

    ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಇಂದು ನಡೆಯಲಿದ್ದು, 14 ಕ್ಷೇತ್ರಗಳಲ್ಲಿ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಸುಮಾರು 2.9 ಕೋಟಿ ಜನರು ಶುಕ್ರವಾರ 247 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಘಟಾನುಘಟಿಗಳು ಕಣದಲ್ಲಿದ್ದಾರೆ. ಮತದಾರರು ಕೂಡ ತಮ್ಮ ಮತ ನೀಡಿ ನೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾತರರಾಗಿದ್ದಾರೆ. ಇದರ ನಡುವೆ ಮೊದಲ ಹಂತದ ಮತದಾನ ಪ್ರಕ್ರಿಯೆ ವೇಳೆ ನೀವು ಈ 5 ಅಂಶಗಳನ್ನು ಗಮನಿಸಿ.

    ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶುಕ್ರವಾರ ನಾಗರೀಕರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬಿಜೆಪಿ – ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ಹೋರಾಟ ನಡೆಯುತ್ತಿದೆ. ಇದರ ನಡುವೆ ಶುಕ್ರವಾರ ನಡೆಯುವ ಲೋಕಸಭಾ ಚುನಾವಣೆ ಒಂದಿಷ್ಟು ಕುತೂಹಲಕಾರಿ ಅಂಶಗಳಿಂದ ಗಮನ ಸೆಳೆದಿವೆ. ಅವುಗಳ ಕುರಿತು ನೋಡೋಣ.

    ಕರ್ನಾಟಕದಲ್ಲಿ ಮೂರು ಪ್ರಮುಖ ಪಕ್ಷಗಳಿದ್ದು, ಚುನಾವಣೆಯಲ್ಲಿ ತ್ರಿಕೋನ ಸಮರ ನಡೆಯುತ್ತಿತ್ತು. ಆದರೆ ಈ ಸಲ ಮೈತ್ರಿ ಪಕ್ಷಗಳು ಹಾಗೂ ಏಕ ಪಕ್ಷದ ನಡುವೆ ಕಾಳಗ ನಡೆಯಲಿದೆ. ಅದೂ ಕೂಡ ಎರಡನೇ ಸಲ. ಕಳೆದ ಬಾರಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಎದುರಿಸಿದ್ದರೆ, ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ಕಾಂಗ್ರೆಸ್‌ ಅನ್ನು ಎದುರಿಸುತ್ತಿವೆ

    ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ – ಜೆಡಿಎಸ್‌ ಹಾಗೂ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಕ್ಕಲಿಗರ ಪ್ರಾಬಲ್ಯ ಇದೆ. 14 ಕ್ಷೇತ್ರಗಳ ಪೈಕಿ ಚಾಮರಾಜನಗರ, ಕೋಲಾರ ಮತ್ತು ಚಿತ್ರದುರ್ಗ ಮೀಸಲು ಕ್ಷೇತ್ರಗಳಾಗಿವೆ. ಉಳಿದ 11 ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್‌ ಮತ್ತು ಎನ್‌ಡಿಎ ಎರಡು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಉಳಿದ 6 ಕ್ಷೇತ್ರಗಳ ಪೈಕಿ ಇಬ್ಬರು ಒಕ್ಕಲಿಗರು ಸ್ಪರ್ಧಿಸಿದ್ದಾರೆ.

    20 ವರ್ಷಗಳ ಹಿಂದೆ ಕರ್ನಾಟಕದಿಂದ ಕೊನೆ ಬಾರಿ ಮುಸ್ಲಿಂ ಸಂಸದರೊಬ್ಬರು ಆಯ್ಕೆಯಾಗಿದ್ದರು. ಇದೀಗ 14 ಕ್ಷೇತ್ರಗಳ ಪೈಕಿ ಎನ್‌ಡಿಎ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳ ಪೈಕಿ ಇರುವ ಏಕೈಕ ಮುಸ್ಲಿಂ ಅಭ್ಯರ್ಥಿ ಎಂದರೆ ಅದು ಮನ್ಸೂರ್‌ ಅಲಿ ಖಾನ್‌ ಮಾತ್ರ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ದಿಂದ ಕಾಂಗ್ರೆಸ್‌ ಮನ್ಸೂರ್‌ ಅಲಿ ಖಾನ್‌ ಅವರನ್ನು ಕಣಕ್ಕಿಳಿಸಿದೆ.

    ಈ ಬಾರಿ 15 ಹಾಲಿ ಸಂಸದರಿಗೆ ಬಿಜೆಪಿ ಕೊಕ್‌ ನೀಡಿದೆ. ಅದರಲ್ಲೂ ನಾಳೆ ಶುಕ್ರವಾರ ನಡೆಯುವ 14 ಲೋಕಸಭಾ ಕ್ಷೇತ್ರಗಳ ಪೈಕಿ ಎ ನಾರಾಯಣಸ್ವಾಮಿ (ಚಿತ್ರದುರ್ಗ), ಮಾಜಿ ಸಿಎಂ ಡಿವಿ ಸದಾನಂದ ಗೌಡ (ಬೆಂಗಳೂರು ಉತ್ತರ), ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ (ದಕ್ಷಿಣ ಕನ್ನಡ), ಮುನಿಸ್ವಾಮಿ (ಕೋಲಾರ), ಪ್ರತಾಪ್‌ ಸಿಂಹ (ಮೈಸೂರು – ಕೊಡಗು), ಶ್ರೀನಿವಾಸ್‌ ಪ್ರಸಾದ್‌ (ಚಾಮರಾಜನಗರ), ಸುಮಲತಾ ಅಂಬರೀಶ್‌ (ಮಂಡ್ಯ), ಬಿಎನ್‌ ಬಚ್ಚೇಗೌಡ (ಚಿಕ್ಕಬಳ್ಳಾಪುರ), ಜಿಎಸ್‌ ಬಸವರಾಜ್‌ (ತುಮಕೂರು) ಅವರ ಬದಲಿಗೆ ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

    ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಅದಲ್ಲದೇ ಒಂದೇ ಕುಟುಂಬದ ಮೂರು ಅಭ್ಯರ್ಥಿಗಳು ಮೊದಲ ಹಂತದಲ್ಲಿ ಕಣದಲ್ಲಿದ್ದಾರೆ. ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದರೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ ಸಿಎನ್‌ ಮಂಜುನಾಥ್‌ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಮೂವರು ಕೂಡ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕುಟುಂಬದವರಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವಾರ ಹೋಬಳಿ ಕೊಂಡಜ್ಜಿಯಲ್ಲಿ ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’ ಶೀರ್ಷಿಕೆಯಡಿಯಲ್ಲಿ ಸಂಗೀತ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.