ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಅಳವಡಿಸಲಾಗಿತ್ತು.
ಬೆಕ್ಕನ್ನು ರಕ್ಷಿಸುವ ಪ್ರಯತ್ನದಲ್ಲಿ ಐವರು ಒಬ್ಬರ ನಂತರ ಒಬ್ಬರು ಬಾವಿಗೆ ಹಾರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದ ಓರ್ವನನ್ನು ಪೊಲೀಸರ ತಂಡ ರಕ್ಷಿಸಿದೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್, ಒಬ್ಬರ ನಂತರ ಒಬ್ಬರಂತೆ ಪಾಳು ಬಾವಿಗೆ ಹಾರಿದ್ದಾರೆ. ಆರು ಜನರ ಪೈಕಿ ಐವರ ಮೃತ ದೇಹಗಳನ್ನು ರಕ್ಷಣಾ ತಂಡವು ಹೊರತೆಗೆದಿದೆ ಎಂದು ಹೇಳಿದ್ದಾರೆ. ಬಹಳ ದಿನಗಳಿಂದ ಈ ಬಾವಿಯನ್ನು ಮುಚ್ಚಲಾಗಿತ್ತು, ಅಲ್ಲಿ ಕಸ ಸುರಿಯಲಾಗುತ್ತಿತ್ತು. ಬೆಕ್ಕನ್ನು ರಕ್ಷಿಸಲು ಇಳಿದಿದ್ದ ಜನರು ವಿಷಾನಿಲದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296