ಬಾಗಲಕೋಟೆ/ರಬಕವಿ ಬನಹಟ್ಟಿ: ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಿದ್ದರಿಂದ ಇಲ್ಲಿನ ಮಂಗಳವಾರ ಪೇಟೆಯಲ್ಲಿ ಹೂವಿನ ವ್ಯಾಪಾರಿಗಳು ಅವುಗಳ ರಕ್ಷಣೆಗಾಗಿ ಪ್ಲಾಸ್ಟಿಕ್ ಹೊದಿಕೆಗಳ ಮೂಲಕ ತಮ್ಮ ರಕ್ಷಣೆಗೆ ಮುಂದಾಗಿದ್ದಾರೆ.
‘ಒಂದು ತಿಂಗಳಿಗಿಂತ ಹೆಚ್ಚು ಕಾಲ ಬಿಸಿಲಿನ ಬೇಗೆಯಿರುವುದರಿಂದ ಹೂ ಮತ್ತು ಹೂಮಾಲೆಗಳ ವ್ಯಾಪಾರ ಮಾಡುವುದು ಸಮಸ್ಯೆಯಾಗಿದೆ. ಇದರಿಂದ ಬಹಳಷ್ಟು ಹಾನಿಯನ್ನು ಕೂಡಾ ಅನುಭವಿಸುತ್ತಿದ್ದೇವೆ. ಅಧಿಕ ಬಿಸಿಲಿನ ಪ್ರಮಾಣದಿಂದಾಗಿ ಸಾಕಷ್ಟು ಹಾನಿಯನ್ನು ಕೂಡಾ ಅನುಭವಿಸುತ್ತಿದ್ದೇವೆ ಎನ್ನುವುದು ಹೂ ವ್ಯಾಪಾರಿಗಳ ಅಳಲಾಗಿದೆ.
ಹೂ ಮಾಲೆಗಳು ಬಾಡುತ್ತಿವೆ. ಆದ್ದರಿಂದ ಅಂಗಡಿಗಳ ಮೇಲ್ಭಾಗದಲ್ಲಿ ಪ್ಲಾಸ್ಟಿಕ್ ಹೊದಿಕೆಗಳನ್ನು ಹಾಕಿದ್ದೇವೆ. ದಾವಣಗೇರಿ ಮತ್ತು ಬೆಂಗಳೂರುಗಳಿಂದ ಹೂ ಮತ್ತು ಹೂಮಾಲೆಗಳನ್ನು ತರಿಸಿಕೊಳ್ಳುತ್ತಿದ್ಧೇವೆ’ ಎನ್ನುತ್ತಾರೆ ಹೂ ವ್ಯಾಪಾರಸ್ಥರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA