nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    • ವೃದ್ಧೆಯ ಚಿನ್ನದ ಸರಕಸಿದು ಪರಾರಿಯಾದ ಕಳ್ಳ: ಬೆಚ್ಚಿಬಿದ್ದ ಜನ
    • ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನ್ನದಾತರಿಗೆ ತೊಂದರೆಯಾಗಬಾರದು, ಹೋರಾಟಕ್ಕೆ ಸಿದ್ಧ: ಸಿ.ಚಂದನ್ ಗೌಡ
    ಜಿಲ್ಲಾ ಸುದ್ದಿ August 1, 2025

    ಅನ್ನದಾತರಿಗೆ ತೊಂದರೆಯಾಗಬಾರದು, ಹೋರಾಟಕ್ಕೆ ಸಿದ್ಧ: ಸಿ.ಚಂದನ್ ಗೌಡ

    By adminAugust 1, 2025No Comments2 Mins Read
    chandan gowda

    ಸರಗೂರು: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ  ಸಂಸ್ಥಾಪಕರು ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಹುಟ್ಟು ಹಬ್ಬವನ್ನು  ಪಟ್ಟಣದ ಬಸ್ ನಿಲ್ದಾಣದಿಂದ ಮಹಾವೀರ ಸರ್ಕಲ್ ವೃತ್ತ ವರೆಗೂ ಮೆರವಣಿಗೆ ಮಾಡಿಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡಿ ಹಾಗೂ ರೈತ  ಅನ್ನದಾತರಿಗೆ ಅನ್ನದಾನ ನೀಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

    ನಂತರ ಮಾತನಾಡಿದ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ  ಸಂಸ್ಥಾಪಕರು ರಾಜ್ಯಾಧ್ಯಕ್ಷ ಭೂಮಿಪುತ್ರ ಸಿ.ಚಂದನ್ ಗೌಡ,  ನಾನು  ದೊಡ್ಡ ಸಿದ್ಧಾಂತದ ಮೇಲೆ ನಮ್ಮ ಸಂಘಟನೆಯನ್ನು ಪ್ರಾರಂಭಿಸಿದ್ದು, ನಮ್ಮ ರಾಜ್ಯದ ಯಾವುದೇ ಮೂಲೆಯಲ್ಲಿ ನನ್ನ ಅನ್ನದಾತರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಕೂಡಲೇ ಸ್ಥಳಕ್ಕೆ ಆಗಮಿಸಿ ರೈತರಿಗೆ ಅನುಕೂಲವಾಗವ ನಿಟ್ಟಿನಲ್ಲಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಾನು ಯಾವಾಗಲೂ ಸಿದ್ದ ಎಂದು ತಿಳಿಸಿದರು.


    Provided by
    Provided by

    ನನ್ನ ಅನ್ನದಾತರು ಹಸಿವಿನಿಂದ ಇರಬಾರದು ಎನ್ನುವುದೇ ನನ್ನ ಉದ್ದೇಶ. ತಾಲ್ಲೂಕಿನ ಕಾಡಂಚಿನ ಭಾಗದಲ್ಲಿ ಹೆಚ್ಚು ರೈತರು ಇದ್ದಾರೆ. ಅರಣ್ಯದಿಂದ ಹಾಗೂ ಯಾವುದೇ ಇಲಾಖೆಯಿಂದ ನನ್ನ ಅನ್ನದಾತರಿಗೆ ತೊಂದರೆಯಾಗಬಾರದು ಎಂಬ ಕನಸು ನನಸಾಗಿಸಲು ಹೋರಾಟ ಮಾಡಲು ಸಿದ್ಧ.  ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ಯುವ ಘಟಕದ ರಾಜ್ಯಾಧ್ಯಕ್ಷ ಸಮಂತ್ ಎಸ್.ಬಿ. ಮಾತನಾಡಿ,  ಈ ಪವಿತ್ರ ದಿನವು ಅವರ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಶಕ್ತಿಯನ್ನು ತುಂಬಿ, ಅವರ ಸೇವಾಯಾನವನ್ನು ಇನ್ನಷ್ಟು ಉಜ್ವಲವಾಗಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

    ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ದೃಢಚೇತನದ ಮೂಲಕ ಸಂಘದ ಬೆಳವಣಿಗೆಯ ಕಡೆಗೆ ಅವರು ಎಳೆದಿರುವ ದಾರಿ ನಮಗೆ ಸದಾ ಮಾರ್ಗದರ್ಶನವಾಗಿದೆ. ಸಂಘದ ಪ್ರತಿಯೊಬ್ಬ ಸದಸ್ಯನಿಗೂ ಪ್ರೇರಣೆಯ ಮೂಲವಾಗಿರುವ ಅವರ ನಾಯಕತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಜನಸೇವೆ, ಸಂಘಶಕ್ತಿಯ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಸಕ್ಕಾಗಿ ಬಳಸಲ್ಪಡಲಿ. ಅವರ ಉತ್ತಮ ಆರೋಗ್ಯ, ಕುಟುಂಬದ ಸಮೃದ್ಧಿ, ಹಾಗೂ ದೀರ್ಘಾಯುಷ್ಯಕ್ಕಾಗಿ ನಮ್ಮೆಲ್ಲರ ಹೃದಯಪೂರ್ವಕವಾಗಿ ಹಾರೈಸುತ್ತೇನೆ ಎಂದು ತಿಳಿಸಿದರು.

    ಇಂದಿನ ಈ ವಿಶಿಷ್ಟ ದಿನವು ಅವರಿಗೆ ಶ್ರೇಷ್ಠ ಸ್ಮರಣೆಗಳಾಗಿ ಉಳಿಯಲಿ. ಅವರು ಬೆಳೆಸಿ ಹರಡಿದ ಮೌಲ್ಯಗಳು ಇನ್ನಷ್ಟು ಜನರ ಹೃದಯವನ್ನೂ ಮುಟ್ಟಲಿ. ಹುಟ್ಟುಹಬ್ಬದ ಈ ಸವಿನಯ ಕ್ಷಣದಲ್ಲಿ, ನಮ್ಮ ನಾಯಕರಿಗೆ ಶತಮಾನದಷ್ಟು ಆಯುಷ್ಯ ಸಿಗಲಿ ಎಂಬ ಪ್ರಾರ್ಥನೆಯೊಂದಿಗೆ, ಸಂಘದ ಪರವಾಗಿ ಹೃದಯಪೂರ್ವಕ ಶುಭಾಶಯಗಳನ್ನು ಅರ್ಪಿಸುತ್ತೇವೆ ಎಂದರು.

    ಇದಿಕ್ಕೂ ಮುನ್ನ ತಾಲೂಕಿನ ನಾಡದೇವಿ ಚಿಕ್ಕ ದೇವಮ್ಮನ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಸಂಘದ ಪದಾಧಿಕಾರಿಗಳು ಬಸ್ ನಿಲ್ದಾಣದಿಂದ ಮಹಾವೀರ ಸರ್ಕಲ್ ಬಳಿ ವರೆಗೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

    ಈ ಸಂದರ್ಭದಲ್ಲಿ  ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಹಾಗೂ ರೈತ ಅನ್ನದಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಕೊರಟಗೆರೆ: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಆರಂಭವಾಗುವ ಹಿನ್ನಲೆಯಲ್ಲಿ ಕೊರಟಗೆರೆ ಮತ್ತು ಮಧುಗಿರಿ…

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್

    February 19, 2026

    ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.