nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊದಲ ಬಾರಿಗೆ ರಮೇಶ್ ಜಾರಕಿಹೊಳಿಗೆ ಕಠಿಣ ಶಬ್ದದಿಂದ ತಿರುಗೇಟು: ಚನ್ನರಾಜ ಹಟ್ಟಿಹೊಳಿ
    ರಾಜ್ಯ ಸುದ್ದಿ May 11, 2023

    ಮೊದಲ ಬಾರಿಗೆ ರಮೇಶ್ ಜಾರಕಿಹೊಳಿಗೆ ಕಠಿಣ ಶಬ್ದದಿಂದ ತಿರುಗೇಟು: ಚನ್ನರಾಜ ಹಟ್ಟಿಹೊಳಿ

    By adminMay 11, 2023No Comments2 Mins Read
    chenahatti

    ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಂಗಳವಾರ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ತಮಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಆರೋಪಕ್ಕೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೀವ್ರ ಸಿಡಿಮಿಡಿ ಗೊಂಡಿದ್ದಾರೆ.

    ಬುಧವಾರ ಸಂಜೆ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಅವರ ಗೋಕಾಕ ಕ್ಷೇತ್ರ ಸೇರಿದಂತೆ ಅವರ ಉಸ್ತುವಾರಿಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಗೊತ್ತಾಗಿ ಅವರು ಹತಾಶರಾಗಿದ್ದಾರೆ, ಅವರಿಗೆ ಹುಚ್ಚು ಹಿಡಿದಿದೆ ಎಂದು ಕಿಡಿಕಾರಿದರು.

    ರಮೇಶ ಜಾರಕಿಹೊಳಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ ಮತ್ತು ಗೋಕಾಕದಲ್ಲಿ ಬಿಜೆಪಿ ಸೋಲುತ್ತದೆ ಎಂದು ಹತಾಶರಾಗಿದ್ದಾರೆ ಎಂದರು.

    ರಾತ್ರಿ 12.30ಕ್ಕೆ ಫೋನ್ ಮಾಡಿ ಬ್ಲ್ಯಾಕ್ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ ಅವರ ಮೇಲೆ ಆರೋಪ ಮಾಡಿದ್ದಾರೆ. ಮಾನ ಮರ್ಯಾದೆ ಇದ್ದರೆ ಆರೋಪಕ್ಕೆ ಪೂರಕವಾಗಿ ಅವರು ಫೋನ್ ಕರೆಯ ಸ್ಕ್ರೀನ್ ಶಾಟ್, ಕಾಲ್ ರೆಕಾರ್ಡ್ ರಿಲೀಸ್ ಮಾಡಲಿ. ಯಾವುದೇ ಮೊಬೈಲ್ ಗೆ ಕಾಲ್ ಬಂದಿದ್ದರೂ ಅದರ ದಾಖಲೆ ನೀಡಲಿ. ಇಲ್ಲವಾದಲ್ಲಿ ಬಹಿರಂಗ ಕ್ಷಮೆ ಯಾಚಿಸಲಿ ಎಂದು ಸವಾಲು ಹಾಕಿದರು.

    ಚಾಮುಂಡೇಶ್ವರಿ ದೇವಿ ಆಣೆ ಮಾಡಿ ಸಿಡಿ ಪ್ರಕರಣದಲ್ಲಿದ್ದವನುನಾನಲ್ಲ ಎಂದು ಹೇಳಿ ಕೆಲವು ದಿನಗಳ ನಂತರ ನಾನೇ ಎಂದು ಒಪ್ಪಿಕೊಂಡ ನೀವು ಯಾವ ನೈತಿಕತೆಯಿಂದ ಮಾಧ್ಯಮಗಳ ಮುಂದೆ ಮಾತನಾಡುತ್ತೀರಿ? ಮಾನ ಮರ್ಯಾದೆ ಇದ್ದರೆ ತಕ್ಷಣ ಪೋನ್ ನಂಬರ್ ರಿಲೀಸ್ ಮಾಡಿ, ಇಲ್ಲವೇ ಕ್ಷಮೆ ಕೇಳಿ. ನಾವು ಸಹನೆಯಿಂದ ಆರೋಪ, ಟೀಕೆಗಳಿಗೆ ಇಷ್ಟು ದಿನ ಉತ್ತರ ಕೊಟ್ಟಿರಲಿಲ್ಲ. ನಿಮ್ಮ ಉದ್ದಟತನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದರು.

    ಮಾತನಾಡಲು ನಮ್ಮ ಬಳಿಯೂ ಡಿಕ್ಷ್ನರಿ ಇದೆ. ನಾವು ಕಲಿತವರು, ಸೂಕ್ಷ್ಮತೆಯಿಂದ ಮಾತನಾಡುತ್ತೇವೆ. ಆದರೆ ಇಂತಹ ನಾಲಾಯಕರಿಗೆ ಇನ್ನು ಮುಂದೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡುತ್ತೇವೆ. ಇವರ ಮಂಚದಾಟದಲ್ಲಿ ಕರ್ನಾಟಕ, ಬೆಳಗಾವಿ ಜಿಲ್ಲೆ ಮತ್ತು ಗೋಕಾಕ ಜನತೆಯ ಮರ್ಯಾದೆ ತೆಗೆದಿದ್ದಾರೆ. ಯಾವ ಮರ್ಯಾದೆ ಇಟ್ಟುಕೊಂಡು ಮಾಧ್ಯಮದ ಮುಂದೆ ಬರುತ್ತಾರೆ? ಇವರ ಕಾಮಪುರಾಣ ಎಲ್ಲರೂ ನೋಡಿದ್ದಾರೆ. ಅಂತದ್ದರಲ್ಲಿ ಯಾವ ಮುಖ ಇಟ್ಟುಕೊಂಡು ಬರುತ್ತಾರೆ ಎಂದು ಚನ್ನರಾಜ ಪ್ರಶ್ನಿಸಿದರು.

    ಅವರು ಗೋಕಾಕದಲ್ಲಿ ಸೋಲುತ್ತಾರೆ. ಹಾಗಾಗಿ ಹತಾಶರಾಗಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಬಿಜೆಪಿ ಮತಗಳನ್ನು ಎಂಇಎಸ್ ಗೆ ಹಾಕಿಸಲು ಬಹಳ ಪ್ರಯತ್ನ ಮಾಡಿದ್ದಾರೆ. ಆದರೆ ಜನರು ಒಪ್ಪಲಿಲ್ಲ. ಇವರ ಕುತಂತ್ರವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ನಮ್ಮ ತಾಳ್ಮೆಗೆ ಮಿತಿ ಇದೆ. ಇನ್ನೂ ಅವರು ಉದ್ದಟತನ ಮುಂದುವರಿಸಿದರೆ ಅವರಿಗೆ ಅವರದೇ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದೂ ಎಚ್ಚರಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು…

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.