ನಾಡಿನ ಅರಣ್ಯ ಮತ್ತು ವನ್ಯಜೀವಿಗಳ ಸಂಪತ್ತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹುತಾತ್ಮತರಿಗೆ ಇಂದು ಅರಣ್ಯ ಇಲಾಖೆ ಗೌರವ ನಮನಗಳನ್ನು ಸಲ್ಲಿಸಿತು. ಹಾಗೂ ಉಪಸ್ಥಿತ ಅತಿಥಿಗಳು ಹಾಗೂ ಮುಖ್ಯ ಅತಿಥಿಗಳು ಇಲಾಖೆಯ ಅಧಿಕಾರಿ ವರ್ಗ, ಅರಣ್ಯ ಹುತಾತ್ಮರವರಿಗೆ ಹೂ ಗುಚ್ಚ ಅರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಖಾನಾಪುರ್ ಉಪ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿಗಳು ಹಾಗೂ ಎಸಿಎಫ್ ಬೈಲ್ಹೊಂಗಲ್ ಸಾಮಾಜಿಕ , ವಲಯ ಅಧಿಕಾರಿಗಳು ಖಾನಾಪುರ್ ನಾಗರಾಜ್ ಬಾಳೆಹೊಸೂರ್ ವಲಯ ಅರಣ್ಯ ಅಧಿಕಾರಿ ಲೋಂಡಾ, ನಾಗರಾಜ್ ಭೀಮಗೋಳ ಹಾಗೂ ಅರಣ್ಯ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


