nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ರಾಜಕೀಯ ಜೀವನ ನನಗೆ ಅನುಕರಣೀಯ: ಸಚಿವ ಪರಮೇಶ್ವರ
    ರಾಜ್ಯ ಸುದ್ದಿ December 10, 2024

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ರಾಜಕೀಯ ಜೀವನ ನನಗೆ ಅನುಕರಣೀಯ: ಸಚಿವ ಪರಮೇಶ್ವರ

    By adminDecember 10, 2024No Comments2 Mins Read
    parameshwar

    ಬೆಳಗಾವಿ:  ಸಹನಶೀಲ, ಮೇರು ವ್ಯಕ್ತಿತ್ವದ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಯು ವೈಯಕ್ತಿಕವಾಗಿ ನನಗೆ ನೋವನ್ನುಂಟು ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೇಸರ ವ್ಯಕ್ತಪಡಿಸಿದರು.

    ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ‌ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ತಮ್ಮದೇ ವ್ಯಕ್ತಿತ್ವದ ಮೂಲಕ ರಾಜ್ಯದಲ್ಲಿ ನಮ್ಮೆಲ್ಲರಿಗೂ ಆದರ್ಶವಾಗಿದ್ದರು. ಯುವಕರನ್ನು ಉತ್ತೇಜಿಸುತ್ತಿದ್ದರು. ಅವರ ರಾಜಕೀಯ ಜೀವನ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಹೇಳಿದರು.


    Provided by
    Provided by

    ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಮುಖ ವಿಚಾರಗಳಲ್ಲಿ ಅತ್ಯಂತ ಸಹನೆ, ಸಮಚಿತ್ತತೆಯಿಂದ ಸಚಿವ ಸಂಪುಟದಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದು ಸೂಕ್ತ ತೀರ್ಮಾನಗಳನ್ನು ಮಾಡುತ್ತಿದ್ದದ್ದು ಅವರ ರಾಜಕೀಯ ಜೀವನದ ವಿಶೇಷತೆ. ನಾನು ಅವರ ಜೊತೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತದನಂತರ ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವನಾಗಿ ಕೆಲಸ‌ ಮಾಡಿದ್ದೆ. ಬಹಳ ಹತ್ತಿರದಿಂದ ಅವರನ್ನು ನೋಡಿದ್ದೇನೆ ಎಂದರು.

    ಅವರು ಸುಸಂಸ್ಕೃತಿ, ಸಜ್ಜನ ರಾಜಕಾರಣಿ. ಯಾರನ್ನೆ ಮಾತನಾಡಿಸುವುದರಿಂದ ಹಿಡಿದು, ಜೊತೆಯಲ್ಲಿ ಮಾತನಾಡುವಾಗ, ಚರ್ಚೆ ಮಾಡುವಾಗ, ಸಾರ್ವಜನಿಕವಾಗಿ ಅವರು ಮಾತನಾಡುತ್ತಿದ್ದ ಸಂದರ್ಭಗಳಲ್ಲಿ ಬಳಸುತ್ತಿದ್ದ ಪದಗಳು ಬಹುಶಃ ನಮಗೆ ಯಾರಿಗೆ ಬಳಸಲು ಆಗುವುದಿಲ್ಲ. ಹೀಗೆ ಒಮ್ಮೆ ಅವರೊಂದಿಗೆ ಮಾತನಾಡುವಾಗ, ‘ಪರಮೇಶ್ವರ್ ಭವಿಷ್ಯದ ಗಜಗರ್ಭದಲ್ಲಿ ಏನು ಅಡಗಿದೆ ಅಂತ ಯಾರಿಗೆ ಗೊತ್ತಿದೆ ಹೇಳಿ’ ಎಂದಿದ್ದರು. ನಾವಾಗಿದ್ದರೆ ಮುಂದೆನಾಗುತ್ತದೆ ನೋಡೋಣ ಬಿಡಿ ಎನ್ನುತ್ತಿದ್ದೆವು. ಅವರು‌ ಮಾತನಾಡುತ್ತಿದ್ದ ಶೈಲಿ, ಪದಪ್ರಯೋಗ ಕರ್ನಾಟಕದ ಯಾವ ರಾಜಕಾರಣಿಯಲ್ಲಿಯೂ ನೋಡಲು ನನಗೆ ಸಾಧ್ಯವಾಗಿಲ್ಲ ಎಂದು ಸಚಿವರು ಹೇಳಿದರು.

    ನಾನು ಅವರೊಂದಿಗೆ ಯುವಕನಾಗಿ ಕೆಲಸ ಮಾಡಿ, ಅನೇಕ ವಿಚಾರಗಳನ್ನು ಕಲಿತಿದ್ದೇನೆ. ಅವರಿಗೆ ರಾಜಕೀಯದಲ್ಲಿ ಎಲ್ಲವೂ ಸುಲಭವಾಗಿ ಸಿಕ್ಕಿತು ಅಂತ ಹೇಳಲಾಗುವುದಿಲ್ಲ. ನಟ ಡಾ.‌ ರಾಜಕುಮಾರ್ ಅವರ ಅಪಹರಣ, ಕಾವೇರಿ ನೀರಿನ ಗಲಾಟೆಯ ಸಂದರ್ಭ, ಬರಗಾಲವನ್ನು ಎದುರಿಸಿ, ರಾಜ್ಯಕ್ಕೆ ಉತ್ತಮ ಸೇವೆಯನ್ನು ಮಾಡಿದ್ದಾರೆ. ಐಟಿ ವಲಯದಲ್ಲಿ ಬೆಂಗಳೂರು ನಗರವನ್ನು ವಿಶ್ವ ಮಟ್ಟದಲ್ಲಿ ಪರಿಚಯಿಸಿದರು. ಇದರಿಂದ ಲಕ್ಷಾಂತರ ಯುವಕರು ಉದ್ಯೋಗ ಪಡೆದು ಬದುಕು ಕಟ್ಟಿಕೊಂಡಿದ್ದಾರೆ. ಇದೆಲ್ಲವು ಅವರ ದೂರದೃಷ್ಟಿ ರಾಜಕೀಯ ನಡೆಯಿಂದ ಸಾಧ್ಯವಾಗಿದೆ ಎಂದು ಹೇಳಿದರು.

    ರಾಜ್ಯಕ್ಕೆ ಸಂಬಂಧಿಸಿದ ಅನೇಕ ರಹಸ್ಯವಾದ ವಿಚಾರಗಳನ್ನು ನನ್ನೊಂದಿಗೆ ಹಂಚಿಕೊಳ್ಳುತ್ತಿದ್ದರು. ನಟ ರಾಜಕುಮಾರ್ ಅವರ ಅಪಹರಣದ ಸಂದರ್ಭದಲ್ಲಿ ವೀರಪ್ಪನ್‌ಗೆ ಸಂಬಂಧಿಸಿದ ವಿಚಾರಗಳು, ದೆಹಲಿಯಲ್ಲಿ ಎಐಸಿಸಿ ವರಿಷ್ಟರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು ಸೇರಿದಂತೆ ಅವರೊಂದಿಗೆ ಜವಾಬ್ದಾರಿಯುತವಾಗಿ‌ ಕೆಲಸ ಮಾಡಿದ್ದೇನೆ. ಅವರ ರಾಜಕೀಯ ಜೀವನ ನನಗೆ ಅನುಕರಣೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಇತ್ತೀಚಿನ ದಿನಗಳಲ್ಲಿ ರಾಜಕೀಯದಲ್ಲಿ ಕೆಟ್ಟದಾಗಿ ಟೀಕೆ-ಟಿಪ್ಪಣಿಗಳನ್ನು‌ ಮಾಡುವುದನ್ನು ಕಾಣುತ್ತಿದ್ದೇವೆ. ಆದರೆ, ಎಸ್.ಎಂ.ಕೃಷ್ಣ ಅವರು ಕೆಟ್ಟಭಾಷೆಯ ಪದಪ್ರಯೋಗ ಮಾಡಿದ್ದನ್ನು ಎಲ್ಲಿಯೂ ನೋಡಲೇ ಇಲ್ಲ. ವಿಶೇಷವಾಗಿ ಯುವಕರಿಗೆ ಮಾದರಿಯಾಗಿ ನಿಲ್ಲುತ್ತಾರೆ. ದೇಶವು ಮೇದಾವಿ, ರಾಜನೀತಿಜ್ಞ, ಹಿರಿಯ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿದೆ. ವೈಯಕ್ತಿಕವಾಗಿ ನನಗೆ ನೋವಾಗಿದೆ. ಸಾರ್ವಜನಿಕ ಬದುಕಿಗೆ ನಷ್ಟವಾಗಿದೆ. ಅವರಿಗೆ ಯಾವ ರೀತಿಯ ಅಂತಿಮ ಗೌರವ ಸಲ್ಲಿಸಿದರು ಸಾಲುವುದಿಲ್ಲ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.