nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಜಯಪುರ ಇಟ್ಟಿಗೆ ಭಟ್ಟಿ ಕಾರ್ಮಿಕರಿಗೆ ಹಲ್ಲೆ ಪ್ರಕರಣ: ಮಾಜಿ ಸಚಿವ ಹೆಚ್.ಆಂಜನೇಯ ಆಸ್ಪತ್ರೆಗೆ ಭೇಟಿ
    ರಾಜ್ಯ ಸುದ್ದಿ January 25, 2025

    ವಿಜಯಪುರ ಇಟ್ಟಿಗೆ ಭಟ್ಟಿ ಕಾರ್ಮಿಕರಿಗೆ ಹಲ್ಲೆ ಪ್ರಕರಣ: ಮಾಜಿ ಸಚಿವ ಹೆಚ್.ಆಂಜನೇಯ ಆಸ್ಪತ್ರೆಗೆ ಭೇಟಿ

    By adminJanuary 25, 2025No Comments2 Mins Read
    anjaneya

    ವಿಜಯಪುರ: ನಗರದ ಹೊರವಲಯದಲ್ಲಿರುವ ಇಟ್ಟಿಗೆ ಭಟ್ಟಿಯ ಮಾಲೀಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೋಷಿತ ಸಮುದಾಯದ ಕೂಲಿ ಕಾರ್ಮಿಕರನ್ನು ಮಾಜಿ ಸಚಿವ, ಶೋಷಿತರ ಗಟ್ಟಿ ಧ್ವನಿ ಹೆಚ್.ಆಂಜನೇಯ ಅವರು ಇಂದು ಭೇಟಿಯಾಗಿ, ವೈಯಕ್ತಿಕ ಧನಸಹಾಯ ಮಾಡಿ, ಸಾಂತ್ವನ ಹೇಳಿದರು.

    ಇತ್ತೀಚೆಗೆ ನಡೆದ ಈ ಅಮಾನವೀಯ ಘಟನೆಯ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು, ಈ ಘಟನೆಯಿಂದ ಇಡೀ ಮನುಕುಲವೇ ಬೆಚ್ಚಿಬೀಳುವ ಜೊತೆಗೆ ಮಮ್ಮಲ ಮರುಗಿ ಹಲ್ಲೆ ನಡೆಸಿದವರ ಮೇಲೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.


    Provided by
    Provided by

    ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ ಮಾದರ ಎಂಬ ಕಾರ್ಮಿಕರು ಹಬ್ಬಕ್ಕೆ ಊರಿಗೆ ಹೋದವರು ತಡವಾಗಿ ಬಂದರು ಎಂಬ ಕಾರಣಕ್ಕೆ ಇಟ್ಟಿಗೆ ಭಟ್ಟಿಯ ಮಾಲೀಕ ಮತ್ತು ಅವನ ಮಗ ಹಾಗೂ ಸಹಚರರು ಈ ಮೂವರು ಕೂಲಿಕಾರ್ಮಿಕರ ಪಾದ ಮತ್ತು ಕೈಗಳಿಗೆ ಪೈಪುಗಳಿಂದ ಮನಸೋ ಇಚ್ಛೆ ಥಳಿಸಿ, ಕಣ್ಣಿಗೆ ಖಾರದಪುಡಿ ಎರಚಿದ್ದರು.

    ಮೂರು ದಿನಗಳಿಂದ ನಿರಂತರವಾಗಿ ಹಲ್ಲೆಗೊಳಗಾಗಿ ತೀವ್ರ ಅಸ್ವಸ್ಥರಾಗಿದ್ದ ಕೂಲಿ ಕಾರ್ಮಿಕರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡುತ್ತಿರುವ ಸುದ್ಧಿ ತಿಳಿದ ಮಾಜಿ ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರು ತಕ್ಷಣವೇ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ಸಹಾಯ ವ್ಯವಸ್ಥೆ ಮಾಡಿ ಇಂದು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಕಾರ್ಮಿಕರ ಆರೋಗ್ಯ ವಿಚಾರಿಸಿ, ವೈದ್ಯರಿಂದ ಮಾಹಿತಿ ಪಡೆದು, ವೈಯಕ್ತಿಕವಾಗಿ ಧನಸಹಾಯ ಮಾಡುವ ಜೊತೆಗೆ ಧೈರ್ಯವಾಗಿರುವಂತೆ ತಿಳಿಸಿದರು.

    ಆಂಜನೇಯ ಅವರು ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರೆ ಮಾಡಿ ಸಂತ್ರಸ್ತರೊಂದಿಗೆ ನೇರವಾಗಿ ಮಾತನಾಡಿಸುವ ಮೂಲಕ ಈ ವಿಲಕ್ಷಣ ಮತ್ತು ಅನಾಗರಿಕ ಘಟನೆಯ ವಸ್ತು ಸ್ಥಿತಿಯನ್ನು ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಟ್ಟು ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಿದರು.

    BLDE ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ , ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಆಪ್ತ ಕಾರ್ಯದರ್ಶಿ — ಡಾ.ಮಹಾಂತೇಶ್ ಬಿರಾದಾರ್, ಕಾಂಗ್ರೆಸ್ ಮುಖಂಡರಾದ — ಅಬ್ದುಲ್ ಹಮೀದ್ ಮುಶರಫ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ — ಮಲ್ಲಿಕಾರ್ಜುನ ಲೋಣಿ, ಉಪಾಧ್ಯಕ್ಷರಾದ — ಗಂಗಾಧರ್ ಶಾಂಬನ್ನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ- – ಸುಭಾಶ ಕಾಲೇಬಾಗ್, ಕಾಂಗ್ರೆಸ್ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ — ರಮೇಶ್ ಗುಬ್ಬೇವಾಡ, ಡಿ.ಎಸ್.ಎಸ್. ಮುಖಂಡರಾದ — ಶಾಸ್ತ್ರಿ ಹೊಸಮನಿ, ಮಾದಿಗ ಸಮುದಾಯದ ಜಿಲ್ಲಾ ಮುಖಂಡರಾದ — ಪರಶುರಾಮ ರೊಣಿಹಾಳ, ಕೃಷ್ಣಾ ರತ್ನಾಕರ, ಎಸ್ಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಆದ ಸಾಯಿಕುಮಾರ್ ಬಿಸ್ನಾಳ, ಡಿ.ಎಸ್.ಎಸ್ ಜಿಲ್ಲಾ ಮುಖಂಡರಾದ ವೈ.ಸಿ.ಮಯೂರ, ಐಯಪ್ಪ ದೊಡಮನಿ ಮತ್ತು ಸ್ಥಳೀಯ ಡಿವೈಎಸ್ಪಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಮುಖಂಡರು, ಸಾರ್ವಜನಿಕರು, ಅಭಿಮಾನಿಗಳು ಸೇರಿದಂತೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ದಲಿತ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ…

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.