nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇರಳ ಶೈಲಿಯ ಶ್ರೀ ಮಹಾಲಕ್ಷ್ಮೀಮದ್ಧರಲಕ್ಕಮ್ಮ ದೇವಾಲಯಕ್ಕೆ ಶಂಕುಸ್ಥಾಪನೆ
    ಚಿಕ್ಕನಾಯಕನಹಳ್ಳಿ February 1, 2025

    ಕೇರಳ ಶೈಲಿಯ ಶ್ರೀ ಮಹಾಲಕ್ಷ್ಮೀಮದ್ಧರಲಕ್ಕಮ್ಮ ದೇವಾಲಯಕ್ಕೆ ಶಂಕುಸ್ಥಾಪನೆ

    By adminFebruary 1, 2025No Comments2 Mins Read
    chikkanayakanahalli

    ಚಿಕ್ಕನಾಯನಹಳ್ಳಿ: ಐದುನೂರು ವರ್ಷಗಳ ಹಿಂದೆ ನಮ್ಮ ಪೂರ್ವಿಕರು ನಮ್ಮ ದೇಶ ಹಾಗೂ ಧರ್ಮವನ್ನ ಕಾಪಾಡಿಕೊಂಡು ಬಂದಿದ್ದಾರೆ.  ಈ ನಿಟ್ಟಿನಲ್ಲಿ ನಾವುಗಳು ಕೂಡ ಅವರ ಮಾರ್ಗದರ್ಶನದ ಸಂಸ್ಕಾರ ಸಂಸ್ಕೃತಿಯಲ್ಲೇ  ನಡೆಯಬೇಕು ಎಂದು ವಿಜಯನಗರ ಮಹಾ ಸಂಸ್ಥಾನ ಅರಸರಾದ 19ನೇ  ಶ್ರೀಕೃಷ್ಣದೇವರಾಯರು ಹೇಳಿದರು.

    ಪಟ್ಟಣದಲ್ಲಿ ನೂತನವಾಗಿ ಕೇರಳ ಶೈಲಿಯಲ್ಲಿ ಶ್ರೀ ಮಹಾಲಕ್ಷ್ಮೀ ಮದ್ಧರಲಕ್ಕಮ್ಮ ದೇವಾಲಯದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.


    Provided by
    Provided by

    ಪ್ರಸ್ತುತ ಜನರು ಪಾಶ್ಚಿಮಾತ್ಯ ರಾಷ್ಟ್ರಗಳ ಇಂಗ್ಲೀಷ್ ಭಾಷೆಗೆ ಮಾರುಹೊಗುವುದಲ್ಲದೆ,  ದೇಶದಲ್ಲಿ ಅವಿಭಕ್ತ ಕುಟುಂಬಗಳ ವರ್ಜನೆಯಾಗುತ್ತಿರುವುದು ವಿಷಾದ ಸಂಗತಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ನಾವು ಅಮೆರಿಕಾದಲ್ಲಿ ಇದ್ದು, ವಾಸಿಸಿ ಬಂದಿದ್ದಾದರು ನಮ್ಮ ದೇಶದ ಧರ್ಮ ಸಂಸ್ಕತಿ ಬೇರೆ ಯಾವ ರಾಷ್ಟ್ರದಲ್ಲೂ ಸಿಗುವುದಿಲ್ಲ. ನಮ್ಮ ರಾಜ ಮನೆತನದ ಕುಟುಂಬ ಆಗಿರ ಬಹುದು ಅಥವಾ ಜನ ಸಾಮಾನ್ಯರ ಕುಟುಂಬಗಳಾಗಿರ ಬಹುದು ಎಲ್ಲಾ ಅವಿಭಕ್ತ ಕುಟುಂಬದಲ್ಲಿ ಬದುಕಿ ಬಾಳುತ್ತಿದ್ದರು. ರಾಜನಾಗಲಿ ಸಾಮಾನ್ಯ ಪ್ರಜೆಯಾಗಲಿ ಗುರುವಿನ ಅನುಗ್ರಹ ಲಭಿಸಬೇಕು, ಈ ಅನುಭವವನ್ನ ಸ್ವತಃ ತಾವೇ ಪಡೆಕೊಂಡಿರುವುದಾಗಿ ತಿಳಿಸಿದರು.

    ವಿಜಯನಗರ ಸಾಮ್ರಾಜ್ಯದಲ್ಲಿ ದೇವಾಲಯಗಳಿಗೆ ಮಹತ್ವವನ್ನ ನೀಡಲಾಗಿತ್ತು. ನಾವು ಕೂಡ ಪಂಪ ವಿರೂಪಾಕ್ಷನನ್ನ ಭಕ್ತಿಯಿಂದ ಪೂಜಿಸುತ್ತೇವೆ. ದೇವರಲ್ಲಿ ನಮಗೆ ಅಪಾರವಾದ ನಂಬಿಕೆ ಇದೆ. ಪಟ್ಟಣದ ಮದ್ಧರಲಕ್ಕಮ್ಮ ದೇವಾಲಯದ ನಿರ್ಮಾಣಕ್ಕೆ ನಮ್ಮ ಹಸ್ತದಿಂದ ಶಂಕುಸ್ಥಾಪನೆ ಕಾರ್ಯ ನೆರವೇರಿದ್ದು, ನಮಗೆ ಸಂತೋಷ ತಂದಿದ್ದು, ದೇವಾಲಯ ಶೀಘ್ರವಾಗಿ ಪೂರ್ಣಗೊಂಡು ಲೋಕಾರ್ಪಣೆಯಾಗಿ ಪ್ರಬುದ್ಧಮಾನಕ್ಕೆ ಬರಲಿ ಎಂದು ಆಶಯದ ನುಡಿಗಳನ್ನಾಡಿದರು.

    ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಪಟ್ಟಣದಲ್ಲಿ ಧರ್ಮಾನುಸಾರˌ ಸಮುದಾಯಾನುಸಾರ ಹಾಗೂ ಪ್ರತ್ಯೇಕ ಕುಟುಂಬಗಳ ಆರಾದ್ಯ ದೇವರುಗಳ ಅನೇಕ ದೇವಾಲಯಗಳು ಸ್ಥಾಪಿತವಾಗಿದೆ. ನಾನು ಕೂಡ ಮನೆಯಿಂದ ಆಚೆ ಹೊರಡುವ ಮುನ್ನ ದೇವರ ಪೂಜೆಯನ್ನ ನೆರವೇರಿಸಿ ಮುಂದಿನ ಕೆಲಸಗಳಿಗೆ ತೊಡಗುತ್ತೇನೆ. ಮನುಷ್ಯನಿಗೆ ಶಾಂತಿ ನೆಮ್ಮದಿ ಕಾಣಲು ಭಕ್ತರು ಇಷ್ಟಾರ್ಥ ಸಿದ್ದಿಪಡೆಯಲು ವಿವಿಧ ದೇವರನ್ನ ಬೇಡುತ್ತಾರೆ. ನಂಬಿದ ಭಕ್ತರನ್ನ ದೇವರು ಎಂದಿಗೂ ಕೈಬಿಡುವುದಿಲ್ಲ. ಮನಸ್ಸು ಶುದ್ಧವಾಗಿಟ್ಟುಕೊಂಡು ಇರುವಲ್ಲೆ ಭಗವಂತನ ಸಾಕ್ಷಾತ್ಕಾರ ಪಡಿಸಿಕೊಳ್ಳಲು ಗುರುವಿನ ಮಾರ್ಗದರ್ಶನ ಅವಶ್ಯಕವಾಗಿದೆ ಎಂದ ಅವರು, ಮದ್ದರ ಲಕ್ಕಮ್ಮ ದೇವಾಲಯಕ್ಕೆ ಸ್ವಂತಿಕೆಯಿಂದ ಒಂದು ಲಕ್ಷ ಕಾಣಿಕೆಯಾಗಿ ಹಾಗೂ ಸರ್ಕಾರದಿಂದ ಅನುದಾನ ನೀಡಲು ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

    ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹಾಗೂ  ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ,  ವಿಜಯನಗರ ಸಾಮ್ರಾಜ್ಯದ ಕಾಲಾಘಟ್ಟದಲ್ಲಿ ಪಾಳೇಗಾರರ ಆಳ್ವಿಕೆ ಕಾಲದಲ್ಲಿ ಮದ್ಧರಲಕ್ಕಮ್ಮ ದೇವಿಯ ಪ್ರತಿಷ್ಟಾಪನೆಯಾಗಿತ್ತು ಎನ್ನುವ ಇತಿಹಾಸ ನಮ್ಮ ವಂಶದ ಪೂರ್ವಿಕರಿಂದ ತಿಳಿದು ಬರುತ್ತದೆ. ನಮ್ಮ ವಂಶದವರೇ ದೇವಾಲಯದಲ್ಲಿ ಪೂಜೆಗಳನ್ನ ನಡೆಸುತ್ತಾ ಬಂದಿದ್ದರು. ಅವರ ಮಾರ್ಗದರ್ಶನದಲ್ಲೇ ನಾವುಗಳು ಕೂಡ ದೇವರನ್ನ ಪೂಜಿಸಿಕೊಂಡು ಬಂದಿದ್ದೇವೆ. ದೇವಿಯ ಮಹಿಮೆಯಿಂದ  ನಂಬಿದ ಅನೇಕ ಭಕ್ತರಿಗೆ ಒಳಿತಾಗಿದೆ. ದೇವಾಲಯ ನಿರ್ಮಾಣಕ್ಕೆ ಸ್ಥಳ ಚಿಕ್ಕದ್ದಾಗಿರುವುದರಿದ ನಮ್ಮ ಮನೆಯ ಜಾಗವನ್ನ ದೇವಾಯಕ್ಕೆ ಬಿಟ್ಟು ಕೊಡಲಾಗಿದೆ. ಅಲ್ಲದೆ ಬುಡ್ಡಯ್ಯರ ನಾಗರಾಜು ಕುಟುಂಬ ಜಾಗವನ್ನ ನೀಡಿ ದೇವಾಲಯದ ನಿರ್ಮಾಣಕ್ಕೆ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ  ಶಾಸಕರು ಸೇರಿದಂತೆ ಅನೇಕ ದಾನಿಗಳು ತನುಮನ ಧನವನ್ನ ಅರ್ಪಿಸಿದ್ದಾರೆ. ದೇವಾಲಯವು ಕೇರಳ ಶೈಲಿಯಲ್ಲಿ ನಿರ್ಮಾಣವಾಗಲಿದೆ ಎಂದರು.

    ಗೊಡೇಕೆರೆ ಚರಪಟ್ಟಾಧ್ಯಕ್ಷರಾದ ಮೃತ್ಯುಂಜಯ ಪರದೇಶೀಕೇಂದ್ರ ಸ್ವಾಮೀಜಿˌ ಮಾದಿಹಳ್ಳಿ ಶ್ರೀಶೈಲ ಗಿರಿರಾಜ ಶಾಖಾಮಠದ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿˌ ಶ್ರವಣ ಬೆಳಗೊಳದ ಶಕ್ತಿಮಠದ ಬಸವ ಚೈತನ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ದೇವಾಲಯದ ಧರ್ಮದರ್ಶಿ ಸಿ.ಎನ್.ರಂಗಸ್ವಾಮಿˌಮುಖ್ಯ ಆಢಳಿತಾಧಿಕಾರಿ ಸಿ.ಎರ್.ಲಕ್ಷ್ಮೀಶ್ˌ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಹೆಚ್.ಆರ್.ವೆಂಕಟೇಶ್ˌ ಕಾರ್ಯಾಧ್ಯಕ್ಷ  ಜ್ಞಾನ ನಿಧಿ ಗೋವಿಂದರಾಜುˌ ಕಾರ್ಯದರ್ಶಿ ರಂಗರಾಜು ಅರಸ್ˌ ಕನ್ನಡ ಸಂಘದ ಅಧ್ಯಕ್ಷ ಸಿ.ಬಿ.ರೇಣುಕಸ್ವಾಮಿˌ ಪುರಸಭಾ ಮಾಜಿ ಅಧ್ಯಕ್ಷ ದೊರೆಮುದ್ದಯ್ಯ, ವಕೀಲ ಸುನಿಲ್ˌ ಮಡಿವಾಳ ಸಂಘದ ನಾಗರಾಜು ಸೇರಿದಂತೆ ಮುಂತಾದವರಿದ್ದರು.  ಹಾಲುಮತ ಕುಲ ಕಸುಬಿನ ಕಂಬಳಿಯನ್ನ  ಶ್ರೀಕೃಷ್ಣದೇವರಾಯರಿಗೆ ಹೊದಿಸಿ ಗೌರವಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    1 ಗಂಟೆಗೆ ಸೀಮಿತವಾದ ಹುಳಿಯಾರು ಪ.ಪಂ. ಸಾಮಾನ್ಯ ಸಭೆ: ವಿಷಯ ಚರ್ಚೆ ನಡೆಯದೆ ಪಾಸ್

    April 4, 2026

    ಪಿಗ್ಮಿ ಹಣ ಗುಳುಂ: ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಕಿವಿಯಾದ ಶಾಸಕ ಸುರೇಶ್‌ ಬಾಬು

    April 4, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.