ಚಿತ್ರದುರ್ಗ ಸೆಪ್ಟೆಂಬರ್ 3: ಪ್ರೌಢಶಾಲೆಯ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಇಂದು ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಠದ ಪರ ವಕೀಲ ಉಮೇಶ್, ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾಶ್ರೀಗಳಿಗೆ ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು.
ಪೋಕ್ಸೋ ಕಾಯ್ದೆ ಪ್ರಕರಣದಡಿ ಗುರುವಾರ ರಾತ್ರಿ ಮುರುಘಾಶರಣರನ್ನು ಬಂಧಿಸಿದ್ದ ಪೊಲೀಸರು ತಡರಾತ್ರಿ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಜಡ್ಜ್ ಆದೇಶಿಸಿದ್ದರು. ನಂತರ ಶುಕ್ರವಾರ ಎದೆ ನೋವು ಎಂದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ ರಾತ್ರಿ 8-9 ಸಮಯದಲ್ಲಿ ಹೆಚ್ಚಿನ ವಿಚಾರಣೆಗಾಗಿ ಡಿವೈಎಸ್ಪಿ ಕಛೇರಿಯಲ್ಲಿ ಕರೆದೊಯ್ದು ತನಿಖೆ ನಡೆಯುತ್ತಿದೆ.
ಮುರುಘಾ ಸ್ವಾಮಿಜಿಗೆ ಜೈಲುವಾಸಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರನ್ನು ಗುರುವಾರ ರಾತ್ರಿ ಬಂಧಿಸಲಾಯಿತು. ಗುರುವಾರ ರಾತ್ರಿ 8 ಗಂಟೆಗೆ ಡಿವೈಎಸ್ಪಿ ಕಚೇರಿಗೆ ಪೊಲೀಸರು ಕರೆತಂದಿದ್ದರು. ಬಂಧನದ ದಿನ ಇಡೀ ರಾತ್ರಿ ಡಿವೈಎಸ್ಪಿ ಕಛೇರಿಯಲ್ಲಿ ಸರಿಯಾದ ನಿದ್ದೆ ಇಲ್ಲದೆ ಶ್ರೀಗಳು ಕಳೆದಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy