ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್ ಆರ್ ಫಂಡ್ ಬ್ಲಾಕ್ ಮನಿಯನ್ನು ಖಾಸಗಿ ಟ್ರಸ್ಟ್ ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ.
ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್ ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್ ಖಾಸಗಿ ಕಂಪನಿಗಳ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್ ಆರ್ ಫಂಡ್) ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್ ಗಳಿಗೆ ನೀಡುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡುತ್ತಿದ್ದು, ಈಗ ಮಾಲ್ ಸಮೇತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದೆ. ಖಾಸಗಿ ಟ್ರಸ್ಟ್ ಗಳಿಗೆ CSR ಫಂಡ್ ನೀಡೋ ಹೆಸರಲ್ಲಿ ವಂಚಿಸ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಗಳಿಂದ 30 ಕೋಟಿ 91 ಲಕ್ಷ 61 ಸಾವಿರಕ್ಕೂ (31,91,61,000 ರೂ.) ಅಧಿಕ ಮೌಲ್ಯದ ಖೋಟಾ ನೋಟು ವಶಕ್ಕೆ ಪಡೆದಿದ್ದಾರೆ. ಇನ್ನು ಐವರು ಬಂಧಿತರು ಈ ಹಿಂದೆಯೂ ಇಂತಹದೇ ಸಮಾಜ ಬಾಹಿರ ಕುಕೃತ್ಯಗಳಾದ ಗ್ಯಾಂಬ್ಲಿಂಗ್, ಹವಾಲಾ, ರೈಸ್ ಪುಲ್ಲಿಂಗ್ ಪ್ರಕರಣಗಳಲ್ಲಿ ಪಾಲ್ಗೊಂಡು ಜೈಲು ಪಾಲಾಗಿದ್ದರು. ಇನ್ನು ಜೈಲಿನಿಂದ ಹೊರಬಂದ ಗ್ಯಾಂಗ ಪುನಃ ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಟ್ರಸ್ಟ್ ಗಳಿಗೆ ವಂಚಿಸಲು ಗ್ಯಾಂಗ್ ಕಟ್ಟಿಕೊಂಡಿದ್ದರು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296