ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಿಪಟೂರು ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಾಯಿ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.
ಶಿಬಿರಕ್ಕೆ ಚಾಲನೆ ನೀಡಿದ ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಮಧುಸೂಧನ್, ಗರ್ಭಿಣಿಯರು ತಮ್ಮ ಆರೋಗ್ಯ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕು, ಹಸಿರು ತರಕಾರಿ ಮೊಟ್ಟೆ ಮಾಂಸ ಸೇರಿದಂತೆ ಪೌಷ್ಟಿಕ ಆಹಾರ ಹೆಚ್ಚು ಸೇವನೆ ಮಾಡಿದರೆ, ತಾಯಿಯ ಹೊಟ್ಟೆಯಲ್ಲಿ ಆರೋಗ್ಯ ಪೂರ್ಣ ಬ್ರೂಣ ಬೆಳವಣಿಗೆ ಹೊಂದುತ್ತದೆ. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ. ಆರೋಗ್ಯಪೂರ್ಣ ಮಗುವಿನ ಜನನವಾಗುತ್ತದೆ. ನವಜಾತ ಶಿಶು ಆರೋಗ್ಯವಾಗಿರಲು ತಾಯಿ ಮಾನಸಿಕ ಸ್ಥಿತಿ ಹೊಂದಿರಬೇಕು ಹಾಗೂ ಕೆಲವರು ಮೂಢನಂಬಿಕೆಯಿಂದ ಬಾಣಂತಿಯರು ಪಥ್ಯಾಹಾರಗಳನ್ನ ಸೇವನೆ ಮಾಡುವುದರಿಂದ ಮಗುವಿಗೆ ಪೌಷ್ಠಿಕಾಂಶದ ಕೊರತೆ ಉಂಟಾಗಿ ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆದರಿಂದ ಹಣ್ಣು ತರಕಾರಿ, ಮೊಟ್ಟೆ ಸೇರಿಂತೆ ಬಾಣಂತಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಸೂತಿ ತಜ್ಞರಾದ ಡಾ.ಕಾರ್ತಿಕ್ ಮಾತನಾಡಿ, ನವಜಾತ ಶಿಶುಗಳಿಗೆ ತಾಯಿಯ ಹಾಲು ಅಮೃತಕ್ಕೆ ಸಮಾನವಾಗಿದ್ದು, ಮಕ್ಕಳಲ್ಲಿ ನವಜಾತಶಿಶುಗಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ, ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆಗೆ ಸಹಕಾರಿಯಾಗಿದೆ, ಆದರೆ ಕೆಲವರು ಮೂಢನಂಬಿಕೆಯಿಂದ ಹುಟ್ಟಿದ ಮಗುವಿಗೆ ತಾಯಿ ಹಾಲು ನೀಡದೆ, ಹಾಲನ್ನ ಚೆಲ್ಲುವ ಕೆಲಸ ಮಾಡುತ್ತಾರೆ. ಪಥ್ಯಾಹಾರದ ಹೆಸರಿನಲ್ಲಿ ಪೌಷ್ಠಿಕ ಆಹಾರಗಳು ತಾಯಿಗೆ ದೊರೆಯದಂತೆ ಮಾಡುತ್ತಿದ್ದಾರೆ. ತಾಯಿ ಆರೋಗ್ಯವಿದ್ದರೆ ಮಾತ್ರ ಮಗು ಆರೋಗ್ಯವಾಗಿ ಇರುತ್ತದೆ, ಪೌಷ್ಠಿಕಾಂಶ ಉಳ್ಳ ಹಣ್ಣು, ತರಕಾರಿ ಮೊಟ್ಟೆ ನೀಡಿ, ತಾಯಿ ಮಕ್ಕಳ ಆರೈಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಯುರ್ವೇದಿಕ ವೈದ್ಯರಾದ ಡಾ.ಕೃತಿಕ ಮಾತನಾಡಿ, ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ದೊರೆಯುವ ವೈದ್ಯಕೀಯ ಸೇವೆಗಳಲ್ಲಿ ನವಜಾತ ಶಿಶು ಆರೈಕೆ ಹಾಗೂ ಐಸಿಯು ಸೌಲಭ್ಯಹೊಂದಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಹೈಟೆಕ್ ವೈದ್ಯಕೀಯ ಸೇವೆ ನೀಡುತ್ತಿದೆ, ಅಲ್ಲದೆ ತಾಯಿ ಹಾಗೂ ಮಕ್ಕಳ ಆರೈಕೆಗಾಗಿ ಆಯುರ್ವೇದ ಆಸ್ಪತ್ರೆ ಸೌಲಭ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೊನ್ನವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ.ಪವನ್ ಕುಮಾರ್ ಮುಂತಾದವರು ಉಪಸ್ಥಿತರಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW