ತುಮಕೂರು: ಗುಬ್ಬಿ ತಾಲ್ಲೂಕು ತೋಟಗಾರಿಕೆ ಇಲಾಖೆ ವತಿಯಿಂದ ತೆಂಗು ಬೆಳೆಯನ್ನು ಉತ್ತೇಜಿಸುವ ಸಲುವಾಗಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಉಚಿತ ತೆಂಗಿನ ಸಸಿಗಳನ್ನು ನೀಡಲು ಉದ್ದೇಶಿಸಿದ್ದು, ಪ್ರತಿ ಫಲಾನುಭವಿಗೆ ಗರಿಷ್ಠ 1 ಹೆಕ್ಟೇರ್ ವರೆಗೆ 123 ತೆಂಗಿನ ಸಸಿಗಳನ್ನು ನೀಡಲಾಗುವುದು ಎಂದು ಗುಬ್ಬಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ ಬೆಳೆ ಹೊರತುಪಡಿಸಿ ಉಳಿದೆಲ್ಲಾ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗಾಗಿ ಈಗಾಗಲೇ ಎಲ್ಲಾ ಪಂಚಾಯತಿ/ ವಾರ್ಡ್ ಗಳಲ್ಲಿ ಗ್ರಾಮ/ ವಾರ್ಡ್ ಸಭೆಗಳನ್ನು ಆಯೋಜಿಸಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗುತ್ತಿದೆ.
ಆಸಕ್ತ ರೈತರು ಸೂಕ್ತ ದಾಖಲೆಗಳನ್ನು ತೋಟಗಾರಿಕಾ ಇಲಾಖೆಗೆ ಸಲ್ಲಿಸುವ ಮೂಲಕ ತಮ್ಮ ತೋಟಗಾರಿಕೆ ಬೆಳೆಗಳ ಪ್ರದೇಶವನ್ನು ವಿಸ್ತರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q