ತುಮಕೂರು: ವಯೋಸಹಜ ಸಮಸ್ಯೆಗಳು, ಅಪಘಾತಗಳು ಹಾಗೂ ವಿವಿಧ ಆರೋಗ್ಯ ಕಾರಣಗಳಿಂದ ಶ್ರವಣ ಸಾಮರ್ಥ್ಯ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ನೆರವಾಗುವ ಉದ್ದೇಶದಿಂದ ತುಮಕೂರಿನಲ್ಲಿ ಜೂನ್ 27ರಂದು ಉಚಿತ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಗಳ ಸಹಾಯಧನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ತುಮಕೂರು ಜಿಲ್ಲಾ ಘಟಕ, ರೋಟರಿ ತುಮಕೂರು ಪ್ರೇರಣ ಹಾಗೂ ಇನ್ನರ್ ವೀಲ್ ಕ್ಲಬ್ ತುಮಕೂರು ಸಂಯುಕ್ತ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದ್ದು, ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬಾಳನಕಟ್ಟೆ ರಸ್ತೆಯಲ್ಲಿರುವ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸಲಾಗುತ್ತದೆ.
ಶ್ರವಣ ಸಮಸ್ಯೆ ನಿರ್ಲಕ್ಷಿಸಿದರೆ ಅಪಾಯ:
ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಜೀವನಮಟ್ಟವನ್ನು ಸುಧಾರಿಸಬಹುದು. ವಯೋವೃದ್ಧರು ಮಾತ್ರವಲ್ಲದೆ ಯುವಕರು ಹಾಗೂ ಮಕ್ಕಳು ಕೂಡ ಶ್ರವಣ ಸಮಸ್ಯೆಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಶೇ.40ರಷ್ಟು ಸಹಾಯಧನ:
ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶ್ರವಣ ಯಂತ್ರ (ಹಿಯರಿಂಗ್ ಮೆಷಿನ್) ಖರೀದಿಗೆ ಒಟ್ಟು ವೆಚ್ಚದ ಶೇ.40ರಷ್ಟು ಮೊತ್ತವನ್ನು ಸಹಾಯಧನವಾಗಿ ನೀಡಲಾಗುತ್ತಿದೆ. ಈಗಾಗಲೇ ಚಿಕಿತ್ಸೆ ಪಡೆದಿರುವವರು ತಮ್ಮ ಹಳೆಯ ವೈದ್ಯಕೀಯ ವರದಿಗಳನ್ನು ಕಡ್ಡಾಯವಾಗಿ ತರಬೇಕು.
ಮೊದಲ 40 ಮಂದಿಗೆ ಮಾತ್ರ ಅವಕಾಶ:
ಶಿಬಿರದಲ್ಲಿ ನೋಂದಾಯಿಸಿಕೊಳ್ಳುವ ಮೊದಲ 40 ಫಲಾನುಭವಿಗಳಿಗೆ ಮಾತ್ರ ಈ ವಿಶೇಷ ಸೌಲಭ್ಯ ದೊರೆಯಲಿದ್ದು, ಅಂತರರಾಷ್ಟ್ರೀಯ ಸಂಸ್ಥೆಗಳಲ್ಲಿ ಅನುಭವ ಪಡೆದಿರುವ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ನಡೆಸಲಿದ್ದಾರೆ.
ಸಾರ್ವಜನಿಕರಿಗೆ ಮನವಿ:
ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರು ಹಾಗೂ ಅವರ ಕುಟುಂಬದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎಲ್. ಯೋಗೇಶ್ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 8951804399 (ವಾಟ್ಸ್ಆಪ್) ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




